Homeಮುಖಪುಟಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು;...

ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

- Advertisement -
- Advertisement -

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ವಿಜಯಗಳಿಸಿದ ನಂತರ ದುಷ್ಕರ್ಮಿಗಳ ತಂಡವೊಂದು ಮಸೀದಿಯ ಮುಂದೆ ತೆರಳಿ ರಂಝಾನ್‌ನ ವಿಶೇಷ ಪ್ರಾರ್ಥನೆ (ತರಾವೀಹ್) ನಡೆಸುತ್ತಿದ್ದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯ ಅಂಬೇಡ್ಕರ್ ನಗರ – ಮೋವ್‌ ಪಟ್ಟಣದಲ್ಲಿ ನಡೆದಿದೆ. ಇತರ ನಂತರ ಪ್ರದೇಶದಲ್ಲಿ ಕೋಮು ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ

ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಜನರು ಗಾಯಗೊಂಡಿದ್ದು, ಕೆಲವರಿಗೆ ಮೂಳೆ ಮುರಿತಗಳು ಉಂಟಾಗಿದೆ ಎಂದು ವರದಿ ಹೇಳಿದೆ. ಗಲಭೆಕೋರರನ್ನು ನಿಭಾಯಿಸುವಾಗ ಕೆಲವು ಪೊಲೀಸ್ ಸಿಬ್ಬಂದಿಗೆ ಕೂಡಾ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ರಾತ್ರಿ 10.45 ರ ಸುಮಾರಿಗೆ ದುಷ್ಕರ್ಮಿಗಳ ತಂಡವು ಜಾಮಿಯಾ ಮಸೀದಿ ಬಳಿ ತಲುಪಿದ್ದು, ಈ ವೇಳೆ ಪಟಾಕಿಗಳನ್ನು ಸಿಡಿಸಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯದ ವೇಳೆ ಮಸೀದಿಯಲ್ಲಿ ಮುಸ್ಲಿಮರು ರಂಝಾನಿನ ವಿಶೇಷ ಪ್ರಾರ್ಥನೆ ನಡೆಸುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವಿನ ಮಾತಿನ ಚಕಮಕಿ ಉಂಟಾಗಿದ್ದು, ನಂತರ ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ

ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ ಆ ಪ್ರದೇಶ ಮತ್ತು ನೆರೆಯ ಸ್ಥಳಗಳಲ್ಲಿ ಹಲವಾರು ವಾಹನಗಳನ್ನು ಸುಟ್ಟುಹಾಕಿದೆ. ಇದರ ನಂತರ ಪಟ್ಟಿ ಬಜಾರ್, ಮಾರ್ಕೆಟ್ ಚೌಕ್, ಮನಕ್ ಚೌಕ್, ಸಬ್ಜಿ ಮಾರ್ಕೆಟ್, ಗಫರ್ ಹೋಟೆಲ್ ಮತ್ತು ಕನ್ನಾಟ್ ರಸ್ತೆ ಸೇರಿದಂತೆ ಜಾಮಿಯ ಮಸೀದಿ ಪ್ರದೇಶದ ಪಕ್ಕದ ಪ್ರದೇಶಗಳಿಂದ ಕಲ್ಲು ತೂರಾಟ ಮತ್ತು ವಾಹನಗಳಿಗೆ ಹಾನಿ ಮಾಡಿದ ಘಟನೆ ನಡೆದಿವೆ ಎಂದು ವರದಿಯಾದೆ.

ಕನಿಷ್ಠ ನಾಲ್ಕು ಪೊಲೀಸ್ ಠಾಣೆ ಪ್ರದೇಶಗಳ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕಾರ್ಯಾಚರಣೆಗೆ ಇಳಿದಿದ್ದು, ಅದಾಗ್ಯೂ, ಗಲಭೆಕೋರರು ವಾಹನಗಳಿಗೆ ಹಾನಿ ಅಥವಾ ಬೆಂಕಿ ಹಚ್ಚಿದ್ದಾರೆ. ಜೊತೆಗೆ ಗಲಭೆಕೋರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ.

“ಸುಮಾರು 7-8 ವಾಹನಗಳನ್ನು ಗಲಭೆಕೋರರು ಸುಟ್ಟುಹಾಕಿದರು ಮತ್ತು ಕಲ್ಲು ತೂರಾಟ ಕೂಡ ಹಲವಾರು ಸ್ಥಳಗಳಿಂದ ವರದಿಯಾಗಿದೆ. ಆದರೆ ಪ್ರಮುಖ ಹಿಂಸಾಚಾರ ಹೆಚ್ಚಾಗಿ ಪಟ್ಟಿ ಬಜಾರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಂಭವಿಸಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ಹಿಂಸಾಚಾರ ಪ್ರಾರಂಭವಾದ ಪ್ರದೇಶದಲ್ಲಿ ಬಲಪ್ರಯೋಗ ಮತ್ತು ಅಶ್ರುವಾಯು ಶೆಲ್‌ಗಳ ಮೂಲಕ ಹಿಂಸಾತ್ಮಕ ಗುಂಪನ್ನು ಚದುರಿಸಲಾಯಿತು. ಪರಿಸ್ಥಿತಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ” ಎಂದು ಮೋವ್ ಹೆಚ್ಚುವರಿ ಎಸ್‌ಪಿ ರೂಪೇಶ್ ದ್ವಿವೇದಿ ಹೇಳಿದ್ದಾರೆ.

ಒಂದು ಪ್ರದೇಶದಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿ ಮಾಡುತ್ತಿರುವ ದೃಶ್ಯಗಳು ತಡರಾತ್ರಿ ವೈರಲ್ ಆಗಿವೆ.

ಭಾನುವಾರ-ಸೋಮವಾರ ರಾತ್ರಿ ಮೋವ್ ಪಟ್ಟಣವನ್ನು ತಲುಪಿದ ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್, “ಮೋವ್‌ ಸಂಪೂರ್ಣ ಶಾಂತಿಯುತವಾಗಿದ್ದು, ಸಹಜ ಸ್ಥಿತಿ ಮರಳಿದೆ. ಸರಣಿ ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ನಾವು ವೀಡಿಯೊಗಳ ಮೂಲಕ ಗುರುತಿಸುತ್ತಿದ್ದೇವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ ಇದೀಗ, ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಬಿಜೆಪಿ ಶಾಸಕಿ ಮತ್ತು ಮಾಜಿ ಸಂಸದ ಸಚಿವೆ ಉಷಾ ಠಾಕೂರ್, “ಬಂದಾ ಬಸ್ತಿ ಆಗಿರಲಿ, ಹೈದರಾಬಾದ್ ಬಸ್ತಿ ಆಗಿರಲಿ ಅಥವಾ ಜಾಮಿಯಾ ಮಸೀದಿ ಪ್ರದೇಶವಾಗಲಿ, ದೇಶದ್ರೋಹಿಗಳನ್ನು ಮೋವ್‌ನಲ್ಲಿ ತಮ್ಮ ಕೊಳಕು ತಲೆ ಎತ್ತಲು ಬಿಡುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿದವರನ್ನು ವಿಡಿಯೊದಲ್ಲಿ ಗುರುತಿಸಿ ಅವರ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವಂತೆ ನಾವು ರಾಜ್ಯದ ಮುಖ್ಯಮಂತ್ರಿಯನ್ನು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ. ಸಂಸದೆ ಉಷಾ ಅವರು ಬಿಜೆಪಿಯ ಕಟ್ಟರ್ ಹಿಂದುತ್ವ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ.

ಪಶ್ಚಿಮ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೋವ್ ಉಪವಿಭಾಗವು ಪ್ರಮುಖ ಮಿಲಿಟರಿ ಕಂಟೋನ್ಮೆಂಟ್ ನೆಲೆಯನ್ನು ಹೊಂದಿರುವುದರಿಂದ, ಸೇನಾ ಸಿಬ್ಬಂದಿ ಕೂಡ ತಡರಾತ್ರಿ ಟ್ರಕ್‌ನಲ್ಲಿ ಕೆಲವು ಪ್ರದೇಶಗಳನ್ನು ಭದ್ರತೆಗೆ ಒಳಪಡಿಸುತ್ತಿರುವುದು ಕಂಡುಬಂದಿದೆ.

ಇಂದೋರ್ ಗ್ರಾಮೀಣ ಶ್ರೇಣಿಯ (ಐಜಿ-ಇಂದೋರ್ ಗ್ರಾಮೀಣ) ಇನ್ಸ್‌ಪೆಕ್ಟರ್ ಜನರಲ್ ಅನುರಾಗ್ ಪ್ರಕಾರ, “17 ಹೆಸರಿಸಲಾದ ವ್ಯಕ್ತಿಗಳು ಮತ್ತು ಅನೇಕ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಗಲಭೆಗೆ ಸಂಬಂಧಿಸಿದಂತೆ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವರದಿಯಾಗಿದೆ.

ಡಾ. ಅಂಬೇಡ್ಕರ್ ನಗರ-ಮೋವ್ ಪಟ್ಟಣವು ಮುಖ್ಯವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಥಳ ಮತ್ತು ದೇಶದ ರಕ್ಷಣಾ ಸ್ಥಾಪನೆಯ ಪ್ರಮುಖ ಸ್ಥಳವಾಗಿದೆ. ಇಲ್ಲಿ ಮೂರು ಪ್ರಮುಖ ರಕ್ಷಣಾ ತರಬೇತಿ ಸಂಸ್ಥೆಗಳಾದ ಆರ್ಮಿ ವಾರ್ ಕಾಲೇಜು, ಇನ್ಫಂಟ್ರಿ ಶಾಲೆ ಮತ್ತು ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ ಸಂಸ್ಥೆಗಳನ್ನು ಹೊಂದಿದೆ.

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶೀಘ್ರದಲ್ಲೇ ಮೋವ್‌ಗೆ ಆಗಮಿಸಲಿದ್ದು, ಇದರಿಂದಾಗಿ ಮೋವ್‌ನಲ್ಲಿರುವ ಸಂಪೂರ್ಣ ಸೇನಾ ಸಂಸ್ಥೆಗಳು ಕೂಡಾ ಹೆಚ್ಚಿನ ಜಾಗರೂಕತೆಯಲ್ಲಿದೆ ಎಂದು ಮೂಲಗಳು ಹೇಳಿವೆ.

ಆಡಳಿತಾರೂಢ ಬಿಜೆಪಿ ಮತ್ತು ಆರೆಸ್ಸೆಸ್‌ ಸಂಘಟನೆಗಳ ಭದ್ರಕೋಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಮೋವ್ ನಗರ ಕೂಡಾ ಒಂದಾಗಿದೆ. ಡಾ. ಅಂಬೇಡ್ಕರ್ ನಗರ-ಮೋವ್ ವಿಧಾನಸಭಾ ಕ್ಷೇತ್ರವನ್ನು 2008 ರಿಂದ ಬಿಜೆಪಿ ಪಕ್ಷ ಗೆಲ್ಲುತ್ತಿದೆ. 2014 ರಿಂದ ಧಾರ್-ಎಸ್‌ಟಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸತತ ಮೂರು ಗೆಲುವು ಸಾಧಿಸುವಲ್ಲಿ ಈ ವಿಧಾನಸಭಾ ಸ್ಥಾನವು ಪ್ರಮುಖ ಪಾತ್ರ ವಹಿಸಿದೆ.

ಸುಮಾರು ಒಂದು ವರ್ಷದ ಹಿಂದೆಯೆ ಧಾರ್ಮಿಕ ಮೆರವಣಿಗೆಗಳು ಪೂಜಾ ಸ್ಥಳಗಳ ಮೂಲಕ ಸಂಚರಿಸದಂತೆ ನೋಡಿಕೊಳ್ಳಲು ಎರಡೂ ಸಮುದಾಯಗಳ (ಹಿಂದೂಗಳು ಮತ್ತು ಮುಸ್ಲಿಮರು) ನಾಯಕರ ನಡುವೆ ಒಮ್ಮತದ ಒಪ್ಪಂದವಾಗಿತ್ತು ಎಂದು ಮೂಲಗಳು ಹೇಳಿವೆ.

ಈ ಮಧ್ಯೆ, ಪಶ್ಚಿಮ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಮೋವ್ ಪಟ್ಟಣದಿಂದ ಸುಮಾರು 65 ಕಿ.ಮೀ ದೂರದ ಸಯಾಜಿ ಗೇಟ್ ಬಳಿ ಕೂಡಾ, ಭಾನುವಾರ ತಡರಾತ್ರಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ ಮೆರವಣಿಯ ಕೆಟ್ಟ ತಿರುವು ಪಡೆದುಕೊಂಡಿದೆ. ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಕೆಲವು ದುಷ್ಕರ್ಮಿಗಳು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಘಟನೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...