Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...