Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...