Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...