Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...