Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...