Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...