Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...