Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

ಮಧ್ಯಪ್ರದೇಶ: ಬುಡಕಟ್ಟು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ ಬಜರಂಗದಳ ಸದಸ್ಯ

- Advertisement -
- Advertisement -

ಮಧ್ಯಪ್ರದೇಶ ರಾಜ್ಯದ ರಾಜಧಾನಿ ಭೋಪಾಲ್‌ನಿಂದ ಸುಮಾರು 178 ಕಿಲೋಮೀಟರ್ ದೂರದಲ್ಲಿರುವ ಮಧ್ಯಪ್ರದೇಶದ ಬೇತುಲ್‌ನಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ‘ಮುರ್ಗ್’ (ಕೋಳಿ ಭಂಗಿ ಶಿಕ್ಷೆ) ಪೋಸ್ ನೀಡುವಂತೆ ಒತ್ತಾಯಿಸಲಾಗಿದೆ. ಸಂತ್ರಸ್ತನನ್ನು ರಾಜು ಉಯಿಕೆ ಎಂದು ಗುರುತಿಸಲಾಗಿದೆ. ಆರೋಪಿ ಚಂಚಲ್ ರಜಪೂತ್ ಬಜರಂಗದಳದ ಸದಸ್ಯನಾಗಿದ್ದು, ಆತನ ನೇತೃತ್ವದ ಗುಂಪಿನ ಸದಸ್ಯರು ಬುಡಕಟ್ಟು ವ್ಯಕ್ತಿಯನ್ನು ದೈಹಿಕ ಹಿಂಸಿಸಿ, ಜಾತಿ ನಿಂದನೆ ಮಾಡಿದ್ದಾರೆ.

ಬೇತುಲ್‌ ನಗರದ ಸುಭಾಷ್ ಶಾಲೆಯ ಬಳಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗಿರುವ ದೃಶ್ಯಾವಳಿಗಳು ಮನಕಲಕುವಂತಿದ್ದು, ನೆಡಟ್ಡಿಗರು ಆಕ್ರೋಶ ವ್ಯಕ್ತಪಡಿಡಸಿದ್ದಾರೆ.

ರಾಜು ಉಯಿಕೆಯನ್ನು ಕೀಳು ಭಂಗಿಯಲ್ಲಿ ಉಳಿತುಕೊಳ್ಳುವಂತೆ ಬಲವಂತಪಡಿಸಲಾಗಿದೆ. ನಂತರ, ಚಂಚಲ್ ರಜಪೂತ್ ಮತ್ತು ಇತರ ಮೂವರು ಆತನ ತಲೆರ ಬಾಯಿಗೆ ರಕ್ತ ಬರುವಂತೆ ಥಳಿಸಿರುವುದು ವೀಡಿಯೋದಲ್ಲಿ ಕಾಣಬಹುದು. ರಾಜು ಬಾಯಿಂದ ರಕ್ತಸ್ರಾವವಾಗುತ್ತಿದ್ದರೂ ದಾಳಿಕೋರರು ತಮ್ಮ ಅಮಾನುಷ ಹಲ್ಲೆಯನ್ನು ಮುಂದುವರಿಸಿದ್ದಾರೆ.

ಡಿಜೆ ಆಗಿ ಕೆಲಸ ಮಾಡುತ್ತಿರುವ ರಾಜು ಅವರು ನೋವಿನ ಅನುಭವವನ್ನು ವಿವರಿಸಿದ್ದಾರೆ. ‘ರಾತ್ರಿ 11:30 ರ ಸುಮಾರಿಗೆ ನಾನು ಮನೆಗೆ ಹೋಗುತ್ತಿದ್ದಾಗ ಸುಭಾಷ್ ಶಾಲೆಯ ಬಳಿ ಚಂಚಲ್ ರಜಪೂತ್ ಮತ್ತು ಅವರ ಬಜರಂಗದಳದ ಸ್ನೇಹಿತರು ನನ್ನನ್ನು ಕರೆದೊಯ್ದರು. ಅವರು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನನ್ನ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಅವರ ಟ್ವೀಟ್ ನೋಡಿದ ಪೊಲೀಸರು ತಕ್ಷಣ ದೂರು ದಾಖಲಿಸಿಕೊಂಡಿದ್ದಾರೆ. ಚಂಚಲ್ ರಜಪೂತ್ ಮತ್ತು ಇತರ ಮೂವರು ಆರೋಪಿಗಳ ವಿರುದ್ಧ ತ್ವರಿತವಾಗಿ ಎಫ್‌ಐಆರ್ ದಾಖಲಿಸಿದರು. ಘಟನೆ ಶನಿವಾರ ನಡೆದಿರುವುದಾಗಿ ಬೆತುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಚೌಧರಿ ಖಚಿತಪಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಆರೋಪಿಗಳ ಪತ್ತೆಗೆ ತೀವ್ರ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪಟ್ವಾರಿ, ‘ಒಂದೆಡೆ, ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಬುಡಕಟ್ಟು ಜನರ ಉನ್ನತಿ ಮತ್ತು ಗೌರವದ ಬಗ್ಗೆ ಸುಳ್ಳುಗಳನ್ನು ಮಾತನಾಡುತ್ತಾರೆ! ಇನ್ನೊಂದೆಡೆ, ಬುಡಕಟ್ಟು ಸಹೋದರ ರಾಜ್ ಉಯಿಕೆಯನ್ನು ಹಿಂಸಿಸುತ್ತಿರುವ ಬೇತುಲ್ ಬಜರಂಗದಳ ಬೆಂಬಲಿಗರು! ಪ್ರಧಾನಿ ಇಲ್ಲ! ಆದರೆ, ಈಗ ಬಿಜೆಪಿಯ ಬುಡಕಟ್ಟು ಗೌರವದ ಸತ್ಯವನ್ನು ನೀವು ನಿಮ್ಮ ಕಣ್ಣುಗಳಿಂದ ನೋಡುತ್ತೀರಿ! ನ್ಯಾಯದಲ್ಲಿ ನಂಬಿಕೆ ಕಳೆದುಕೊಳ್ಳುವಷ್ಟು ದಬ್ಬಾಳಿಕೆ ಮಾಡಬೇಡಿ’ ಎಂದು ಬರೆದಿದ್ದಾರೆ.

ಇದನ್ನೂ ಓದಿ; ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...