Homeಮುಖಪುಟಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ 'ಲವ್ ಜಿಹಾದ್' ತನಿಖೆಗೆ ಎಸ್‌ಐಟಿ ರಚನೆ!

ಮಧ್ಯಪ್ರದೇಶ | ಬಿಜೆಪಿ ಪ್ರೇರಿತ ಕಟ್ಟುಕತೆ ‘ಲವ್ ಜಿಹಾದ್’ ತನಿಖೆಗೆ ಎಸ್‌ಐಟಿ ರಚನೆ!

- Advertisement -
- Advertisement -

ಮಧ್ಯಪ್ರದೇಶದಲ್ಲಿ “ಲವ್ ಜಿಹಾದ್” ಪ್ರಕರಣಗಳ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಅಂತಹ ಯಾವುದೇ ಪ್ರಕರಣವನ್ನು ಸಹಿಸಲಾಗುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ಮಧ್ಯಪ್ರದೇಶ

“ಲವ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರೇರಿತ ಕಾಲ್ಪನಿಕ ಕಟ್ಟುಕತೆಯಾಗಿದೆ. ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಪ್ರೇಮಿಸಿ ಮೋಸಗೊಳಿಸಿ ಅಂತಿಮವಾಗಿ ಅವರನ್ನು ಇಸ್ಲಾಂಗೆ ಮತಾಂತರಿಸುವ ಸಂಘಟಿತ ಸಂಚು ಮಾಡುತ್ತಿದ್ದಾರೆ ಎಂದು ಇದರಲ್ಲಿ ಆರೋಪಿಸಲಾಗುತ್ತದೆ.

ಅದಾಗ್ಯೂ, ಇಂತಹ ಯಾವುದೇ ಪ್ರಕರಣ ಈ ವರೆಗೆ ದಾಖಲಾಗಿಲ್ಲ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸಲು ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ಭೋಪಾಲ್‌ನಲ್ಲಿ ನಡೆದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರು ಏಪ್ರಿಲ್‌ನಲ್ಲಿ ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ವೀಡಿಯೊಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಪೊಲೀಸರ ಪ್ರಕಾರ, ಈ ವಿಷಯದಲ್ಲಿ ಆರೋಪಿಗಳು ತಮ್ಮ ಧಾರ್ಮಿಕ ಗುರುತನ್ನು ಮರೆಮಾಡಿ ನಂತರ ತಮ್ಮ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಈ ಪ್ರಕರಣದ ನಂತರ ಭೋಪಾಲ್‌ನಲ್ಲಿ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಪ್ರತಿಭಟನೆಗೆ ನಡೆಸಿದ್ದು, ಅವರು ಈ ಅಪರಾಧವನ್ನು “ಲವ್ ಜಿಹಾದ್” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪ್ರಕರಣದ ಸಂದರ್ಭದಲ್ಲಿ, ಮಧ್ಯಪ್ರದೇಶ ಪೊಲೀಸ್ ಪ್ರಧಾನ ಕಚೇರಿಯು, ಸಾಮಾಜಿಕವಾಗಿ ದುರ್ಬಲ ಹಿನ್ನೆಲೆಯ ಹುಡುಗಿಯರು ಮತ್ತು ಮಹಿಳೆಯರನ್ನು “ಪ್ರೀತಿಯ ಬಲೆಗೆ ಬೀಳಿಸುವುದು, ವಂಚನೆ, ಬೆದರಿಕೆಗಳು ಅಥವಾ ಇತರ ಪ್ರಚೋದನೆಗಳಂತಹ ತಂತ್ರಗಳ ಮೂಲಕ ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡಿದ್ದಾರೆ. ಇದು ಅವರ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಶೋಷಣೆಗೆ ಕಾರಣವಾಗುತ್ತದೆ” ಎಂದು ಗುಪ್ತಚರ ಮಾಹಿತಿಗಳನ್ನು ಹೊಂದಿದೆ ಎಂದು ಹೇಳಿದೆ.

ಸಂತ್ರಸ್ತ ಹುಡುಗಿಯರು ಮತ್ತು ಮಹಿಳೆಯರನ್ನು ಭಯ, ಒತ್ತಡ ಅಥವಾ ವಂಚನೆಯ ಮೂಲಕ ತಮ್ಮನ್ನು ಮತಾಂತರಿಸಲಾಗುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. “ಇಂತಹ ಘಟನೆಗಳು ಸಮಾಜದಲ್ಲಿ ಅಪರಾಧ ಮಾತ್ರವಲ್ಲ, ಮಹಿಳೆಯರ ಘನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಗಂಭೀರ ಸವಾಲನ್ನು ಒಡ್ಡುತ್ತವೆ” ಎಂದು ಪೊಲೀಸರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಲವಂತದ ಮತಾಂತರದ ಆಪಾದಿತ ಘಟನೆಗಳನ್ನು ಗುರುತಿಸುವ ಮತ್ತು ತನಿಖೆ ಮಾಡುವ, ಭಾಗಿಯಾಗಿರಬಹುದಾದ ವ್ಯಕ್ತಿಗಳು ಮತ್ತು ಗುಂಪುಗಳನ್ನು ಪತ್ತೆಹಚ್ಚುವ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕಾರ್ಯವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ.

ಬಲವಂತದ ಧಾರ್ಮಿಕ ಮತಾಂತರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಅಂತರರಾಜ್ಯ ಅಥವಾ ಅಂತರರಾಷ್ಟ್ರೀಯ ಜಾಲಗಳನ್ನು ಸಹ ತಂಡವು ತನಿಖೆ ಮಾಡುತ್ತದೆ ಮತ್ತು ತಡೆಗಟ್ಟುವ ಕ್ರಮಗಳನ್ನು ಶಿಫಾರಸು ಮಾಡುತ್ತದೆ.

ಭೋಪಾಲ್ (ಗ್ರಾಮೀಣ) ಪೊಲೀಸ್ ಮಹಾನಿರ್ದೇಶಕರು ವಿಶೇಷ ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ತಂಡದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಪ್ರಧಾನ ಕಚೇರಿ), ಮಹಿಳಾ ಸುರಕ್ಷತಾ ಶಾಖೆಯ ಸಹಾಯಕ ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಸೈಬರ್ ಸೆಲ್‌ನ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಇರುತ್ತಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ತಮಿಳುನಾಡು| ಎರಡು ಸಮುದಾಯಗಳ ನಡುವೆ ಘರ್ಷಣೆ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...