ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿದೆ.
ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆಗಿದ್ದು, ಆರೋಪಿ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.
In the state of Madhya Pradesh, India, a representative of the Bharatiya Janata Party (BJP) named Pravesh Shukla, who belongs to the upper caste Hindu community and is associated with MLA Kedarnath Shukla, committed a deplorable act by urinating on a young tribal individual.… pic.twitter.com/gMHTs8C6Xd
— Eagle Eye (@zarrar_11PK) July 4, 2023
ಆರೋಪಿಯನ್ನು ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾ ಅವರ ಬೆಂಬಲಿಗ ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದೆ.
ಕಾಂಗ್ರೆಸ್ ವಕ್ತಾರ ಅಬ್ಬಾಸ್ ಹಫೀಜ್ ಟ್ವಿಟರ್ನಲ್ಲಿ ಆ ವೀಡಿಯೊವನ್ನು ಹಂಚಿಕೊಂಡಿದ್ದು, “ಆದಿವಾಸಿಗಳ ಹಿತಾಸಕ್ತಿಗಳ ಬಗ್ಗೆ ಸುಳ್ಳು ಮಾತನಾಡುವ ಬಿಜೆಪಿ ನಾಯಕರು ಬುಡಕಟ್ಟು ಜನಾಂಗದ ಬಡವರ ಮೇಲೆ ಈ ರೀತಿ ನಡೆದುಕೊಳ್ಳುತ್ತಿರುವುದು ಖಂಡನೀಯ” ಎಂದಿದ್ದಾರೆ.
आदिवासियों के हितों की झूठी बात करने वाली भाजपा का नेता एक आदिवासी ग़रीब व्यक्ति के ऊपर इस तरह पैशाब कर रहा है।
अति निंदनीय कृत्य।@ChouhanShivraj जी यह है आपका आदिवासी प्रेम?? इस जंगलराज को क्या कहें और भाजपा नेता की गिरफ़्तारी क्यूँ नहीं हुई ?आरोपी का नाम प्रवेश शुक्ला बताया… pic.twitter.com/ZwgeaYza5R
— Abbas Hafeez (@AbbasHafeez) July 4, 2023
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಟ್ಯಾಗ್ ಮಾಡಿರುವ ಅವರು “ಇದು ನಿಮ್ಮ ಬುಡಕಟ್ಟು ಪ್ರೀತಿಯೇ? ಇದನ್ನು ಜಂಗಲ್ ರಾಜ್ ಎನ್ನದೇ ಮತ್ತೆ ಏನೆಂದು ಕರೆಯಬೇಕು? ಈ ದುಷ್ಕೃತ್ಯ ಎಸಗಿದ ಬಿಜೆಪಿ ನಾಯಕನನ್ನು ಏಕೆ ಬಂಧಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.
ಆರೋಪಿಯ ಹೆಸರನ್ನು ಪ್ರವೇಶ್ ಶುಕ್ಲಾ ಎಂದು ಹೇಳಲಾಗುತ್ತಿದೆ, ಅವರು ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾರವರ ಬೆಂಬಲಿಗ ಕಾರ್ಯಕರ್ತರಾಗಿದ್ದಾರೆ. ಆತ ಹಿರಿಯ ಬಿಜೆಪಿ ನಾಯಕರೊಂದಿಗೆ ತೆಗೆಸಿಕೊಂಡಿರುವ ಫೋಟೊಗಳಿವೆ ಎಂದು ಅಬ್ಬಾಸ್ ಹಫೀಜ್ ತಿಳಿಸಿದ್ದಾರೆ.
#Dalits & BJP in #NayaBharat !
BJP Leader & BJP MLA Kedar Nath Shukla's Representative, Pravesh Shukla is seen Urinating on a Tribal Youth's Face in Sidhi district of BJP ruled Madhya Pradesh.
BJP Leader's Photographs with other BJP Leaders are also shared Below#MadhyaPradesh pic.twitter.com/TXNmDOaf5O
— Syed Rafi – నేను తెలుగు 'వాడి'ని. (@syedrafi) July 4, 2023
ಯಾವ ಕಾರಣಕ್ಕಾಗಿ ಈ ಅಮಾನುಷ ಕೃತ್ಯ ಎಸಗಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಸಬೇಕೆಂದು ನೆಟ್ಟಿಗರು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ರವರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಜಾತಿಗಣತಿ ವರದಿ ಬಿಡುಗಡೆಗೆ ವಿರೋಧ ಸರಿಯೇ?