Homeಮುಖಪುಟಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರ

ಮಧ್ಯಪ್ರದೇಶ: ಆದಿವಾಸಿ ಯುವಕನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕನ ಪುತ್ರ

- Advertisement -
- Advertisement -

ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಪುತ್ರ ಗುಂಡು ಹಾರಿಸಿದ್ದರಿಂದ 34 ವರ್ಷದ ಆದಿವಾಸಿ ಯುವಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದಿದ್ದಾರೆ.

ಘಟನೆಯ ನಂತರ ಪೊಲೀಸರು ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯರವರ ಪುತ್ರ 40 ವರ್ಷದ ವಿವೇಕಾನಂದ ವೈಶ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಮೊರ್ಬಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಸಿಂಗ್ ಪರಿಹಾರ್ ತಿಳಿಸಿದ್ದಾರೆ.

ಬಿಜೆಪಿ ಶಾಸಕ ರಾಮ್ ಲಲ್ಲು ವೈಶ್ಯರವರು ಸಿಂಗ್ರೌಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಪುತ್ರ ಕ್ಷುಲ್ಲಕ ವಿಷಯಕ್ಕೆ ಗಲಾಟೆ ನಡೆದಿದ್ದರಿಂದ ಕುಪಿತಗೊಂಡು ಸೂರ್ಯ ಕುಮಾರ್ ಖೈರಿವಾರ್ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತ ಖೈರಿವಾರ ಬಲ ತೋಳಿಗೆ ಗುಂಡೇಟು ಬಿದ್ದಿದ್ದು ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಪರಿಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.

ವಿವೇಕಾನಂದ ವೈಶ್ಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 307 (ಕೊಲೆಗೆ ಯತ್ನ) ಮತ್ತು ಸೆಕ್ಷನ್ 25 (ಯಾವುದೇ ನಿಷೇಧಿತ ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಅಥವಾ ಸಾಗಿಸುವುದು) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ 27 (ಶಸ್ತ್ರಾಸ್ತ್ರ, ಮದ್ದುಗುಂಡುಗಳ ಬಳಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಪರಿಹಾರ್ ತಿಳಿಸಿದ್ದಾರೆ.

ವೈಶ್ಯ ಪ್ರಸ್ತುತ ಮತ್ತೊಂದು ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾನೆ. ಕಳೆದ ವರ್ಷ ಜುಲೈನಲ್ಲಿ ಅವರು ಅರಣ್ಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಪ್ರಸ್ತುತ ಪ್ರಕರಣದಲ್ಲ ಸಂತ್ರಸ್ತ ಬುಡಕಟ್ಟು ಸಮುದಾಯಕ್ಕೆ ಸೇರಿದ್ದರೂ ಆರೋಪಿಯ ಮೇಲೆ ಏಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಏಕೆ ಪ್ರಕರಣ ದಾಖಲಿಸಲಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿರುವ ಪೊಲೀಸರು, ಸಂತ್ರಸ್ತನು ಬುಡಕಟ್ಟು ಜನಾಂಗದವರೆಂದು ಬಹಿರಂಗಪಡಿಸಲು ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದರೆ ಆಗ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಇದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ವರ್ಷ ಜುಲೈ 20 ರಂದು ಬಿಜೆಪಿ ಶಾಸಕರ ಪುತ್ರ ವೈಶ್ಯ ಅರಣ್ಯ ಸಿಬ್ಬಂದಿ ಸಂಜೀವ್ ಶುಕ್ಲಾ ಅವರನ್ನು ಬೆದರಿಸಲು ಗುಂಡು ಹಾರಿಸಿದ್ದರು. ಆ ಘಟನೆಯ ನಂತರ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸ್ವಲ್ಪ ಸಮಯದವರೆಗೆ ನಾಪತ್ತೆಯಾಗಿದ್ದ ಆತ ಈ ವರ್ಷದ ಫೆಬ್ರವರಿಯಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಶರಣಾಗಿದ್ದ. ಆನಂತರ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ. ಈಗ ಮತ್ತೊಬ್ಬರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಂಗಳ ಹಿಂದೆಯಷ್ಟೇ ಮಧ್ಯಪ್ರದೇಶದಲ್ಲಿ ಆದಿವಾಸಿ ವ್ಯಕ್ತಿಯ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ನಡೆದಿತ್ತು. ಆನಂತರ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಯ ಮನೆ ಧ್ವಂಸಕ್ಕೆ ಆದೇಶಿಸಿದ್ದರು ಮತ್ತು ಸಂತ್ರಸ್ತನ ಪಾದ ತೊಳೆದಿದ್ದರು.

ಇದನ್ನೂ ಓದಿ: 10 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಪ್ರಾಂಶುಪಾಲನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...