Homeಮುಖಪುಟಇಂದು ಮಧ್ಯಪ್ರದೇಶ, ಛತ್ತೀಸಗಢ ವಿಧಾನಸಭಾ ಚುನಾವಣೆಯ ಮತದಾನ

ಇಂದು ಮಧ್ಯಪ್ರದೇಶ, ಛತ್ತೀಸಗಢ ವಿಧಾನಸಭಾ ಚುನಾವಣೆಯ ಮತದಾನ

- Advertisement -
- Advertisement -

ಐದು ರಾಜ್ಯಗಳ ಪೈಕಿ ಅತ್ಯಂತ ‘ಹೈವೊಲ್ವೇಜ್’ ಚುನಾವಣೆ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಶುಕ್ರವಾರ ಮುಂಜಾನೆ ಆರಂಭವಾಗಿದೆ. ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹುತೇಕ ನೇರ ಸ್ಪರ್ಧೆ ಇದೆ..

ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳಿಗೆ ಹಾಗೂ ಛತ್ತೀಸಗಢ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 90 ಸ್ಥಾನಗಳ ಪೈಕಿ 70 ಕ್ಷೇತ್ರಗಳಲ್ಲಿ ಮತದಾನ ಬೆಳಿಗ್ಗೆ 7ಕ್ಕೆ ಆರಂಭವಾಗಿದೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಮಲನಾಥ್ ಸೇರಿದಂತೆ 2533 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಮಧ್ಯಪ್ರದೇಶದಲ್ಲಿ ಅಳುವ ಬಿಜೆಪಿ ಮತ್ತು ವಿರೋಧಪಕ್ಷ ಕಾಂಗ್ರೆಸ್ ನಡುವೆ ತೀವ್ರ ತುರುಸಿನ ಸ್ಪರ್ಧೆ ನಡೆದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಮೋದಿ ನಾಮಬಲ ಹಿಂದುತ್ವ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಪಣಕ್ಕಿಟ್ಟರೆ, ‘ಆಪರೇಷನ್ ಕಮಲ’ದಿಂದ ಮೂರುವರೆ ವರ್ಷಗಳ ಹಿಂದೆ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಪಕ್ಷ ಆಡಳಿತ ವಿರೋಧಿ ಅಲೆಯನ್ನೇ ನಂಬಿಕೊಂಡಿದೆ. ಬಿಜೆಪಿ ಪುನಃ ಅಧಿಕಾರ ಹಿಡಿಯುತ್ತದೆಂದು ನಿಶ್ಚಿತವಾಗಿ ಹೇಳುವ ಸ್ಥಿತಿ ಇಲ್ಲ. 18 ವರ್ಷಗಳ ಆಡಳಿತದ ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಅವರ ಸಾಂಪ್ರದಾಯಿಕ ಬೆಂಬಲಿಗರು ನಿಧಾನಕ್ಕೆ ಕೈಕೊಡಲಾರಂಭಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆಗಿಂತ ಚೌಹಾಣ್ ವಿರೋಧಿ ಅಲೆಯೇ ಬಲವಾಗಿದೆ.

ಬಿಜೆಪಿ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆಯ ಬಿಸಿ ಜೋರಾಗಿ ತಟ್ಟಿದೆ. ಇದನ್ನು ಕಡಿಮೆ ಮಾಡಲು ಕಮಲ ಪಡೆಯು ಮಹಿಳೆಯರ ಮನ ಗೆಲ್ಲಲು ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಲಾಡ್ಲಿ ಬೆಹನಾ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 31,250 ಹಣ ವರ್ಗಾಯಿಸುತ್ತಿದೆ. ಮಹಿಳೆಯರ ಖಾತೆಗೆ ಒಂದಷ್ಟು ದುಡ್ಡು ಬಂದಿದೆ. ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೇರಳ ಅನುದಾನ ನೀಡಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದ ಮಾದರಿಯಲ್ಲೇ `ಗ್ಯಾರಂಟಿ’ಗಳನ್ನು ಘೋಷಿಸಿದೆ. ಒಬಿಸಿ ಮತದಾರರೇ ನಿರ್ಣಾಯಕವಾಗಿರುವ ರಾಜ್ಯದಲ್ಲಿ ಜಾತಿ ಗಣತಿಯ ಅಸ್ತ್ರ ಬಿಟ್ಟಿದೆ. ಮೀಸಲಾತಿ ರಾಜಕಾರಣ ಚುನಾವಣೆಗಳ ಆಸುಪಾಸಿನಲ್ಲಿ ತಲೆಯೆತ್ತಿದೆ.

ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಕೇಂದ್ರೀಯ ಪಡೆಗಳ 700ಕ್ಕೂ ಹೆಚ್ಚು ತುಕಡಿಗಳನ್ನು ಮತ್ತು 2 ಲಕ್ಷಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸುಮಾರು 42 ಸಾವಿರ ಮತಗಟ್ಟೆಗಳಲ್ಲಿ ವೆಬಾಸ್ಟಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಮತದಾನ ಮುಂಜಾನೆ 7ರಿಂದ ಸಂಜೆ 6ರವರೆಗೆ ನಡೆಯಲಿದೆ.

ಇದನ್ನೂ ಓದಿ: ದೇವೇಗೌಡರನ್ನೇ ಹೊರಗಿಟ್ಟು ರಾಷ್ಟ್ರೀಯ ಸಮಾವೇಶ ನಡೆಸಿದ ಜೆಡಿಎಸ್ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...