Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...