Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...