Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...