Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...