Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...