Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...