Homeಮುಖಪುಟಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬೇರೊಬ್ಬರ ಕವಿತೆಯನ್ನು ತನ್ನ ಪತ್ನಿ ಬರೆದಿರುವುದಾಗಿ ಹೇಳಿ ಟ್ರೋಲ್‌ಗೊಳಗಾದ ಮಧ್ಯಪ್ರದೇಶ ಸಿಎಂ!

ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಈಗ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ ಎಂದು ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೆಯವರೊಬ್ಬರು ಬರೆದಿರುವ ಕವಿತೆಯನ್ನು ತನ್ನ ಪತ್ನಿ ಬರೆದಿದ್ದಾರೆಂದು ಎಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿರೋಧ ಪಕ್ಷಗಳು ಅವರ ವಿರುದ್ದ “ಕೃತಿಚೌರ್ಯ” ಆರೋಪ ಹೊರಿಸಿದ್ದಾರೆ.

ಶಿವರಾಜ್‌ ಸಿಂಗ್ ಚೌಹಾನ್ ಅವರ ಮಾವ ನವೆಂಬರ್ 18 ರಂದು ನಿಧನರಾಗಿದ್ದರು, ಇದಾಗಿ ನಾಲ್ಕು ದಿನಗಳ ನಂತರ ತಮ್ಮ ಟ್ವಿಟ್ಟರ್‌‌ ಖಾತೆಯಲ್ಲಿ ’ಬಾವುಜಿ’ ಎಂಬ ಹಿಂದಿ ಕವಿತೆಯ ಕೆಲವು ಸಾಲುಗಳನ್ನು ಹಂಚಿಕೊಂಡು ಇದನ್ನು ತಮ್ಮ ಪತ್ನಿ ಸಾಧನಾ ಸಿಂಗ್ ಬರೆದಿದ್ದಾರೆ ಎಂದು ಹೇಳಿಕೊಂಡಿದ್ದರು.

ಆದರೆ, ಮಧ್ಯಪ್ರದೇಶ ಮೂಲದ ಬರಹಗಾರ್ತಿ ಭೂಮಿಕಾ ಬಿರ್ಥಾರೆ, “ಇದು ನನ್ನ ಕವಿತೆ” ಎಂದು ಹೇಳಿಕೊಂಡ ನಂತರ ಸಾಮಾಜಿಕ ಜಾಲತಾಣದಲ್ಲಿ ವಿವಾದವೇರ್ಪಟ್ಟಿದೆ. ಅವರು “ನಾನು ನಿಮ್ಮ ಸೋದರ ಸೊಸೆಯಂತೆ ಇದ್ದೇನೆ. ನನ್ನ ಕವನವನ್ನು ಕದಿಯುವ ಮೂಲಕ ನೀವು ಏನು ಪಡೆಯುತ್ತೀರಿ? ಈ ಕವಿತೆಯನ್ನು ನಾನು ಬರೆದಿದ್ದೇನೆ. ನನ್ನ ಹಕ್ಕುಗಳನ್ನು ನೀವು ಉಲ್ಲಂಘಿಸುವುದಿಲ್ಲ ಎಂದು ಭಾವಿಸುತ್ತೇವೆ. ಸೋದರ ಮಾವ ಇರುವುದು ಹಕ್ಕುಗಳನ್ನು ರಕ್ಷಿಸಲು ತಾನೆ” ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

“ದಯವಿಟ್ಟು ನನಗೆ ಮನ್ನಣೆ ನೀಡಿ ಸರ್. ಈ ಕವಿತೆಯನ್ನು ನಾನು ಬರೆದಿದ್ದೇನೆ ಮತ್ತು ಅದರ ಶೀರ್ಷಿಕೆ ’ಡ್ಯಾಡಿ’  ಎಂದಾಗಿದೆ. ’ಬಾವುಜಿ’ ಅಲ್ಲ. ನನ್ನ ತಂದೆಯ ಮೇಲಿನ ನನ್ನ ಭಾವನೆಗಳಿಗೆ ಅನ್ಯಾಯ ಮಾಡಬೇಡಿ” ಎಂದು ಅವರು ಸರಣಿ ಟ್ವೀಟ್‌ ಮಾಡಿದ್ದಾರೆ.

 

“ನಾನು ನನ್ನ ತಂದೆಯ ಕೊನೆಯ ವಿಧಿಗಳನ್ನು ನಿರ್ವಹಿಸುತ್ತಿದ್ದಾಗ, ನನ್ನ ಫೋನ್‌ನ ನೋಟ್‌ಪ್ಯಾಡ್ ಅನ್ನು ಬಳಸಿ ಇದನ್ನು ಬರೆದಿದ್ದೇನೆ. ಬರೆದಾಗ ದಿನಾಂಕ ಮತ್ತು ಸಮಯವನ್ನು ಉಲ್ಲೇಖಿಸಿದ್ದೇನೆ. ನಂತರ ಅದನ್ನು ನನ್ನ ಕುಟುಂಬದ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದೇನೆ” ಎಂದು ಭೂಮಿಕಾ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ನವೆಂಬರ್ 21 ರಂದು ನಾನು ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದೇನೆ. ಮುಖ್ಯಮಂತ್ರಿಯ ಪತ್ನಿ ಸಾಧನಾ ಸಿಂಗ್ ಅವರು ವಾಟ್ಸಾಪ್ ಗುಂಪಿನಲ್ಲಿ ಕವಿತೆಯನ್ನು ಹಂಚಿಕೊಂಡಿದ್ದಾರೆ ಎಂದು ನನ್ನ ಸ್ನೇಹಿತ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ. ಆದರೆ ಅದರ ನಂತರ ಮುಖ್ಯಮಂತ್ರಿಯವರು ತಮ್ಮ ಹೆಂಡತಿಗೆ ಮನ್ನಣೆ ನೀಡಿ ಕವಿತೆಯನ್ನು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನನಗೆ ತೀವ್ರ ಆಕ್ಷೇಪವಿದೆ… ನೀವು ನನ್ನ ಸೋದರ ಮಾವ ಇದ್ದಂತೆ, ನನ್ನ ನೆಚ್ಚಿನವರು. ಇದನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ನನಗೆ ಬೇಕಾಗಿರುವುದು ನಾನು ಬರೆದದ್ದಕ್ಕೆ ಮನ್ನಣೆ ಮಾತ್ರ” ಎಂದು ಅವರು ಹೇಳಿದ್ದಾರೆ.

ಶಿವರಾಜ್ ಸಿಂಗ್ ಅವರು ಈ ಕೃತ್ಯವನ್ನು ಕಾಂಗ್ರೆಸ್ ಹಿರಿಯ ನಾಯಕ ಅರುಣ್ ಯಾದವ್ ಅವರು ಟೀಕಿಸಿದ್ದು, “ಬಿಜೆಪಿಗರು ಹೆಸರುಗಳನ್ನು ಬದಲಾಯಿಸುವಲ್ಲಿ ಪರಿಣಿತರು. ಈ ಹಿಂದೆ ಅವರು ಕಾಂಗ್ರೆಸ್ ಆಡಳಿತವು ಪರಿಚಯಿಸಿದ ಯೋಜನೆಗಳ ಹೆಸರನ್ನು ಬದಲಾಯಿಸುತ್ತಿದ್ದರು, ಆದರೆ ಈಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬೇರೊಬ್ಬರು ಬರೆದ ಕವಿತೆಯನ್ನು ಅವರ ಹೆಂಡತಿ ಬರೆದಿದ್ದು ಎಂದು ಹೇಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯ ಬಿಜೆಪಿ ಘಟಕ ನಿರಾಕರಿಸಿದ್ದು, ಇದು ಅವರ ವೈಯಕ್ತಿಕ ವಿಷಯ ಎಂದು ಹೇಳಿದೆ ಎಂದು NDTV ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...