Homeಮುಖಪುಟಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಘಟನೆಗೆ ಸಂಬಂಧಪಡದ ಮುಸ್ಲಿಂ ವ್ಯಕ್ತಿಯೊಬ್ಬರ ಮನೆಯೊಂದನ್ನು ಅಧಿಕಾರಿಗಳು ಉರುಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಭೋಪಾಲ್: ಬಲಪಂಥೀಯ ಹಿಂದುತ್ವ ಗುಂಪುಗಳು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮನವಾರ್ ತೆಹಸಿಲ್‌ನಲ್ಲಿ ‘ಶೌರ್ಯ ಯಾತ್ರೆ’ ನಡೆಸಿದ್ದು, ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪೊಲೀಸರ ಸೂಚನೆಗಳಿಗೆ ವಿರುದ್ಧವಾಗಿ ಪ್ರವೇಶಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಆದರೆ ಪೊಲೀಸರು ಆರೋಪಿಗಳಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಿದ್ದಾರೆ. ಮೂವರು ಆರೋಪಿಗಳಿಗೆ ಆಶ್ರಯ ನೀಡಿದರೆಂಬ ಆರೋಪದಿಂದಾಗಿ ಮುಸ್ಲಿಂ ವ್ಯಕ್ತಿಯ ಮನೆಯೊಂದನ್ನು ಧ್ವಂಸಗೊಳಿಸಲಾಗಿದೆ.

ಡಿಸೆಂಬರ್ 23, 2021 ರಂದು, ಹಿಂದುತ್ವ ಗುಂಪುಗಳು DJ ಹಾಡುಗಳೊಂದಿಗೆ ಬೃಹತ್ ‘ಶೌರ್ಯ ಯಾತ್ರೆ’ಯನ್ನು ನಡೆಸಿದವು. ಗಾಂಧಿನಗರ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ತಡೆದರು.

ಪೊಲೀಸರ ಕ್ರಮದಿಂದಾಗಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆ ಪ್ರಾರಂಭವಾಗಿದೆ ಎಂಬ ವದಂತಿ ಹರಡಲು ಕಾರಣವಾಯಿತು. ಈ ಪ್ರದೇಶದಲ್ಲಿ 2016ರಲ್ಲಿ ಇದೇ ರೀತಿಯ ಘರ್ಷಣೆ ನಡೆದಿತ್ತು.

ಜನವರಿ 12, 2016ರಂದು, ಮನವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್‌ನ ‘ಶೌರ್ಯ ಯಾತ್ರೆ’ಯ ಸಂದರ್ಭದಲ್ಲಿ ಕೋಮುಗಲಭೆ ಭುಗಿಲೆದ್ದಿತ್ತು. ಹಿಂಸಾಚಾರದ ಸಮಯದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಹತ್ತಾರು ಅಂಗಡಿಗಳನ್ನು ಸುಟ್ಟು ಹಾಕಲಾಗಿತ್ತು. ಅದೇ ರೀತಿಯ ಪ್ರಕರಣ ಮತ್ತೆ ಮರುಕಳಿಸಿದೆ.

ಗಲಭೆ, ಕೊಲೆ ಯತ್ನ, ಅಪಹರಣ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಧಾರ್ ಪೊಲೀಸರು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ಮನವಾರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಗುರುತಿಸಲ್ಪಟ್ಟ 30 ಮಂದಿ ಹಾಗೂ ಅಪರಿಚಿತ 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹನ್ನೆರಡು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರೆಲ್ಲರೂ ಮುಸ್ಲಿಮರಾಗಿದ್ದಾರೆ.

“ಹಿಂದುತ್ವದ ಗುಂಪು ಮುಸ್ಲಿಮರು ಹೆಚ್ಚು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿತು. ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದರು. ಆದರೆ ಆ ಗುಂಪು ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಲು ಪ್ರಯತ್ನಿಸಿತು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಧಾರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧೀರಜ್ ಪಾಟಿದಾರ್, “ಕಲ್ಲು ತೂರಾಟದಲ್ಲಿ ಗಾಯಗೊಂಡ ಸ್ಥಳೀಯರ ದೂರಿನ ಆಧಾರದ ಮೇಲೆ ಮತ್ತು ಘಟನೆಯ ವಿಡಿಯೋ ತುಣುಕಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತರರನ್ನು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ವ್ಯಕ್ತಿಯ ಮನೆ ಧ್ವಂಸ

ಘಟನೆ ನಡೆದ ಎರಡು ದಿನಗಳ ನಂತರ ಜಿಲ್ಲಾಡಳಿತವು 55 ವರ್ಷದ ಖಲೀಲ್ ಖತ್ರಿ ಅವರ ಮೂರು ಅಂತಸ್ತಿನ ಕಟ್ಟಡವನ್ನು ನೆಲಸಮಗೊಳಿಸಿದೆ. ಒಟ್ಟು 45 ಲಕ್ಷ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮೂವರು ಆರೋಪಿಗಳು ಈ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ನೋಟಿಸ್ ನೀಡಿದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಕಟ್ಟಡಕ್ಕೆ ಅನುಮತಿಯನ್ನು ಪಡೆದುಕೊಳ್ಳಲು ಮಾಲೀಕರು ವಿಫಲರಾಗಿದ್ದರು.

“ಇತ್ತೀಚಿನ ಕಲ್ಲು ತೂರಾಟದ ಘಟನೆಯಲ್ಲಿ ನನ್ನ ಬಾಡಿಗೆದಾರರಲ್ಲಿ ಮೂವರ ಹೆಸರುಗಳು ಸೇರಿದ್ದವು. ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂದು ನಾನು ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯನ್ನು ಜಿಲ್ಲಾಡಳಿತ ಕೆಡವಿದೆ. ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಹತ್ತಿರದ ಎಲ್ಲಾ ಮನೆಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ” ಎಂದು ಖತ್ರಿ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ.

“ನಾನು ಹೆಚ್ಚುವರಿ ಎಸ್‌ಪಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡಿದ್ದೇನೆ. ತೆರವು ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿದ್ದೇನೆ. ನಾನು ಅಗತ್ಯ ಅನುಮತಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದರೆ ‌ಆರೋಪಿಗಳಿಗೆ ಆಶ್ರಯ ನೀಡಿದ್ದಕ್ಕಾಗಿ ಅವರು ನನ್ನನ್ನು ದೂಷಿಸಿದ್ದಾರೆ. ನಾನು ಮುಸ್ಲಿಂ ಎಂಬ ಕಾರಣಕ್ಕೆ ನನ್ನ ಮನೆಯನ್ನು ಕೆಡವಲಾಯಿತು” ಎಂದು ಅವರು ಆರೋಪಿಸಿದ್ದಾರೆ.

ಕಟ್ಟಡ ನೆಲಸಮಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪವಿಭಾಗಾಧಿಕಾರಿ ಶಿವಂಗಿ ಜೋಶಿ, ‘ಕಟ್ಟಡ ಕೆಡವಿರುವುದು ಶಾಂತಿ ಕದಡಲು ಯತ್ನಿಸಿದ ಸಮಾಜಘಾತುಕರಿಗೆ ಎಚ್ಚರಿಕೆಯಾಗಿದೆ. ಮನೆಯಿಂದ ಕತ್ತಿ, ಚಾಕುಗಳನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಗಳನ್ನು ಗುರುತಿಸಿದ ನಂತರ ನಾವು ಈ ಕಾರ್ಯಾಚರಣೆಯನ್ನು ಮುಂದುವರಿಸುತ್ತೇವೆ’ ಎಂದಿದ್ದಾರೆ.

ಧಾರ್ ಜಿಲ್ಲೆಯ ಶೆಹರ್-ಎ-ಕಾಜಿಬ್ ಜಮೀಲ್ ಸಿದ್ದಿಕಿ, “ಘಟನೆಯು ದುರದೃಷ್ಟಕರವಾಗಿದೆ ಮತ್ತು ಪೊಲೀಸರು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ. “ಎರಡೂ ಕಡೆಯಿಂದ ಕಲ್ಲು ತೂರಲಾಯಿತು ಮತ್ತು ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಪೊಲೀಸರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಮುಸ್ಲಿಮರ ನಿಯೋಗವು ಧಾರ್ ಎಸ್ಪಿ ಮತ್ತು ಇಂದೋರ್ ಇನ್‌ಸ್ಪೆಕ್ಟರ್‌ ಜನರಲ್ ಅವರನ್ನು ಭೇಟಿ ಮಾಡಿ ನ್ಯಾಯಯುತ ಕ್ರಮಕ್ಕಾಗಿ ಒತ್ತಾಯಿಸಿದೆ.

ಹಿಂಸಾಚಾರಕ್ಕೂ ಯಾವುದೇ ಸಂಬಂಧವಿಲ್ಲದ ಖಲೀಲ್ ಖತ್ರಿ ಅವರ ಮನೆಯನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ ಎಂದು ಆರೋಪಿಸಿದ್ದಾರೆ. ಹತ್ತಿರದಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕಟ್ಟಡದ ಅನುಮತಿ ಇರಲಿಲ್ಲ. ಸಮಯ ನೀಡಿದ್ದರೆ ಅವರು ಅನುಮತಿಯನ್ನು ಪಡೆದುಕೊಳ್ಳಬಹುದಿತ್ತು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...