Homeಮುಖಪುಟಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಘಟನೆಗೆ ಸಂಬಂಧಪಡದ ಮುಸ್ಲಿಂ ವ್ಯಕ್ತಿಯೊಬ್ಬರ ಮನೆಯೊಂದನ್ನು ಅಧಿಕಾರಿಗಳು ಉರುಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಭೋಪಾಲ್: ಬಲಪಂಥೀಯ ಹಿಂದುತ್ವ ಗುಂಪುಗಳು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮನವಾರ್ ತೆಹಸಿಲ್‌ನಲ್ಲಿ ‘ಶೌರ್ಯ ಯಾತ್ರೆ’ ನಡೆಸಿದ್ದು, ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪೊಲೀಸರ ಸೂಚನೆಗಳಿಗೆ ವಿರುದ್ಧವಾಗಿ ಪ್ರವೇಶಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಆದರೆ ಪೊಲೀಸರು ಆರೋಪಿಗಳಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಿದ್ದಾರೆ. ಮೂವರು ಆರೋಪಿಗಳಿಗೆ ಆಶ್ರಯ ನೀಡಿದರೆಂಬ ಆರೋಪದಿಂದಾಗಿ ಮುಸ್ಲಿಂ ವ್ಯಕ್ತಿಯ ಮನೆಯೊಂದನ್ನು ಧ್ವಂಸಗೊಳಿಸಲಾಗಿದೆ.

ಡಿಸೆಂಬರ್ 23, 2021 ರಂದು, ಹಿಂದುತ್ವ ಗುಂಪುಗಳು DJ ಹಾಡುಗಳೊಂದಿಗೆ ಬೃಹತ್ ‘ಶೌರ್ಯ ಯಾತ್ರೆ’ಯನ್ನು ನಡೆಸಿದವು. ಗಾಂಧಿನಗರ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ತಡೆದರು.

ಪೊಲೀಸರ ಕ್ರಮದಿಂದಾಗಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆ ಪ್ರಾರಂಭವಾಗಿದೆ ಎಂಬ ವದಂತಿ ಹರಡಲು ಕಾರಣವಾಯಿತು. ಈ ಪ್ರದೇಶದಲ್ಲಿ 2016ರಲ್ಲಿ ಇದೇ ರೀತಿಯ ಘರ್ಷಣೆ ನಡೆದಿತ್ತು.

ಜನವರಿ 12, 2016ರಂದು, ಮನವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್‌ನ ‘ಶೌರ್ಯ ಯಾತ್ರೆ’ಯ ಸಂದರ್ಭದಲ್ಲಿ ಕೋಮುಗಲಭೆ ಭುಗಿಲೆದ್ದಿತ್ತು. ಹಿಂಸಾಚಾರದ ಸಮಯದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಹತ್ತಾರು ಅಂಗಡಿಗಳನ್ನು ಸುಟ್ಟು ಹಾಕಲಾಗಿತ್ತು. ಅದೇ ರೀತಿಯ ಪ್ರಕರಣ ಮತ್ತೆ ಮರುಕಳಿಸಿದೆ.

ಗಲಭೆ, ಕೊಲೆ ಯತ್ನ, ಅಪಹರಣ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಧಾರ್ ಪೊಲೀಸರು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ಮನವಾರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಗುರುತಿಸಲ್ಪಟ್ಟ 30 ಮಂದಿ ಹಾಗೂ ಅಪರಿಚಿತ 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹನ್ನೆರಡು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರೆಲ್ಲರೂ ಮುಸ್ಲಿಮರಾಗಿದ್ದಾರೆ.

“ಹಿಂದುತ್ವದ ಗುಂಪು ಮುಸ್ಲಿಮರು ಹೆಚ್ಚು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿತು. ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದರು. ಆದರೆ ಆ ಗುಂಪು ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಲು ಪ್ರಯತ್ನಿಸಿತು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಧಾರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧೀರಜ್ ಪಾಟಿದಾರ್, “ಕಲ್ಲು ತೂರಾಟದಲ್ಲಿ ಗಾಯಗೊಂಡ ಸ್ಥಳೀಯರ ದೂರಿನ ಆಧಾರದ ಮೇಲೆ ಮತ್ತು ಘಟನೆಯ ವಿಡಿಯೋ ತುಣುಕಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತರರನ್ನು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ವ್ಯಕ್ತಿಯ ಮನೆ ಧ್ವಂಸ

ಘಟನೆ ನಡೆದ ಎರಡು ದಿನಗಳ ನಂತರ ಜಿಲ್ಲಾಡಳಿತವು 55 ವರ್ಷದ ಖಲೀಲ್ ಖತ್ರಿ ಅವರ ಮೂರು ಅಂತಸ್ತಿನ ಕಟ್ಟಡವನ್ನು ನೆಲಸಮಗೊಳಿಸಿದೆ. ಒಟ್ಟು 45 ಲಕ್ಷ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮೂವರು ಆರೋಪಿಗಳು ಈ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ನೋಟಿಸ್ ನೀಡಿದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಕಟ್ಟಡಕ್ಕೆ ಅನುಮತಿಯನ್ನು ಪಡೆದುಕೊಳ್ಳಲು ಮಾಲೀಕರು ವಿಫಲರಾಗಿದ್ದರು.

“ಇತ್ತೀಚಿನ ಕಲ್ಲು ತೂರಾಟದ ಘಟನೆಯಲ್ಲಿ ನನ್ನ ಬಾಡಿಗೆದಾರರಲ್ಲಿ ಮೂವರ ಹೆಸರುಗಳು ಸೇರಿದ್ದವು. ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂದು ನಾನು ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯನ್ನು ಜಿಲ್ಲಾಡಳಿತ ಕೆಡವಿದೆ. ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಹತ್ತಿರದ ಎಲ್ಲಾ ಮನೆಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ” ಎಂದು ಖತ್ರಿ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ.

“ನಾನು ಹೆಚ್ಚುವರಿ ಎಸ್‌ಪಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡಿದ್ದೇನೆ. ತೆರವು ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿದ್ದೇನೆ. ನಾನು ಅಗತ್ಯ ಅನುಮತಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದರೆ ‌ಆರೋಪಿಗಳಿಗೆ ಆಶ್ರಯ ನೀಡಿದ್ದಕ್ಕಾಗಿ ಅವರು ನನ್ನನ್ನು ದೂಷಿಸಿದ್ದಾರೆ. ನಾನು ಮುಸ್ಲಿಂ ಎಂಬ ಕಾರಣಕ್ಕೆ ನನ್ನ ಮನೆಯನ್ನು ಕೆಡವಲಾಯಿತು” ಎಂದು ಅವರು ಆರೋಪಿಸಿದ್ದಾರೆ.

ಕಟ್ಟಡ ನೆಲಸಮಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪವಿಭಾಗಾಧಿಕಾರಿ ಶಿವಂಗಿ ಜೋಶಿ, ‘ಕಟ್ಟಡ ಕೆಡವಿರುವುದು ಶಾಂತಿ ಕದಡಲು ಯತ್ನಿಸಿದ ಸಮಾಜಘಾತುಕರಿಗೆ ಎಚ್ಚರಿಕೆಯಾಗಿದೆ. ಮನೆಯಿಂದ ಕತ್ತಿ, ಚಾಕುಗಳನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಗಳನ್ನು ಗುರುತಿಸಿದ ನಂತರ ನಾವು ಈ ಕಾರ್ಯಾಚರಣೆಯನ್ನು ಮುಂದುವರಿಸುತ್ತೇವೆ’ ಎಂದಿದ್ದಾರೆ.

ಧಾರ್ ಜಿಲ್ಲೆಯ ಶೆಹರ್-ಎ-ಕಾಜಿಬ್ ಜಮೀಲ್ ಸಿದ್ದಿಕಿ, “ಘಟನೆಯು ದುರದೃಷ್ಟಕರವಾಗಿದೆ ಮತ್ತು ಪೊಲೀಸರು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ. “ಎರಡೂ ಕಡೆಯಿಂದ ಕಲ್ಲು ತೂರಲಾಯಿತು ಮತ್ತು ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಪೊಲೀಸರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಮುಸ್ಲಿಮರ ನಿಯೋಗವು ಧಾರ್ ಎಸ್ಪಿ ಮತ್ತು ಇಂದೋರ್ ಇನ್‌ಸ್ಪೆಕ್ಟರ್‌ ಜನರಲ್ ಅವರನ್ನು ಭೇಟಿ ಮಾಡಿ ನ್ಯಾಯಯುತ ಕ್ರಮಕ್ಕಾಗಿ ಒತ್ತಾಯಿಸಿದೆ.

ಹಿಂಸಾಚಾರಕ್ಕೂ ಯಾವುದೇ ಸಂಬಂಧವಿಲ್ಲದ ಖಲೀಲ್ ಖತ್ರಿ ಅವರ ಮನೆಯನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ ಎಂದು ಆರೋಪಿಸಿದ್ದಾರೆ. ಹತ್ತಿರದಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕಟ್ಟಡದ ಅನುಮತಿ ಇರಲಿಲ್ಲ. ಸಮಯ ನೀಡಿದ್ದರೆ ಅವರು ಅನುಮತಿಯನ್ನು ಪಡೆದುಕೊಳ್ಳಬಹುದಿತ್ತು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...