Homeಮುಖಪುಟಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ಘಟನೆಗೆ ಸಂಬಂಧಪಡದ ಮುಸ್ಲಿಂ ವ್ಯಕ್ತಿಯೊಬ್ಬರ ಮನೆಯೊಂದನ್ನು ಅಧಿಕಾರಿಗಳು ಉರುಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಭೋಪಾಲ್: ಬಲಪಂಥೀಯ ಹಿಂದುತ್ವ ಗುಂಪುಗಳು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮನವಾರ್ ತೆಹಸಿಲ್‌ನಲ್ಲಿ ‘ಶೌರ್ಯ ಯಾತ್ರೆ’ ನಡೆಸಿದ್ದು, ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪೊಲೀಸರ ಸೂಚನೆಗಳಿಗೆ ವಿರುದ್ಧವಾಗಿ ಪ್ರವೇಶಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಆದರೆ ಪೊಲೀಸರು ಆರೋಪಿಗಳಲ್ಲಿ ಮುಸ್ಲಿಮರನ್ನು ಮಾತ್ರ ಬಂಧಿಸಿದ್ದಾರೆ. ಮೂವರು ಆರೋಪಿಗಳಿಗೆ ಆಶ್ರಯ ನೀಡಿದರೆಂಬ ಆರೋಪದಿಂದಾಗಿ ಮುಸ್ಲಿಂ ವ್ಯಕ್ತಿಯ ಮನೆಯೊಂದನ್ನು ಧ್ವಂಸಗೊಳಿಸಲಾಗಿದೆ.

ಡಿಸೆಂಬರ್ 23, 2021 ರಂದು, ಹಿಂದುತ್ವ ಗುಂಪುಗಳು DJ ಹಾಡುಗಳೊಂದಿಗೆ ಬೃಹತ್ ‘ಶೌರ್ಯ ಯಾತ್ರೆ’ಯನ್ನು ನಡೆಸಿದವು. ಗಾಂಧಿನಗರ ಪ್ರದೇಶಕ್ಕೆ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ತಡೆದರು.

ಪೊಲೀಸರ ಕ್ರಮದಿಂದಾಗಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ಘರ್ಷಣೆ ಪ್ರಾರಂಭವಾಗಿದೆ ಎಂಬ ವದಂತಿ ಹರಡಲು ಕಾರಣವಾಯಿತು. ಈ ಪ್ರದೇಶದಲ್ಲಿ 2016ರಲ್ಲಿ ಇದೇ ರೀತಿಯ ಘರ್ಷಣೆ ನಡೆದಿತ್ತು.

ಜನವರಿ 12, 2016ರಂದು, ಮನವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್‌ನ ‘ಶೌರ್ಯ ಯಾತ್ರೆ’ಯ ಸಂದರ್ಭದಲ್ಲಿ ಕೋಮುಗಲಭೆ ಭುಗಿಲೆದ್ದಿತ್ತು. ಹಿಂಸಾಚಾರದ ಸಮಯದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದ ಹತ್ತಾರು ಅಂಗಡಿಗಳನ್ನು ಸುಟ್ಟು ಹಾಕಲಾಗಿತ್ತು. ಅದೇ ರೀತಿಯ ಪ್ರಕರಣ ಮತ್ತೆ ಮರುಕಳಿಸಿದೆ.

ಗಲಭೆ, ಕೊಲೆ ಯತ್ನ, ಅಪಹರಣ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಧಾರ್ ಪೊಲೀಸರು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ಮನವಾರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ. ಗುರುತಿಸಲ್ಪಟ್ಟ 30 ಮಂದಿ ಹಾಗೂ ಅಪರಿಚಿತ 22 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹನ್ನೆರಡು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅವರೆಲ್ಲರೂ ಮುಸ್ಲಿಮರಾಗಿದ್ದಾರೆ.

“ಹಿಂದುತ್ವದ ಗುಂಪು ಮುಸ್ಲಿಮರು ಹೆಚ್ಚು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿತು. ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದರು. ಆದರೆ ಆ ಗುಂಪು ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಲು ಪ್ರಯತ್ನಿಸಿತು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಧಾರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧೀರಜ್ ಪಾಟಿದಾರ್, “ಕಲ್ಲು ತೂರಾಟದಲ್ಲಿ ಗಾಯಗೊಂಡ ಸ್ಥಳೀಯರ ದೂರಿನ ಆಧಾರದ ಮೇಲೆ ಮತ್ತು ಘಟನೆಯ ವಿಡಿಯೋ ತುಣುಕಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತರರನ್ನು ಬಂಧಿಸಲು ಕ್ರಮ ಜರುಗಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ವ್ಯಕ್ತಿಯ ಮನೆ ಧ್ವಂಸ

ಘಟನೆ ನಡೆದ ಎರಡು ದಿನಗಳ ನಂತರ ಜಿಲ್ಲಾಡಳಿತವು 55 ವರ್ಷದ ಖಲೀಲ್ ಖತ್ರಿ ಅವರ ಮೂರು ಅಂತಸ್ತಿನ ಕಟ್ಟಡವನ್ನು ನೆಲಸಮಗೊಳಿಸಿದೆ. ಒಟ್ಟು 45 ಲಕ್ಷ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮೂವರು ಆರೋಪಿಗಳು ಈ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ನೋಟಿಸ್ ನೀಡಿದ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಕಟ್ಟಡಕ್ಕೆ ಅನುಮತಿಯನ್ನು ಪಡೆದುಕೊಳ್ಳಲು ಮಾಲೀಕರು ವಿಫಲರಾಗಿದ್ದರು.

“ಇತ್ತೀಚಿನ ಕಲ್ಲು ತೂರಾಟದ ಘಟನೆಯಲ್ಲಿ ನನ್ನ ಬಾಡಿಗೆದಾರರಲ್ಲಿ ಮೂವರ ಹೆಸರುಗಳು ಸೇರಿದ್ದವು. ಅನುಮತಿ ಇಲ್ಲದೆ ಕಟ್ಟಡ ನಿರ್ಮಿಸಲಾಗಿದೆ ಎಂದು ನಾನು ಹಲವು ವರ್ಷಗಳ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯನ್ನು ಜಿಲ್ಲಾಡಳಿತ ಕೆಡವಿದೆ. ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲ. ಹತ್ತಿರದ ಎಲ್ಲಾ ಮನೆಗಳನ್ನು ಅನುಮತಿಯಿಲ್ಲದೆ ನಿರ್ಮಿಸಲಾಗಿದೆ” ಎಂದು ಖತ್ರಿ ಹೇಳಿರುವುದಾಗಿ ‘ದಿ ವೈರ್‌’ ವರದಿ ಮಾಡಿದೆ.

“ನಾನು ಹೆಚ್ಚುವರಿ ಎಸ್‌ಪಿ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡಿದ್ದೇನೆ. ತೆರವು ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕೋರಿದ್ದೇನೆ. ನಾನು ಅಗತ್ಯ ಅನುಮತಿಯನ್ನು ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದೇನೆ. ಆದರೆ ‌ಆರೋಪಿಗಳಿಗೆ ಆಶ್ರಯ ನೀಡಿದ್ದಕ್ಕಾಗಿ ಅವರು ನನ್ನನ್ನು ದೂಷಿಸಿದ್ದಾರೆ. ನಾನು ಮುಸ್ಲಿಂ ಎಂಬ ಕಾರಣಕ್ಕೆ ನನ್ನ ಮನೆಯನ್ನು ಕೆಡವಲಾಯಿತು” ಎಂದು ಅವರು ಆರೋಪಿಸಿದ್ದಾರೆ.

ಕಟ್ಟಡ ನೆಲಸಮಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪವಿಭಾಗಾಧಿಕಾರಿ ಶಿವಂಗಿ ಜೋಶಿ, ‘ಕಟ್ಟಡ ಕೆಡವಿರುವುದು ಶಾಂತಿ ಕದಡಲು ಯತ್ನಿಸಿದ ಸಮಾಜಘಾತುಕರಿಗೆ ಎಚ್ಚರಿಕೆಯಾಗಿದೆ. ಮನೆಯಿಂದ ಕತ್ತಿ, ಚಾಕುಗಳನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಗಳನ್ನು ಗುರುತಿಸಿದ ನಂತರ ನಾವು ಈ ಕಾರ್ಯಾಚರಣೆಯನ್ನು ಮುಂದುವರಿಸುತ್ತೇವೆ’ ಎಂದಿದ್ದಾರೆ.

ಧಾರ್ ಜಿಲ್ಲೆಯ ಶೆಹರ್-ಎ-ಕಾಜಿಬ್ ಜಮೀಲ್ ಸಿದ್ದಿಕಿ, “ಘಟನೆಯು ದುರದೃಷ್ಟಕರವಾಗಿದೆ ಮತ್ತು ಪೊಲೀಸರು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ. “ಎರಡೂ ಕಡೆಯಿಂದ ಕಲ್ಲು ತೂರಲಾಯಿತು ಮತ್ತು ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಪೊಲೀಸರನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ. ಮುಸ್ಲಿಮರ ನಿಯೋಗವು ಧಾರ್ ಎಸ್ಪಿ ಮತ್ತು ಇಂದೋರ್ ಇನ್‌ಸ್ಪೆಕ್ಟರ್‌ ಜನರಲ್ ಅವರನ್ನು ಭೇಟಿ ಮಾಡಿ ನ್ಯಾಯಯುತ ಕ್ರಮಕ್ಕಾಗಿ ಒತ್ತಾಯಿಸಿದೆ.

ಹಿಂಸಾಚಾರಕ್ಕೂ ಯಾವುದೇ ಸಂಬಂಧವಿಲ್ಲದ ಖಲೀಲ್ ಖತ್ರಿ ಅವರ ಮನೆಯನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ ಎಂದು ಆರೋಪಿಸಿದ್ದಾರೆ. ಹತ್ತಿರದಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕಟ್ಟಡದ ಅನುಮತಿ ಇರಲಿಲ್ಲ. ಸಮಯ ನೀಡಿದ್ದರೆ ಅವರು ಅನುಮತಿಯನ್ನು ಪಡೆದುಕೊಳ್ಳಬಹುದಿತ್ತು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...