Homeಮುಖಪುಟಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

- Advertisement -
- Advertisement -

ಗ್ವಾಲಿಯರ್-ಚಂಬಲ್ ಪ್ರದೇಶದ ಬಿಜೆಪಿ ನಾಯಕ ಪ್ರೀತಮ್ ಸಿಂಗ್ ಲೋಧಿ ಅವರು ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಭೋಪಾಲ್‌ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿಕೊಂಡು ಪ್ರಾಥಮಿಕ ಸದಸ್ಯತ್ವವನ್ನೂ ರದ್ದು ಮಾಡಲಾಲಾಗಿದೆ.

ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಬುಧವಾರ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೀತಮ್ ಸಿಂಗ್ ಲೋಧಿ, ಬ್ರಾಹ್ಮಣರ ಕುರಿತು ಮಾತನಾಡಿದ್ದರು. “ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ದೂರು ದಾಖಲಿಸಲು ಮುಂದಾದರು. ಲೋಧಿ ಅವರು ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ.

62 ವರ್ಷದ ಲೋಧಿ ಅವರು ಈಗಾಗಲೇ 37 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಲೋಧಿಯವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಲೋಧಿ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ, ಆರು ಭಾರಿ ಶಾಸಕರಾಗಿರುವ ಕೆ.ಪಿ.ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಲ್ಲಿ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಕೇವಲ 2500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಬ್ರಾಹ್ಮಣರು ಆ ಕಾಲದ ಜನರ ಹಣ ಮತ್ತು ಸಂಪನ್ಮೂಲದಲ್ಲಿ ಏಳಿಗೆ ಹೊಂದುತ್ತಿದ್ದರು” ಎಂದು ಹೇಳಿದ್ದರು.

“ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡುವ ಅವರು (ಬ್ರಾಹ್ಮಣರು) ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಬೇಕು ಹಾಗೂ ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸಬೇಕು ಎಂದು ಅವರು (ಬ್ರಾಹ್ಮಣರು) ಬಯಸುತ್ತಾರೆ” ಎಂದು ಭಾಷಣ ಮಾಡಿದ್ದರು.

ಇದನ್ನೂ ಓದಿರಿ: ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ಉತ್ತರಪ್ರದೇಶದಲ್ಲಿ ಬ್ರಾಹ್ಮಣರ ವಿಶ್ವಾಸವನ್ನು ಕಳೆದುಕೊಂಡ ಬಳಿಕ, ಅವರನ್ನು ಪಕ್ಷದತ್ತ ಸೆಳೆಯಲು ಬಯಸುತ್ತಿರುವ ಬಿಜೆಪಿಗೆ ಇದು ಆಘಾತ ನೀಡಿದೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗವಾನದಾಸ್ ಸಬನಾನಿ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕ ಪ್ರೀತಮ್ ಲೋಧಿ ಅವರು ಪಕ್ಷದ ದೃಷ್ಟಿಕೋನಕ್ಕೆ ವಿರುದ್ಧವಾದ ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಅಭಿಪ್ರಾಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ. ಲೋಧಿ ಅವರನ್ನು ಕರೆದು ನೋಟೀಸ್ ನೀಡಲಾಯಿತು. ಅವರು ಲಿಖಿತ ಕ್ಷಮಾಪಣೆಯನ್ನೂ ಸಲ್ಲಿಸಿದರು. ಆದರೆ ಇದು ತೃಪ್ತಿದಾಯಕವಾಗಿರದ ಕಾರಣ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬ್ರಾಹ್ಮಣರು ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಬಿಜೆಪಿ ಬಿತ್ತುತ್ತಿರುವ ಯೋಜಿತ ಪಿತೂರಿಯ ಭಾಗವಾಗಿ  ಬಿಜೆಪಿ ನಾಯಕನ ಹೇಳಿಕೆ ಹೊರಬಿದ್ದಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ವಿಷಯವನ್ನ ತುಂಬಾ ಗಂಭೀರವಾಗಿ ಪರಿಗಣಿಸಿ ರುವುದನ್ನು ನೊಡಿದರೆ BJP ಮತ್ತು ಸರಕಾರ ಕೇವಲ ಬ್ರಾಹ್ಮಣ ರಿಂದಲೇ ಎಂಬುದು ಸಾಬೀತಾಗಿದೆ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...