Homeಮುಖಪುಟಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

- Advertisement -
- Advertisement -

ಗ್ವಾಲಿಯರ್-ಚಂಬಲ್ ಪ್ರದೇಶದ ಬಿಜೆಪಿ ನಾಯಕ ಪ್ರೀತಮ್ ಸಿಂಗ್ ಲೋಧಿ ಅವರು ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಭೋಪಾಲ್‌ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿಕೊಂಡು ಪ್ರಾಥಮಿಕ ಸದಸ್ಯತ್ವವನ್ನೂ ರದ್ದು ಮಾಡಲಾಲಾಗಿದೆ.

ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಬುಧವಾರ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೀತಮ್ ಸಿಂಗ್ ಲೋಧಿ, ಬ್ರಾಹ್ಮಣರ ಕುರಿತು ಮಾತನಾಡಿದ್ದರು. “ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ದೂರು ದಾಖಲಿಸಲು ಮುಂದಾದರು. ಲೋಧಿ ಅವರು ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ.

62 ವರ್ಷದ ಲೋಧಿ ಅವರು ಈಗಾಗಲೇ 37 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಲೋಧಿಯವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಲೋಧಿ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ, ಆರು ಭಾರಿ ಶಾಸಕರಾಗಿರುವ ಕೆ.ಪಿ.ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಲ್ಲಿ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಕೇವಲ 2500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಬ್ರಾಹ್ಮಣರು ಆ ಕಾಲದ ಜನರ ಹಣ ಮತ್ತು ಸಂಪನ್ಮೂಲದಲ್ಲಿ ಏಳಿಗೆ ಹೊಂದುತ್ತಿದ್ದರು” ಎಂದು ಹೇಳಿದ್ದರು.

“ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡುವ ಅವರು (ಬ್ರಾಹ್ಮಣರು) ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಬೇಕು ಹಾಗೂ ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸಬೇಕು ಎಂದು ಅವರು (ಬ್ರಾಹ್ಮಣರು) ಬಯಸುತ್ತಾರೆ” ಎಂದು ಭಾಷಣ ಮಾಡಿದ್ದರು.

ಇದನ್ನೂ ಓದಿರಿ: ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ಉತ್ತರಪ್ರದೇಶದಲ್ಲಿ ಬ್ರಾಹ್ಮಣರ ವಿಶ್ವಾಸವನ್ನು ಕಳೆದುಕೊಂಡ ಬಳಿಕ, ಅವರನ್ನು ಪಕ್ಷದತ್ತ ಸೆಳೆಯಲು ಬಯಸುತ್ತಿರುವ ಬಿಜೆಪಿಗೆ ಇದು ಆಘಾತ ನೀಡಿದೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗವಾನದಾಸ್ ಸಬನಾನಿ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕ ಪ್ರೀತಮ್ ಲೋಧಿ ಅವರು ಪಕ್ಷದ ದೃಷ್ಟಿಕೋನಕ್ಕೆ ವಿರುದ್ಧವಾದ ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಅಭಿಪ್ರಾಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ. ಲೋಧಿ ಅವರನ್ನು ಕರೆದು ನೋಟೀಸ್ ನೀಡಲಾಯಿತು. ಅವರು ಲಿಖಿತ ಕ್ಷಮಾಪಣೆಯನ್ನೂ ಸಲ್ಲಿಸಿದರು. ಆದರೆ ಇದು ತೃಪ್ತಿದಾಯಕವಾಗಿರದ ಕಾರಣ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬ್ರಾಹ್ಮಣರು ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಬಿಜೆಪಿ ಬಿತ್ತುತ್ತಿರುವ ಯೋಜಿತ ಪಿತೂರಿಯ ಭಾಗವಾಗಿ  ಬಿಜೆಪಿ ನಾಯಕನ ಹೇಳಿಕೆ ಹೊರಬಿದ್ದಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ವಿಷಯವನ್ನ ತುಂಬಾ ಗಂಭೀರವಾಗಿ ಪರಿಗಣಿಸಿ ರುವುದನ್ನು ನೊಡಿದರೆ BJP ಮತ್ತು ಸರಕಾರ ಕೇವಲ ಬ್ರಾಹ್ಮಣ ರಿಂದಲೇ ಎಂಬುದು ಸಾಬೀತಾಗಿದೆ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...