Homeಮುಖಪುಟಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

- Advertisement -
- Advertisement -

ಗ್ವಾಲಿಯರ್-ಚಂಬಲ್ ಪ್ರದೇಶದ ಬಿಜೆಪಿ ನಾಯಕ ಪ್ರೀತಮ್ ಸಿಂಗ್ ಲೋಧಿ ಅವರು ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಭೋಪಾಲ್‌ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿಕೊಂಡು ಪ್ರಾಥಮಿಕ ಸದಸ್ಯತ್ವವನ್ನೂ ರದ್ದು ಮಾಡಲಾಲಾಗಿದೆ.

ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಬುಧವಾರ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೀತಮ್ ಸಿಂಗ್ ಲೋಧಿ, ಬ್ರಾಹ್ಮಣರ ಕುರಿತು ಮಾತನಾಡಿದ್ದರು. “ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ದೂರು ದಾಖಲಿಸಲು ಮುಂದಾದರು. ಲೋಧಿ ಅವರು ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ.

62 ವರ್ಷದ ಲೋಧಿ ಅವರು ಈಗಾಗಲೇ 37 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಲೋಧಿಯವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಲೋಧಿ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ, ಆರು ಭಾರಿ ಶಾಸಕರಾಗಿರುವ ಕೆ.ಪಿ.ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಲ್ಲಿ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಕೇವಲ 2500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಬ್ರಾಹ್ಮಣರು ಆ ಕಾಲದ ಜನರ ಹಣ ಮತ್ತು ಸಂಪನ್ಮೂಲದಲ್ಲಿ ಏಳಿಗೆ ಹೊಂದುತ್ತಿದ್ದರು” ಎಂದು ಹೇಳಿದ್ದರು.

“ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡುವ ಅವರು (ಬ್ರಾಹ್ಮಣರು) ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಬೇಕು ಹಾಗೂ ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸಬೇಕು ಎಂದು ಅವರು (ಬ್ರಾಹ್ಮಣರು) ಬಯಸುತ್ತಾರೆ” ಎಂದು ಭಾಷಣ ಮಾಡಿದ್ದರು.

ಇದನ್ನೂ ಓದಿರಿ: ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ಉತ್ತರಪ್ರದೇಶದಲ್ಲಿ ಬ್ರಾಹ್ಮಣರ ವಿಶ್ವಾಸವನ್ನು ಕಳೆದುಕೊಂಡ ಬಳಿಕ, ಅವರನ್ನು ಪಕ್ಷದತ್ತ ಸೆಳೆಯಲು ಬಯಸುತ್ತಿರುವ ಬಿಜೆಪಿಗೆ ಇದು ಆಘಾತ ನೀಡಿದೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗವಾನದಾಸ್ ಸಬನಾನಿ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕ ಪ್ರೀತಮ್ ಲೋಧಿ ಅವರು ಪಕ್ಷದ ದೃಷ್ಟಿಕೋನಕ್ಕೆ ವಿರುದ್ಧವಾದ ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಅಭಿಪ್ರಾಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ. ಲೋಧಿ ಅವರನ್ನು ಕರೆದು ನೋಟೀಸ್ ನೀಡಲಾಯಿತು. ಅವರು ಲಿಖಿತ ಕ್ಷಮಾಪಣೆಯನ್ನೂ ಸಲ್ಲಿಸಿದರು. ಆದರೆ ಇದು ತೃಪ್ತಿದಾಯಕವಾಗಿರದ ಕಾರಣ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬ್ರಾಹ್ಮಣರು ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಬಿಜೆಪಿ ಬಿತ್ತುತ್ತಿರುವ ಯೋಜಿತ ಪಿತೂರಿಯ ಭಾಗವಾಗಿ  ಬಿಜೆಪಿ ನಾಯಕನ ಹೇಳಿಕೆ ಹೊರಬಿದ್ದಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ವಿಷಯವನ್ನ ತುಂಬಾ ಗಂಭೀರವಾಗಿ ಪರಿಗಣಿಸಿ ರುವುದನ್ನು ನೊಡಿದರೆ BJP ಮತ್ತು ಸರಕಾರ ಕೇವಲ ಬ್ರಾಹ್ಮಣ ರಿಂದಲೇ ಎಂಬುದು ಸಾಬೀತಾಗಿದೆ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...