Homeಮುಖಪುಟಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

- Advertisement -
- Advertisement -

ಗ್ವಾಲಿಯರ್-ಚಂಬಲ್ ಪ್ರದೇಶದ ಬಿಜೆಪಿ ನಾಯಕ ಪ್ರೀತಮ್ ಸಿಂಗ್ ಲೋಧಿ ಅವರು ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಬಿಜೆಪಿಯಿಂದ ಉಚ್ಛಾಟನೆಯಾಗಿದ್ದಾರೆ. ಇಂದು ಬೆಳಿಗ್ಗೆ ಅವರನ್ನು ಭೋಪಾಲ್‌ನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಕರೆಸಿಕೊಂಡು ಪ್ರಾಥಮಿಕ ಸದಸ್ಯತ್ವವನ್ನೂ ರದ್ದು ಮಾಡಲಾಲಾಗಿದೆ.

ಯೋಧ ರಾಣಿ ಅವಂತಿಬಾಯಿ ಲೋಧಿ ಅವರ ಜನ್ಮದಿನದಂದು ಬುಧವಾರ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರೀತಮ್ ಸಿಂಗ್ ಲೋಧಿ, ಬ್ರಾಹ್ಮಣರ ಕುರಿತು ಮಾತನಾಡಿದ್ದರು. “ಬ್ರಾಹ್ಮಣರು ಧರ್ಮದ ಹೆಸರಿನಲ್ಲಿ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರ ಹೇಳಿಕೆ ವಿರುದ್ಧ ಬಿಜೆಪಿ ಯುವ ಘಟಕದ ನಾಯಕ ಪ್ರವೀಣ್ ಮಿಶ್ರಾ ದೂರು ದಾಖಲಿಸಲು ಮುಂದಾದರು. ಲೋಧಿ ಅವರು ಜನರ ನಡುವೆ ದ್ವೇಷವನ್ನು ಉಂಟುಮಾಡುತ್ತಿದ್ದಾರೆ ಎಂದು ಮಿಶ್ರಾ ಆರೋಪಿಸಿದ್ದಾರೆ.

62 ವರ್ಷದ ಲೋಧಿ ಅವರು ಈಗಾಗಲೇ 37 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ನಾಲ್ಕು ಕೊಲೆ ಯತ್ನ ಪ್ರಕರಣಗಳು ಮತ್ತು ಎರಡು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರಿಗೆ ಆತ್ಮೀಯರಾಗಿರುವ ಪ್ರೀತಮ್ ಸಿಂಗ್ ಲೋಧಿ ಅವರು 2013 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಪಿಚೋರ್ (ಶಿವಪುರಿ) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನಿಂದ ಸೋತಿದ್ದರು. ಆದರೆ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಲೋಧಿಯವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ.

ಲೋಧಿ ಅವರು ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ, ಆರು ಭಾರಿ ಶಾಸಕರಾಗಿರುವ ಕೆ.ಪಿ.ಸಿಂಗ್ ‘ಕಕ್ಕಜು’ ವಿರುದ್ಧ ಪಿಚೋರ್ ವಿಧಾನಸಭಾ ಕ್ಷೇತ್ರದಲ್ಲಿ ಲೋಧಿ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಅವರು ಕೇವಲ 2500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಶಿವಪುರಿಯ ಖರೈಹ್ ಗ್ರಾಮದಲ್ಲಿ ಬುಧವಾರ ನಡೆದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಬ್ರಾಹ್ಮಣರು ಆ ಕಾಲದ ಜನರ ಹಣ ಮತ್ತು ಸಂಪನ್ಮೂಲದಲ್ಲಿ ಏಳಿಗೆ ಹೊಂದುತ್ತಿದ್ದರು” ಎಂದು ಹೇಳಿದ್ದರು.

“ಒಳ್ಳೆಯ ಕುಟುಂಬದ ಸುಂದರ ಮಹಿಳೆಯರನ್ನು ನೋಡುವ ಅವರು (ಬ್ರಾಹ್ಮಣರು) ಆ ಮಹಿಳೆಯರ ಮನೆಯಲ್ಲಿ ಊಟ ಮಾಡಲು ಬಯಸುತ್ತಾರೆ. ಯುವತಿಯರನ್ನು ಮುಂದಿನ ಸಾಲಿನಲ್ಲಿ ಕೂರಿಸಬೇಕು ಹಾಗೂ ವಯಸ್ಸಾದ ಮಹಿಳೆಯರನ್ನು ಹಿಂದಿನ ಸಾಲಿನಲ್ಲಿ ಕೂರಿಸಬೇಕು ಎಂದು ಅವರು (ಬ್ರಾಹ್ಮಣರು) ಬಯಸುತ್ತಾರೆ” ಎಂದು ಭಾಷಣ ಮಾಡಿದ್ದರು.

ಇದನ್ನೂ ಓದಿರಿ: ರಾಮದೇವ್‌ರ ಪತಂಜಲಿ ಸಂಸ್ಥೆ ಹರಿದ್ವಾರದಲ್ಲಿ ದಲಿತರ ಭೂಮಿ ಕಬಳಿಸುತ್ತಿದೆ: ವರದಿ

ಉತ್ತರಪ್ರದೇಶದಲ್ಲಿ ಬ್ರಾಹ್ಮಣರ ವಿಶ್ವಾಸವನ್ನು ಕಳೆದುಕೊಂಡ ಬಳಿಕ, ಅವರನ್ನು ಪಕ್ಷದತ್ತ ಸೆಳೆಯಲು ಬಯಸುತ್ತಿರುವ ಬಿಜೆಪಿಗೆ ಇದು ಆಘಾತ ನೀಡಿದೆ ಎಂದು ಎನ್‌.ಡಿ.ಟಿ.ವಿ. ವರದಿ ಮಾಡಿದೆ.

ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗವಾನದಾಸ್ ಸಬನಾನಿ ಪ್ರತಿಕ್ರಿಯಿಸಿ, “ಬಿಜೆಪಿ ನಾಯಕ ಪ್ರೀತಮ್ ಲೋಧಿ ಅವರು ಪಕ್ಷದ ದೃಷ್ಟಿಕೋನಕ್ಕೆ ವಿರುದ್ಧವಾದ ಹಾಗೂ ನಿರ್ದಿಷ್ಟ ಸಮುದಾಯದ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಅವರ ಅಭಿಪ್ರಾಯಗಳನ್ನು ಬಿಜೆಪಿ ಎಂದಿಗೂ ಒಪ್ಪುವುದಿಲ್ಲ. ಲೋಧಿ ಅವರನ್ನು ಕರೆದು ನೋಟೀಸ್ ನೀಡಲಾಯಿತು. ಅವರು ಲಿಖಿತ ಕ್ಷಮಾಪಣೆಯನ್ನೂ ಸಲ್ಲಿಸಿದರು. ಆದರೆ ಇದು ತೃಪ್ತಿದಾಯಕವಾಗಿರದ ಕಾರಣ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಬ್ರಾಹ್ಮಣರು ಮತ್ತು ಸಾಮಾನ್ಯ ವರ್ಗದ ಜನರ ನಡುವೆ ಬಿಜೆಪಿ ಬಿತ್ತುತ್ತಿರುವ ಯೋಜಿತ ಪಿತೂರಿಯ ಭಾಗವಾಗಿ  ಬಿಜೆಪಿ ನಾಯಕನ ಹೇಳಿಕೆ ಹೊರಬಿದ್ದಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಈ ವಿಷಯವನ್ನ ತುಂಬಾ ಗಂಭೀರವಾಗಿ ಪರಿಗಣಿಸಿ ರುವುದನ್ನು ನೊಡಿದರೆ BJP ಮತ್ತು ಸರಕಾರ ಕೇವಲ ಬ್ರಾಹ್ಮಣ ರಿಂದಲೇ ಎಂಬುದು ಸಾಬೀತಾಗಿದೆ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...