Homeಮುಖಪುಟಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ಅವರನ್ನು (ಕಮಲನಾಥ್) ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿದ ನಂತರ ಹುಚ್ಚರಾಗಿದ್ದಾರೆ. ಬಹುಶಃ ಅವರ ತಾಯಿ ಮತ್ತು ಸಹೋದರಿ ಬಂಗಾಳದ ಐಟಂಗಳಾಗಿರಬಹುದು ಎಂದು ಇಮಾರ್ತಿ ದೇವಿ ಹೇಳಿದ್ದರು.

- Advertisement -
- Advertisement -

ಭಾರತ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಬಿಜೆಪಿಯ ಇಮಾರ್ತಿ ದೇವಿಗೆ ನೋಟಿಸ್ ನೀಡಿದ್ದು, ತನ್ನ ರಾಜಕೀಯ ಪ್ರತಿಸ್ಪರ್ಧಿಯ ಹೆಸರು ಹೇಳದೇ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ 48 ಗಂಟೆಗಳ ಒಳಗೆ ತನ್ನ ನಿಲುವನ್ನು ವಿವರಿಸುವಂತೆ ಆದೇಶಿಸಿದೆ.

ಇಮಾರ್ತಿ ದೇವಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿಂದೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಇಮಾರ್ತಿ ದೇವಿಯವರನ್ನು “ಐಟಂ” ಎಂದು ಕರೆದು ವಿವಾದಕ್ಕೆ ಒಳಗಾಗಿದ್ದರು.

“ಅವರು ಬಂಗಾಳಿ ವ್ಯಕ್ತಿ. ಅವರು ಮುಖ್ಯಮಂತ್ರಿಯಾಗಲು ಇಲ್ಲಿಗೆ ಬಂದರು. ಆದರೆ ಅವರಿಗೆ ಹೇಗೆ ಮಾತನಾಡಬೇಕೆಂದು ತಿಳಿದಿಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿದ ನಂತರ ಅವರು ಹುಚ್ಚರಾಗಿದ್ದಾರೆ. ಅವರ ಬಗ್ಗೆ ಏನೂ ಹೇಳಲಾಗುವುದಿಲ್ಲ. ಬಹುಶಃ ಅವರ ತಾಯಿ ಮತ್ತು ಸಹೋದರಿ ಬಂಗಾಳದ ಐಟಂಗಳಾಗಿರಬಹುದು” ಎಂದು ಇಮಾರ್ತಿ ದೇವಿ ಹೇಳಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಚುನಾವಣಾ ಆಯೋಗವು ನೋಟಿಸ್ ನೀಡಿದೆ.

ಇದರ ನಡುವೆ ಕಮಲ ನಾಥ್ ಅವರಿಗೂ ನೋಟಿಸ್ ನೀಡಿ ತಮ್ಮ ಹೇಳಿಕೆಯ ಬಗ್ಗೆ ವಿವರಣೆಯನ್ನು ಕೋರಿತ್ತು. ನಂತರ ಇಂತಹ ಪದಗಳನ್ನು ಸಾರ್ವಜನಿಕವಾಗಿ ಮಾತನಾಡುವಾಗ ಬಳಸಬಾರದು ಎಂದು ಎಚ್ಚರಿಸಿತ್ತು.

ಮಾದರಿ ನೀತಿ ಸಂಹಿತೆ ಸೆಪ್ಟೆಂಬರ್ 29 ರಿಂದ ಮಧ್ಯಪ್ರದೇಶದಲ್ಲಿ ಜಾರಿಯಲ್ಲಿದೆ.


ಇದನ್ನೂ ಓದಿ: ಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಂಥ ವಿಪರ್ಯಾಸ ನೋಡಿ. ಒಬ್ಬ ಮಾಜಿ ಮುಖ್ಯಮಂತ್ರಿ ಒಬ್ಬ ಹೆಣ್ಣುಮಗಳಿಗೆ ಐಟಂ ಎಂದಾಗ ಈ ಆಯೋಗ ಎಲ್ಲಿ ಮಲಗಿತ್ತೋ ಏನೋ….ತನಗೆ ಬಂದ ಮಾತಿಗೆ ಪ್ರತಿಕ್ರಿಯೆ ನೀಡಿ ಸಂತ್ರಸ್ತೆ ಮಾತನಾಡಿದರೆ ಅವರಿಗೆ ‘ ನೋಟೀಸು ‘
    ಏನೇ ಆಗಲಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಕಾಡೆ ಮಲಗಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ಮೋದಿ ವಿರುದ್ಧ, ವಿರೋಧಿಗಳ ವಿರುದ್ದ ಪುಂಖಾನುಪುಂಖವಾಗಿ ಪವಿತ್ರ ಪದಗಳನ್ನು ಉದುರಿಸುತ್ತಲೇ ಇದ್ದರೂ ನಡೆಯುತ್ತದೆ ಆದರೆ ಅನ್ನಿಸಿಕೊಂಡವರು ಪ್ರತಿಯಾಗಿ ಅಂದರೆ ಅವರಿಗೆ ನೋಟೀಸು, ಕೇಸು !
    ಆರು ವರ್ಷಗಳ ಹಿಂದೆ ಆ ಪಕ್ಷದಿಂದ ಪಡೆದ ಸೇವೆ ಇನ್ನೂ ಕೆಲಸ ಮಾಡುತ್ತಿದೆಯಾ ? ಎಂಬ ಗುಮಾನಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...