Homeಮುಖಪುಟಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ಮಧ್ಯಪ್ರದೇಶ: ವಿವಾದಾತ್ಮಕ ಹೇಳಿಕೆ; ಬಿಜೆಪಿ ನಾಯಕಿಗೆ ನೋಟಿಸ್!

ಅವರನ್ನು (ಕಮಲನಾಥ್) ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿದ ನಂತರ ಹುಚ್ಚರಾಗಿದ್ದಾರೆ. ಬಹುಶಃ ಅವರ ತಾಯಿ ಮತ್ತು ಸಹೋದರಿ ಬಂಗಾಳದ ಐಟಂಗಳಾಗಿರಬಹುದು ಎಂದು ಇಮಾರ್ತಿ ದೇವಿ ಹೇಳಿದ್ದರು.

- Advertisement -
- Advertisement -

ಭಾರತ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಬಿಜೆಪಿಯ ಇಮಾರ್ತಿ ದೇವಿಗೆ ನೋಟಿಸ್ ನೀಡಿದ್ದು, ತನ್ನ ರಾಜಕೀಯ ಪ್ರತಿಸ್ಪರ್ಧಿಯ ಹೆಸರು ಹೇಳದೇ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ 48 ಗಂಟೆಗಳ ಒಳಗೆ ತನ್ನ ನಿಲುವನ್ನು ವಿವರಿಸುವಂತೆ ಆದೇಶಿಸಿದೆ.

ಇಮಾರ್ತಿ ದೇವಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿಂದೆ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಇಮಾರ್ತಿ ದೇವಿಯವರನ್ನು “ಐಟಂ” ಎಂದು ಕರೆದು ವಿವಾದಕ್ಕೆ ಒಳಗಾಗಿದ್ದರು.

“ಅವರು ಬಂಗಾಳಿ ವ್ಯಕ್ತಿ. ಅವರು ಮುಖ್ಯಮಂತ್ರಿಯಾಗಲು ಇಲ್ಲಿಗೆ ಬಂದರು. ಆದರೆ ಅವರಿಗೆ ಹೇಗೆ ಮಾತನಾಡಬೇಕೆಂದು ತಿಳಿದಿಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿದ ನಂತರ ಅವರು ಹುಚ್ಚರಾಗಿದ್ದಾರೆ. ಅವರ ಬಗ್ಗೆ ಏನೂ ಹೇಳಲಾಗುವುದಿಲ್ಲ. ಬಹುಶಃ ಅವರ ತಾಯಿ ಮತ್ತು ಸಹೋದರಿ ಬಂಗಾಳದ ಐಟಂಗಳಾಗಿರಬಹುದು” ಎಂದು ಇಮಾರ್ತಿ ದೇವಿ ಹೇಳಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಚುನಾವಣಾ ಆಯೋಗವು ನೋಟಿಸ್ ನೀಡಿದೆ.

ಇದರ ನಡುವೆ ಕಮಲ ನಾಥ್ ಅವರಿಗೂ ನೋಟಿಸ್ ನೀಡಿ ತಮ್ಮ ಹೇಳಿಕೆಯ ಬಗ್ಗೆ ವಿವರಣೆಯನ್ನು ಕೋರಿತ್ತು. ನಂತರ ಇಂತಹ ಪದಗಳನ್ನು ಸಾರ್ವಜನಿಕವಾಗಿ ಮಾತನಾಡುವಾಗ ಬಳಸಬಾರದು ಎಂದು ಎಚ್ಚರಿಸಿತ್ತು.

ಮಾದರಿ ನೀತಿ ಸಂಹಿತೆ ಸೆಪ್ಟೆಂಬರ್ 29 ರಿಂದ ಮಧ್ಯಪ್ರದೇಶದಲ್ಲಿ ಜಾರಿಯಲ್ಲಿದೆ.


ಇದನ್ನೂ ಓದಿ: ಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಂಥ ವಿಪರ್ಯಾಸ ನೋಡಿ. ಒಬ್ಬ ಮಾಜಿ ಮುಖ್ಯಮಂತ್ರಿ ಒಬ್ಬ ಹೆಣ್ಣುಮಗಳಿಗೆ ಐಟಂ ಎಂದಾಗ ಈ ಆಯೋಗ ಎಲ್ಲಿ ಮಲಗಿತ್ತೋ ಏನೋ….ತನಗೆ ಬಂದ ಮಾತಿಗೆ ಪ್ರತಿಕ್ರಿಯೆ ನೀಡಿ ಸಂತ್ರಸ್ತೆ ಮಾತನಾಡಿದರೆ ಅವರಿಗೆ ‘ ನೋಟೀಸು ‘
    ಏನೇ ಆಗಲಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಕಾಡೆ ಮಲಗಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ಮೋದಿ ವಿರುದ್ಧ, ವಿರೋಧಿಗಳ ವಿರುದ್ದ ಪುಂಖಾನುಪುಂಖವಾಗಿ ಪವಿತ್ರ ಪದಗಳನ್ನು ಉದುರಿಸುತ್ತಲೇ ಇದ್ದರೂ ನಡೆಯುತ್ತದೆ ಆದರೆ ಅನ್ನಿಸಿಕೊಂಡವರು ಪ್ರತಿಯಾಗಿ ಅಂದರೆ ಅವರಿಗೆ ನೋಟೀಸು, ಕೇಸು !
    ಆರು ವರ್ಷಗಳ ಹಿಂದೆ ಆ ಪಕ್ಷದಿಂದ ಪಡೆದ ಸೇವೆ ಇನ್ನೂ ಕೆಲಸ ಮಾಡುತ್ತಿದೆಯಾ ? ಎಂಬ ಗುಮಾನಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...