Homeಮುಖಪುಟಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು - ತೀವ್ರ ಖಂಡನೆ

ಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು – ತೀವ್ರ ಖಂಡನೆ

- Advertisement -
- Advertisement -

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಿಗರು ವಿಡಿಯೋವನ್ನು ಹಂಚಿಕೊಂಡು ಬಿಜೆಪಿ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ಕೆಲದಿನಗಳಿಂದ ಮಧ್ಯಪ್ರದೇಶ ಹಲವು ನಗರಗಳಲ್ಲಿ ರಸಗೊಬ್ಬರದ ಕೊರತೆ ಕಂಡುಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ DAP ಗೊಬ್ಬರ ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳಿಕೊಂಡಿತ್ತು. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಟ್ವೀಟ್ ಮಾಡಿ ನಾವು ಸಬ್ಸಿಡಿ ದರದಲ್ಲಿ ರೈತರಿಗೆ ರಸಗೊಬ್ಬರ ನೀಡುತ್ತಿದ್ದೇವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರದ ಬೆಲೆ ಹೆಚ್ಚಿದ್ದರೂ ಕಡಿಮೆ ಬೆಲೆ ರೈತರಿಗೆ ಒದಗಿಸುತ್ತಿದ್ದೇವೆ ಎಂದು ಹೇಳಿಕೊಂಡಿದ್ದರು.

ಕೃಷಿ ಸಚಿವರ ಸ್ವಂತ ಜಿಲ್ಲೆ ಮೊರೆನಾದಲ್ಲಿಯೇ ರೈತರ ಮೇಲೆ ಲಾಠಿ ಚಾರ್ಜ್ ನಡೆದಿದೆ. ಮಂಗಳವಾರ ಮಧ್ಯಾಹ್ನ ಮೊರೆನಾ ಜಿಲ್ಲೆಯ ಕೈಲಾರಸ್ ಪಟ್ಟಣದಲ್ಲಿ ಸಹಕಾರಿ ಸಂಘದ ಹೊರಗೆ ಜಮಾಯಿಸಿದ ರೈತರು ಒಬ್ಬರನ್ನೊಬ್ಬರು ತಳ್ಳುವ ರೀತಿ ರೈತರು ಸರತಿ ಸಾಲಿನಲ್ಲಿ ನಿಂತಿದ್ದರು. ಸಹಕಾರಿ ಸಂಘದ ಹೊರಗೆ ಕಾಲ್ತುಳಿತದಂತಹ ಪರಿಸ್ಥಿತಿ ಇತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಪೊಲೀಸರನ್ನು ಒತ್ತಾಯಿಸಿತು. ಹಾಗಾಗಿ ಪೊಲೀಸರು ಮನಬಂದತೆ ಲಾಠಿ ಬೀಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಘಟನೆಯನ್ನು ಖಂಡಿಸಿರುವ ಕಿಸಾನ್ ಏಕ್ತಾ ಮೋರ್ಚಾ, “ಸಚಿವರು ಟ್ವಿಟರ್‌ನಲ್ಲಿ ರಸಗೊಬ್ಬರ ಚೀಲಗಳನ್ನು ವಿತರಿಸಬಹುದೆನೋ. ಏಕೆಂದರೆ ಗೊಬ್ಬರ ಪಡೆಯಲು ಸರತಿ ಸಾಲಿನಲ್ಲಿ ನಿಂತ ರೈತ ದೊಣ್ಣೆಗಳಿಂದ ಏಟು ಪಡೆಯುತ್ತಿದ್ದಾರೆ” ಎಂದು ಕಿಡಿಕಾರಿದೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರ ಕೇಳಿದ ರೈತರಿಗೆ ಲಾಠೀಚಾರ್ಜ್ ಮಾಡಲಾಗುತ್ತಿದೆ. ಬಿಜೆಪಿಯು ಸಂಪೂರ್ಣ ರೈತ ವಿರೋಧಿಯಾಗಿದೆ. ದೇಶದ ಅನ್ನದಾತ ಸ್ವತಂತ್ರ ಭಾರತದಲ್ಲಿ ಎಂದಿಗೂ ಇಂತಹ ಕ್ರೌರ್ಯವನ್ನು ಎದುರಿಸಿಲ್ಲ ಎಂದು ಹಲವು ಕಾಂಗ್ರೆಸ್ ಮುಖಂಡರು ಟ್ವೀಟ್ ಮಾಡಿದ್ದಾರೆ.

ಮಧ್ಯ ಪ್ರದೇಶದ ಮೊರೆನಾದಲ್ಲಿ ರಸಗೊಬ್ಬರ ಕೊರತೆಯನ್ನು ಎದುರಿಸುತ್ತಿರುವ ಹಸಿದ ಮತ್ತು ಬಾಯಾರಿದ ರೈತರನ್ನು ಪೊಲೀಸರು ಕ್ರೂರವಾಗಿ ಥಳಿಸಿದರು. ಬೆಳಿಗ್ಗೆಯಿಂದ ಹಸಿದ ಮತ್ತು ಬಾಯಾರಿದ ರೈತರ ಮೇಲೆ ಪೊಲೀಸರು ಲಾಠಿ ಮಳೆಗೈದರು ಎಂದು ರಾಜ ಎಂಬ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈತರ ಹತ್ಯಾಕಾಂಡಕ್ಕೆ ಪ್ರತಿರೋಧ: ಅ.18ಕ್ಕೆ ರೈಲ್ ರೋಕೋ, 26ಕ್ಕೆ ಲಕ್ನೋದಲ್ಲಿ ಮಹಾಪಂಚಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...