Homeಮುಖಪುಟಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

ಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

- Advertisement -
- Advertisement -

ದೇಶದಲ್ಲಿ ಈಗಲೂ ಚಾಲ್ತಿಯಲ್ಲಿರುವ ಜಾತಿ ತಾರತಮ್ಯದ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಅಕೌನಾ ಗ್ರಾಮ ಪಂಚಾಯತ್‌ನ ಠಾಕೂರ್ ಬಹುಸಂಖ್ಯಾತ ಪ್ರದೇಶದಲ್ಲಿ ಮೊದಲ ದಲಿತ ಮಹಿಳಾ ಸರಪಂಚರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ವರದಿಯಾಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಕೆಯನ್ನು ರಾಷ್ಟ್ರಧ್ವಜಾರೋಹಣ ಮಾಡದಂತೆ ತಡೆದಾಗ ಈ ವಿಷಯ ಸ್ವಲ್ಪ ತಡವಾಗಿಯಾದರೂ ಬೆಳಕಿಗೆ ಬಂದಿದೆ.

ದಲಿತ ಸಮುದಾಯಕ್ಕೆ ಸೇರಿದ ಮಹಿಳಾ ಸರಪಂಚ್ ಶ್ರದ್ಧಾ ಸಿಂಗ್ ಅವರು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, “ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮ ಪಂಚಾಯಿತಿಯಲ್ಲಿ ಧ್ವಜಾರೋಹಣ ಸಮಾರಂಭವನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಧ್ವಜಾರೋಹಣವನ್ನು ಸರಪಂಚರು ನೆರವೇರಿಸಬೇಕಿತ್ತು. ಆದೇಶದ ಬಗ್ಗೆ ಪಂಚಾಯತ್ ಕಾರ್ಯದರ್ಶಿ ವಿಜಯ್ ಪ್ರತಾಪ್ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಅವರು ಪಂಚಾಯತ್ ಆವರಣಕ್ಕೆ ಬರುವಷ್ಟರಲ್ಲಿ ಉಪ ಸರಪಂಚ್ ಧರ್ಮೇಂದ್ರ ಸಿಂಗ್ ಅವರು ಧ್ವಜಾರೋಹಣ ಮಾಡಿದ್ದರು” ಎಂದು ಹೇಳಿದ್ದಾರೆ.

ಈ ಘಟನೆಯು ಕೇವಲ ಮಹಿಳೆ ಎಂಬ ಕಾರಣಕ್ಕಾಗಿ ಅಲ್ಲ. ಆದರೆ, ಉದ್ದೇಶಪೂರ್ವಕವಾಗಿದೆ. ಏಕೆಂದರೆ, ತಾನು ದಲಿತ ಸಮುದಾಯಕ್ಕೆ ಸೇರಿದವಳು. ಇದು ನನ್ನ ವಿರುದ್ಧದ ಪಿತೂರಿ ಮತ್ತು ಅವಮಾನಕ್ಕೆ ಸ್ಪಷ್ಟ ಉದಾಹರಣೆ ಎಂದು ಸರ್ಪಂಚ್ ಶ್ರದ್ಧಾ ಸಿಂಗ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿಯ ‘ದಿ ಮೂಕ್ನಾಯಕ್’ ಮಾಧ್ಯಮ ಸಂಸ್ಥೆ ಪ್ರತಿನಿಯೊಂದಿಗೆ ಮಾತನಾಡಿರುವ 28 ವರ್ಷದ ಸರಪಂಚ ಶ್ರದ್ಧಾ ಸಿಂಗ್, “ಆಗಸ್ಟ್ 17 ರಂದು ಗ್ರಾಮ ಸಭೆಯ ಸಮಯದಲ್ಲಿ ಮತ್ತೆ ಅವಮಾನಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ. “ಸಭೆಯಲ್ಲಿ ನಾನು ಅವರ ಬಳಿ ಕುರ್ಚಿ ಕೇಳಿದಾಗ, ಉಪ ಸರಪಂಚ್ ಮತ್ತು ಕಾರ್ಯದರ್ಶಿ ಇಬ್ಬರೂ ಅದನ್ನು ನಿರಾಕರಿಸಿದರು. ‘ನಿಮಗೆ ಕುರ್ಚಿ ಬೇಕಾದರೆ, ಅದನ್ನು ಮನೆಯಿಂದ ತನ್ನಿ; ಇಲ್ಲದಿದ್ದರೆ, ನೆಲದ ಮೇಲೆ ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ ಎಂದರು” ಎಂದು ವಿವರಿಸಿದ್ದಾರೆ.

ತನ್ನನ್ನು ಹೀಗೆ ನಡೆಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ ಎಂದು ಶ್ರದ್ಧಾ ತಿಳಿಸಿದ್ದಾರೆ. ದಲಿತ ಮಹಿಳೆಯಾಗಿ ನಾನು ಯಾವಾಗಲೂ ಅವಮಾನ ಮತ್ತು ತಾರತಮ್ಯವನ್ನು ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಆಕೆ ಹಳ್ಳಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಪ್ರಯತ್ನಿಸಿದಾಗ, ದಾರಿಯಲ್ಲಿ ಉದ್ದೇಶಪೂರ್ವಕವಾಗಿ ಅಡೆತಡೆಗಳನ್ನು ಹಾಕಲಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಶ್ರದ್ಧಾ ಅವರು ಜುಲೈ 2022 ರಲ್ಲಿ ಈ ಗ್ರಾಮದ ಸರಪಂಚ್ ಆಗಿ ಆಯ್ಕೆಯಾದರು. ಗ್ರಾಮದಲ್ಲಿ ಸರಿಸುಮಾರು 1,600 ಮತದಾರರಿದ್ದಾರೆ. ಅವರಲ್ಲಿ ಶೇ.50 ರಷ್ಟು ಜನ ಠಾಕೂರ್ ಸಮುದಾಯದವರು; ಉಳಿದವರು ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರು. ಅವರು ಚುನಾವಣೆಯಲ್ಲಿ 58 ಮತಗಳ ಕಡಿಮೆ ಅಂತರದಿಂದ ಗೆದ್ದರು. ಆಕೆಯ ಗೆಲುವಿನಿಂದ ಕುಪಿತಗೊಂಡಿರುವ ಪ್ರಬಲ ಜಾತಿ ಜನರು ಗಲಾಟೆ ಸೃಷ್ಟಿಸಲು ಮತ್ತು ಇತರರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಶ್ರದ್ಧಾ ಹೇಳಿದರು. ಆದಾಗ್ಯೂ, ಎಸ್‌ಡಿಎಂ ಮತ್ತು ಡಿಎಂ ಮಧ್ಯಸ್ಥಿಕೆಯ ನಂತರ ಈ ವಿವಾದ ಬೂದಿ ಮುಚ್ಚಿದ ಕೆಂಡಂದಂತಿದೆ.

“ಅವರು ನಡೆಸುತ್ತಿರುವ ವರ್ತನೆಯಿಂದ ತುಂಬಾ ನೋವಾಗಿದೆ. ಆದರೆ, ನಾನು ಬಿಟ್ಟುಕೊಡಲ್ಲ. ಈ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ನನ್ನ ಪಂಚಾಯತ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಹೋರಾಡುತ್ತೇನೆ” ಎಂದು ಸರಪಂಚೆ ಶ್ರದ್ಧಾ ಪ್ರತಿಜ್ಞೆ ಮಾಡಿದರು.

ಜಿಲ್ಲಾಧಿಕಾರಿ, ಮಧ್ಯಪ್ರದೇಶದ ಸರಪಂಚ ಸಂಘ ಮತ್ತು ಪಂಚಾಯತ್ ರಾಜ್ ಕೌನ್ಸಿಲ್‌ಗೂ ಶ್ರದ್ಧಾ ದೂರು ಸಲ್ಲಿಸಿದ್ದಾರೆ. ಸೆಪ್ಟೆಂಬರ್ 5 ರಂದು ಭೋಪಾಲ್‌ನಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಅವರು ಶಿಸ್ತು ಕ್ರಮ ಮತ್ತು ಜಾತಿ ಆಧಾರಿತ ತಾರತಮ್ಯದಲ್ಲಿ ತೊಡಗಿರುವ ಅಧಿಕಾರಿಗಳನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾರೆ.

ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಮತ್ತು ದಲಿತ ಮಹಿಳಾ ಸರಪಂಚ್ ಅವರಿಗೆ ಸರಿಯಾದ ಗೌರವ ಮತ್ತು ನ್ಯಾಯ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ – ಭಾರತ್ ಏಕತಾ ಮಿಷನ್‌ನ ವಕೀಲ ವಿಜಯಕುಮಾರ್ ಆಜಾದ್, ಸಂಘಟನೆಯಿಂದ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಮನವಿ ಪತ್ರಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...