Homeಮುಖಪುಟಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

ಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

- Advertisement -
- Advertisement -

ದೇಶದಲ್ಲಿ ಈಗಲೂ ಚಾಲ್ತಿಯಲ್ಲಿರುವ ಜಾತಿ ತಾರತಮ್ಯದ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಅಕೌನಾ ಗ್ರಾಮ ಪಂಚಾಯತ್‌ನ ಠಾಕೂರ್ ಬಹುಸಂಖ್ಯಾತ ಪ್ರದೇಶದಲ್ಲಿ ಮೊದಲ ದಲಿತ ಮಹಿಳಾ ಸರಪಂಚರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ವರದಿಯಾಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಕೆಯನ್ನು ರಾಷ್ಟ್ರಧ್ವಜಾರೋಹಣ ಮಾಡದಂತೆ ತಡೆದಾಗ ಈ ವಿಷಯ ಸ್ವಲ್ಪ ತಡವಾಗಿಯಾದರೂ ಬೆಳಕಿಗೆ ಬಂದಿದೆ.

ದಲಿತ ಸಮುದಾಯಕ್ಕೆ ಸೇರಿದ ಮಹಿಳಾ ಸರಪಂಚ್ ಶ್ರದ್ಧಾ ಸಿಂಗ್ ಅವರು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, “ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮ ಪಂಚಾಯಿತಿಯಲ್ಲಿ ಧ್ವಜಾರೋಹಣ ಸಮಾರಂಭವನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಧ್ವಜಾರೋಹಣವನ್ನು ಸರಪಂಚರು ನೆರವೇರಿಸಬೇಕಿತ್ತು. ಆದೇಶದ ಬಗ್ಗೆ ಪಂಚಾಯತ್ ಕಾರ್ಯದರ್ಶಿ ವಿಜಯ್ ಪ್ರತಾಪ್ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಅವರು ಪಂಚಾಯತ್ ಆವರಣಕ್ಕೆ ಬರುವಷ್ಟರಲ್ಲಿ ಉಪ ಸರಪಂಚ್ ಧರ್ಮೇಂದ್ರ ಸಿಂಗ್ ಅವರು ಧ್ವಜಾರೋಹಣ ಮಾಡಿದ್ದರು” ಎಂದು ಹೇಳಿದ್ದಾರೆ.

ಈ ಘಟನೆಯು ಕೇವಲ ಮಹಿಳೆ ಎಂಬ ಕಾರಣಕ್ಕಾಗಿ ಅಲ್ಲ. ಆದರೆ, ಉದ್ದೇಶಪೂರ್ವಕವಾಗಿದೆ. ಏಕೆಂದರೆ, ತಾನು ದಲಿತ ಸಮುದಾಯಕ್ಕೆ ಸೇರಿದವಳು. ಇದು ನನ್ನ ವಿರುದ್ಧದ ಪಿತೂರಿ ಮತ್ತು ಅವಮಾನಕ್ಕೆ ಸ್ಪಷ್ಟ ಉದಾಹರಣೆ ಎಂದು ಸರ್ಪಂಚ್ ಶ್ರದ್ಧಾ ಸಿಂಗ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿಯ ‘ದಿ ಮೂಕ್ನಾಯಕ್’ ಮಾಧ್ಯಮ ಸಂಸ್ಥೆ ಪ್ರತಿನಿಯೊಂದಿಗೆ ಮಾತನಾಡಿರುವ 28 ವರ್ಷದ ಸರಪಂಚ ಶ್ರದ್ಧಾ ಸಿಂಗ್, “ಆಗಸ್ಟ್ 17 ರಂದು ಗ್ರಾಮ ಸಭೆಯ ಸಮಯದಲ್ಲಿ ಮತ್ತೆ ಅವಮಾನಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ. “ಸಭೆಯಲ್ಲಿ ನಾನು ಅವರ ಬಳಿ ಕುರ್ಚಿ ಕೇಳಿದಾಗ, ಉಪ ಸರಪಂಚ್ ಮತ್ತು ಕಾರ್ಯದರ್ಶಿ ಇಬ್ಬರೂ ಅದನ್ನು ನಿರಾಕರಿಸಿದರು. ‘ನಿಮಗೆ ಕುರ್ಚಿ ಬೇಕಾದರೆ, ಅದನ್ನು ಮನೆಯಿಂದ ತನ್ನಿ; ಇಲ್ಲದಿದ್ದರೆ, ನೆಲದ ಮೇಲೆ ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ ಎಂದರು” ಎಂದು ವಿವರಿಸಿದ್ದಾರೆ.

ತನ್ನನ್ನು ಹೀಗೆ ನಡೆಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ ಎಂದು ಶ್ರದ್ಧಾ ತಿಳಿಸಿದ್ದಾರೆ. ದಲಿತ ಮಹಿಳೆಯಾಗಿ ನಾನು ಯಾವಾಗಲೂ ಅವಮಾನ ಮತ್ತು ತಾರತಮ್ಯವನ್ನು ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಆಕೆ ಹಳ್ಳಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಪ್ರಯತ್ನಿಸಿದಾಗ, ದಾರಿಯಲ್ಲಿ ಉದ್ದೇಶಪೂರ್ವಕವಾಗಿ ಅಡೆತಡೆಗಳನ್ನು ಹಾಕಲಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಶ್ರದ್ಧಾ ಅವರು ಜುಲೈ 2022 ರಲ್ಲಿ ಈ ಗ್ರಾಮದ ಸರಪಂಚ್ ಆಗಿ ಆಯ್ಕೆಯಾದರು. ಗ್ರಾಮದಲ್ಲಿ ಸರಿಸುಮಾರು 1,600 ಮತದಾರರಿದ್ದಾರೆ. ಅವರಲ್ಲಿ ಶೇ.50 ರಷ್ಟು ಜನ ಠಾಕೂರ್ ಸಮುದಾಯದವರು; ಉಳಿದವರು ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರು. ಅವರು ಚುನಾವಣೆಯಲ್ಲಿ 58 ಮತಗಳ ಕಡಿಮೆ ಅಂತರದಿಂದ ಗೆದ್ದರು. ಆಕೆಯ ಗೆಲುವಿನಿಂದ ಕುಪಿತಗೊಂಡಿರುವ ಪ್ರಬಲ ಜಾತಿ ಜನರು ಗಲಾಟೆ ಸೃಷ್ಟಿಸಲು ಮತ್ತು ಇತರರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಶ್ರದ್ಧಾ ಹೇಳಿದರು. ಆದಾಗ್ಯೂ, ಎಸ್‌ಡಿಎಂ ಮತ್ತು ಡಿಎಂ ಮಧ್ಯಸ್ಥಿಕೆಯ ನಂತರ ಈ ವಿವಾದ ಬೂದಿ ಮುಚ್ಚಿದ ಕೆಂಡಂದಂತಿದೆ.

“ಅವರು ನಡೆಸುತ್ತಿರುವ ವರ್ತನೆಯಿಂದ ತುಂಬಾ ನೋವಾಗಿದೆ. ಆದರೆ, ನಾನು ಬಿಟ್ಟುಕೊಡಲ್ಲ. ಈ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ನನ್ನ ಪಂಚಾಯತ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಹೋರಾಡುತ್ತೇನೆ” ಎಂದು ಸರಪಂಚೆ ಶ್ರದ್ಧಾ ಪ್ರತಿಜ್ಞೆ ಮಾಡಿದರು.

ಜಿಲ್ಲಾಧಿಕಾರಿ, ಮಧ್ಯಪ್ರದೇಶದ ಸರಪಂಚ ಸಂಘ ಮತ್ತು ಪಂಚಾಯತ್ ರಾಜ್ ಕೌನ್ಸಿಲ್‌ಗೂ ಶ್ರದ್ಧಾ ದೂರು ಸಲ್ಲಿಸಿದ್ದಾರೆ. ಸೆಪ್ಟೆಂಬರ್ 5 ರಂದು ಭೋಪಾಲ್‌ನಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಅವರು ಶಿಸ್ತು ಕ್ರಮ ಮತ್ತು ಜಾತಿ ಆಧಾರಿತ ತಾರತಮ್ಯದಲ್ಲಿ ತೊಡಗಿರುವ ಅಧಿಕಾರಿಗಳನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾರೆ.

ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಮತ್ತು ದಲಿತ ಮಹಿಳಾ ಸರಪಂಚ್ ಅವರಿಗೆ ಸರಿಯಾದ ಗೌರವ ಮತ್ತು ನ್ಯಾಯ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ – ಭಾರತ್ ಏಕತಾ ಮಿಷನ್‌ನ ವಕೀಲ ವಿಜಯಕುಮಾರ್ ಆಜಾದ್, ಸಂಘಟನೆಯಿಂದ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಮನವಿ ಪತ್ರಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...