Homeಮುಖಪುಟಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

ಮಧ್ಯಪ್ರದೇಶ: ದಲಿತ ಸಮುದಾಯದ ಮಹಿಳಾ ಸರಪಂಚ್‌ಗೆ ಗ್ರಾಮಸಭೆಯಲ್ಲಿ ಕುರ್ಚಿ ನಿರಾಕರಣೆ

- Advertisement -
- Advertisement -

ದೇಶದಲ್ಲಿ ಈಗಲೂ ಚಾಲ್ತಿಯಲ್ಲಿರುವ ಜಾತಿ ತಾರತಮ್ಯದ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಅಕೌನಾ ಗ್ರಾಮ ಪಂಚಾಯತ್‌ನ ಠಾಕೂರ್ ಬಹುಸಂಖ್ಯಾತ ಪ್ರದೇಶದಲ್ಲಿ ಮೊದಲ ದಲಿತ ಮಹಿಳಾ ಸರಪಂಚರನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ವರದಿಯಾಗಿದೆ.

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಕೆಯನ್ನು ರಾಷ್ಟ್ರಧ್ವಜಾರೋಹಣ ಮಾಡದಂತೆ ತಡೆದಾಗ ಈ ವಿಷಯ ಸ್ವಲ್ಪ ತಡವಾಗಿಯಾದರೂ ಬೆಳಕಿಗೆ ಬಂದಿದೆ.

ದಲಿತ ಸಮುದಾಯಕ್ಕೆ ಸೇರಿದ ಮಹಿಳಾ ಸರಪಂಚ್ ಶ್ರದ್ಧಾ ಸಿಂಗ್ ಅವರು ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, “ಸ್ವಾತಂತ್ರ್ಯ ದಿನಾಚರಣೆಯಂದು ಗ್ರಾಮ ಪಂಚಾಯಿತಿಯಲ್ಲಿ ಧ್ವಜಾರೋಹಣ ಸಮಾರಂಭವನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ ಧ್ವಜಾರೋಹಣವನ್ನು ಸರಪಂಚರು ನೆರವೇರಿಸಬೇಕಿತ್ತು. ಆದೇಶದ ಬಗ್ಗೆ ಪಂಚಾಯತ್ ಕಾರ್ಯದರ್ಶಿ ವಿಜಯ್ ಪ್ರತಾಪ್ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಅವರು ಪಂಚಾಯತ್ ಆವರಣಕ್ಕೆ ಬರುವಷ್ಟರಲ್ಲಿ ಉಪ ಸರಪಂಚ್ ಧರ್ಮೇಂದ್ರ ಸಿಂಗ್ ಅವರು ಧ್ವಜಾರೋಹಣ ಮಾಡಿದ್ದರು” ಎಂದು ಹೇಳಿದ್ದಾರೆ.

ಈ ಘಟನೆಯು ಕೇವಲ ಮಹಿಳೆ ಎಂಬ ಕಾರಣಕ್ಕಾಗಿ ಅಲ್ಲ. ಆದರೆ, ಉದ್ದೇಶಪೂರ್ವಕವಾಗಿದೆ. ಏಕೆಂದರೆ, ತಾನು ದಲಿತ ಸಮುದಾಯಕ್ಕೆ ಸೇರಿದವಳು. ಇದು ನನ್ನ ವಿರುದ್ಧದ ಪಿತೂರಿ ಮತ್ತು ಅವಮಾನಕ್ಕೆ ಸ್ಪಷ್ಟ ಉದಾಹರಣೆ ಎಂದು ಸರ್ಪಂಚ್ ಶ್ರದ್ಧಾ ಸಿಂಗ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿಯ ‘ದಿ ಮೂಕ್ನಾಯಕ್’ ಮಾಧ್ಯಮ ಸಂಸ್ಥೆ ಪ್ರತಿನಿಯೊಂದಿಗೆ ಮಾತನಾಡಿರುವ 28 ವರ್ಷದ ಸರಪಂಚ ಶ್ರದ್ಧಾ ಸಿಂಗ್, “ಆಗಸ್ಟ್ 17 ರಂದು ಗ್ರಾಮ ಸಭೆಯ ಸಮಯದಲ್ಲಿ ಮತ್ತೆ ಅವಮಾನಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ. “ಸಭೆಯಲ್ಲಿ ನಾನು ಅವರ ಬಳಿ ಕುರ್ಚಿ ಕೇಳಿದಾಗ, ಉಪ ಸರಪಂಚ್ ಮತ್ತು ಕಾರ್ಯದರ್ಶಿ ಇಬ್ಬರೂ ಅದನ್ನು ನಿರಾಕರಿಸಿದರು. ‘ನಿಮಗೆ ಕುರ್ಚಿ ಬೇಕಾದರೆ, ಅದನ್ನು ಮನೆಯಿಂದ ತನ್ನಿ; ಇಲ್ಲದಿದ್ದರೆ, ನೆಲದ ಮೇಲೆ ಕುಳಿತುಕೊಳ್ಳಿ ಅಥವಾ ನಿಂತುಕೊಳ್ಳಿ ಎಂದರು” ಎಂದು ವಿವರಿಸಿದ್ದಾರೆ.

ತನ್ನನ್ನು ಹೀಗೆ ನಡೆಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ ಎಂದು ಶ್ರದ್ಧಾ ತಿಳಿಸಿದ್ದಾರೆ. ದಲಿತ ಮಹಿಳೆಯಾಗಿ ನಾನು ಯಾವಾಗಲೂ ಅವಮಾನ ಮತ್ತು ತಾರತಮ್ಯವನ್ನು ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಆಕೆ ಹಳ್ಳಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಪ್ರಯತ್ನಿಸಿದಾಗ, ದಾರಿಯಲ್ಲಿ ಉದ್ದೇಶಪೂರ್ವಕವಾಗಿ ಅಡೆತಡೆಗಳನ್ನು ಹಾಕಲಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಶ್ರದ್ಧಾ ಅವರು ಜುಲೈ 2022 ರಲ್ಲಿ ಈ ಗ್ರಾಮದ ಸರಪಂಚ್ ಆಗಿ ಆಯ್ಕೆಯಾದರು. ಗ್ರಾಮದಲ್ಲಿ ಸರಿಸುಮಾರು 1,600 ಮತದಾರರಿದ್ದಾರೆ. ಅವರಲ್ಲಿ ಶೇ.50 ರಷ್ಟು ಜನ ಠಾಕೂರ್ ಸಮುದಾಯದವರು; ಉಳಿದವರು ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರು. ಅವರು ಚುನಾವಣೆಯಲ್ಲಿ 58 ಮತಗಳ ಕಡಿಮೆ ಅಂತರದಿಂದ ಗೆದ್ದರು. ಆಕೆಯ ಗೆಲುವಿನಿಂದ ಕುಪಿತಗೊಂಡಿರುವ ಪ್ರಬಲ ಜಾತಿ ಜನರು ಗಲಾಟೆ ಸೃಷ್ಟಿಸಲು ಮತ್ತು ಇತರರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಶ್ರದ್ಧಾ ಹೇಳಿದರು. ಆದಾಗ್ಯೂ, ಎಸ್‌ಡಿಎಂ ಮತ್ತು ಡಿಎಂ ಮಧ್ಯಸ್ಥಿಕೆಯ ನಂತರ ಈ ವಿವಾದ ಬೂದಿ ಮುಚ್ಚಿದ ಕೆಂಡಂದಂತಿದೆ.

“ಅವರು ನಡೆಸುತ್ತಿರುವ ವರ್ತನೆಯಿಂದ ತುಂಬಾ ನೋವಾಗಿದೆ. ಆದರೆ, ನಾನು ಬಿಟ್ಟುಕೊಡಲ್ಲ. ಈ ತಾರತಮ್ಯ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇನೆ. ನನ್ನ ಪಂಚಾಯತ್‌ನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಹೋರಾಡುತ್ತೇನೆ” ಎಂದು ಸರಪಂಚೆ ಶ್ರದ್ಧಾ ಪ್ರತಿಜ್ಞೆ ಮಾಡಿದರು.

ಜಿಲ್ಲಾಧಿಕಾರಿ, ಮಧ್ಯಪ್ರದೇಶದ ಸರಪಂಚ ಸಂಘ ಮತ್ತು ಪಂಚಾಯತ್ ರಾಜ್ ಕೌನ್ಸಿಲ್‌ಗೂ ಶ್ರದ್ಧಾ ದೂರು ಸಲ್ಲಿಸಿದ್ದಾರೆ. ಸೆಪ್ಟೆಂಬರ್ 5 ರಂದು ಭೋಪಾಲ್‌ನಲ್ಲಿ ಸಭೆಯನ್ನು ನಿಗದಿಪಡಿಸಲಾಗಿದೆ. ಅಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಅವರು ಶಿಸ್ತು ಕ್ರಮ ಮತ್ತು ಜಾತಿ ಆಧಾರಿತ ತಾರತಮ್ಯದಲ್ಲಿ ತೊಡಗಿರುವ ಅಧಿಕಾರಿಗಳನ್ನು ವಜಾಗೊಳಿಸುವಂತೆ ಒತ್ತಾಯಿಸುತ್ತಾರೆ.

ಈ ವಿಚಾರದಲ್ಲಿ ರಾಜ್ಯ ಸರ್ಕಾರ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಯಾವ ಕ್ರಮಗಳನ್ನು ಕೈಗೊಳ್ಳುತ್ತಾರೆ ಮತ್ತು ದಲಿತ ಮಹಿಳಾ ಸರಪಂಚ್ ಅವರಿಗೆ ಸರಿಯಾದ ಗೌರವ ಮತ್ತು ನ್ಯಾಯ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ – ಭಾರತ್ ಏಕತಾ ಮಿಷನ್‌ನ ವಕೀಲ ವಿಜಯಕುಮಾರ್ ಆಜಾದ್, ಸಂಘಟನೆಯಿಂದ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಮನವಿ ಪತ್ರಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...