Homeದಲಿತ್ ಫೈಲ್ಸ್ಮಧ್ಯಪ್ರದೇಶ: ಪೊಲೀಸರ ಮುಂದೆಯೇ ದಲಿತ ಸಮುದಾಯದ ತಂದೆ-ಮಗನನ್ನು ಬೆನ್ನಟ್ಟಿ ಥಳಿಸಿದ ಗುಂಪು

ಮಧ್ಯಪ್ರದೇಶ: ಪೊಲೀಸರ ಮುಂದೆಯೇ ದಲಿತ ಸಮುದಾಯದ ತಂದೆ-ಮಗನನ್ನು ಬೆನ್ನಟ್ಟಿ ಥಳಿಸಿದ ಗುಂಪು

- Advertisement -
- Advertisement -

ಮಧ್ಯಪ್ರದೇಶದ ಸೆಹೋರ್ ಜಿಲ್ಲಾ ಆಸ್ಪತ್ರೆಯಲ್ಲಿ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ದಲಿತ ಯುವಕ ಮತ್ತು ಆತನ ತಂದೆಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ.

ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕೆಲವು ದುಷ್ಕರ್ಮಿಗಳು ಯುವಕ ಮತ್ತು ಆತನ ತಂದೆಯನ್ನು ಥಳಿಸುತ್ತಿರುವುದನ್ನು ಸೆರೆಯಾಗಿದೆ. ಗುಂಪಿನಿಂದ ಹಲ್ಲೆಗೊಳಗಾದ ನಂತರ ಚಿಕಿತ್ಸೆಗಾಗಿ ಇಬ್ಬರೂ ಆಸ್ಪತ್ರೆಗೆ ಹೋಗಿದ್ದರು. ಆರೋಪಿಗಳು ಜಿಲ್ಲಾ ಆಸ್ಪತ್ರೆವರೆಗೂ ಸಂತ್ರಸ್ತರನ್ನು ಹಿಂಬಾಲಿಸಿಕೊಂಡು ಹೋಗಿ ಅವರ ಮೇಲೆ ಮತ್ತೆ ಹಲ್ಲೆ ನಡೆಸಿದ್ದಾರೆ.

ಅಂಬೇಡ್ಕರ್ ನಗರ ಗಂಜ್ ನಿವಾಸಿ ಪ್ರವೇಶ್ ಪರಿಹಾರ್ ಎಂದು ಗುರುತಿಸಲಾದ ಬಲಿಪಶುವಿನ ಪ್ರಕಾರ, ತಡರಾತ್ರಿ ಆರೋಪಿಗಳಲ್ಲಿ ಒಬ್ಬನಾದ ದೀಪಕ್ ಪರ್ಮಾರ್ ಇದ್ದಕ್ಕಿದ್ದಂತೆ ತನ್ನ ಕಾರಿನ ಮುಂದೆ ಬಂದು ಜಗಳ ಆರಂಭಿಸಿದ್ದಾನೆ.

ಜಗಳ ಬೇಡವೆಂದು ಪರಿಹಾರ್ ಪಕ್ಕಕ್ಕೆ ಸರಿದಿದ್ದು ದೀಪಕ್ ಕೋಪಕ್ಕೆ ಕಾರಣವಾಗಿದೆ. ಆರೋಪಿಯು ಪರಿಹಾರ್‌ಗೆ ಕಪಾಳಮೋಕ್ಷ ಮಾಡಿದ್ದಾನೆ. ಕೆಲ ಹೊತ್ತಿನಲ್ಲೇ ಅವನ ಸಹಚರರು ಬಂದು ದಲಿತ ಯುವಕನನ್ನು ನಿಂದಿಸಲು ಪ್ರಾರಂಭಿಸಿದರು. ಜಗಳ ಉಲ್ಬಣಗೊಳ್ಳುವುದನ್ನು ತಪ್ಪಿಸುವ ಸಲುವಾಗಿ ಅವರು ಮನೆಗೆ ತೆರಳಿದ್ದಾರೆ. ಆದರೆ, ವಿಷಯ ಅಲ್ಲಿಗೆ ಮುಗಿಯಲಿಲ್ಲ. ಸ್ವಲ್ಪ ಸಮಯದ ನಂತರ, ದೀಪಕ್ ಮತ್ತು ಅವನ ಸ್ನೇಹಿತರು ಭೋಪಾಲ್ ನಾಕಾ ಪ್ರದೇಶದಲ್ಲಿಇರುವ ಮನೆಗೆ ತರಳಿ ಪ್ರವೇಶ್ ಮತ್ತು ಆತನ ತಂದೆ ಹರಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ.

ಗಾಯಗೊಂಡ ಇಬ್ಬರು ಚಿಕಿತ್ಸೆಗಾಗಿ ಸೆಹೋರ್‌ನ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ. ದೀಪಕ್ ಪರ್ಮಾರ್, ಭಾನು ರಾಥೋಡ್ ಮತ್ತು ನವೀನ್ ರಾಥೋಡ್ ಅವರನ್ನು ಹಿಂಬಾಲಿಸಿಕೊಂಡು ಆಸ್ಪತ್ರೆಗೆ ಬಂದರು ಎಂದು ವರದಿಯಾಗಿದೆ. ಅವರು ಪ್ರವೇಶ್ ಮತ್ತು ಅವರ ತಂದೆಯನ್ನು ಪೊಲೀಸರ ಸಮ್ಮುಖದಲ್ಲೇ ಆಸ್ಪತ್ರೆಯಲ್ಲಿ ಹಲ್ಲೆ ನಡೆಸಿದರು.

ಕೊತ್ವಾಲಿ ಪೊಲೀಸರು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಫ್‌ಐಆರ್ ದಾಖಲಿಸಲಾಗಿದೆ, ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಸಿಎಸ್‌ಪಿ ಅಭಿನಂದನಾ ಶರ್ಮಾ ದೃಢಪಡಿಸಿದ್ದಾರೆ.

ಉತ್ತರ ಪ್ರದೇಶ| ಮನೆಗೆ ನುಗ್ಗಿ ದಲಿತ ಸಹೋದರಿಯರ ಬಟ್ಟೆ ಹರಿದು ಹಲ್ಲೆ ನಡೆಸಿದ ಯುವಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...