Homeದಲಿತ್ ಫೈಲ್ಸ್ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

- Advertisement -
- Advertisement -

ಮಧ್ಯಪ್ರದೇಶದ ಛತ್ತರ್‌ಪುರ ನಗರದಲ್ಲಿ 13 ವರ್ಷದ ದಲಿತ ಬಾಲಕಿಯನ್ನು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ನಡೆದಿದೆ. ಆಗಸ್ಟ್ 30 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಬಾಬು ಖಾನ್ ಎಂಬಾತನನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸೆಪ್ಟೆಂಬರ್ 3 ರಂದು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Dalit Teen Went To File Rape Case, Allegedly Detained Overnight, Beaten

ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೊತ್ವಾಲಿ ಪೊಲೀಸ್ ಠಾಣೆಯ ಗೃಹ ಅಧಿಕಾರಿ (ಎಸ್‌ಎಚ್‌ಒ) ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ (ಸಿಡಬ್ಲ್ಯುಸಿ) ದೂರು ಬಂದಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಾಯಿಯ ಪ್ರಕಾರ, ಮಗಳು ಆಗಸ್ಟ್ 27 ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಹಿಂತಿರುಗಲಿಲ್ಲ. ಆದ್ದರಿಂದ ಬಾಲಕಿಯ ತಂದೆ ಮರುದಿನ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆಗಸ್ಟ್ 30 ರಂದು ಹಿಂತಿರುಗಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಬಾಬು ಖಾನ್ ಎಂಬಾತ ಬಲವಂತವಾಗಿ ಬಾಲಕಿಯನ್ನು ಎಳೆದೊಯ್ದು, ಅಲ್ಲಿಯೇ ಬಂಧಿಸಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿರುವ ಸಂಗತಿ ಹೊರಬಿದ್ದಿದೆ.

“ನಾವು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋಗಿದ್ದೆವು. ಇಬ್ಬರು ಪೊಲೀಸರು ನನ್ನ ಮಗಳ ಹೇಳಿಕೆಯನ್ನು ಬದಲಾಯಿಸುವಂತೆ ಒತ್ತಡ ಹೇರಿದರು.ಜೊತೆಗೆ ನನ್ನ ಮಗಳನ್ನು ಥಳಿಸಿದರು. ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ಕರೆದೊಯ್ದರು. ಒಳಗೆ ನನ್ನ ಮಗಳಿಗೆ ಒದ್ದು ಬೆಲ್ಟ್‌ಗಳಿಂದ ಹೊಡೆದರು” ಎಂದು ಸಂತ್ರಸ್ತ ಹೆಣ್ಣುಮಗಳ ತಾಯಿ ಆರೋಪಿಸಿದ್ದಾರೆ.

ಆಗಸ್ಟ್ 31ರಂದು ಮತ್ತೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲಿಸುವಂತೆ ಇನ್ಸ್‌ಪೆಕ್ಟರ್ ಯಾದವ್ ಅವರಲ್ಲಿ ಕೇಳಿದಾಗಲೂ ಯಾವುದೇ ಸ್ಪಂದನೆ ದೊರಯಲಿಲ್ಲ ಎಂದು ಅವರು ದೂರಿದ್ದಾರೆ.

ಅಂತಿಮವಾಗಿ, ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಸೇರಿಸಿಲ್ಲ ಎನ್ನಲಾಗಿದೆ.

ಎಫ್‌ಐಆರ್‌ನಲ್ಲಿ ಬಾಲಕಿಯ ವಯಸ್ಸನ್ನು 17 ವರ್ಷ ಎಂದು ನಮೂದಿಸಲಾಗಿದ್ದು, ಅಪಹರಣದ ಆರೋಪವನ್ನು ಸೇರಿಸಿಲ್ಲ.

ಸಿಡಬ್ಲ್ಯೂಸಿ ಸದಸ್ಯ ಅಫ್ಸರ್ ಜಹಾನ್ ಮಾತನಾಡಿ, “ಪೊಲೀಸರು ಅಪರಾಧಿಯನ್ನು ರಕ್ಷಿಸಲು ಮತ್ತು ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ಬದಲಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.

ಮತ್ತೊಬ್ಬ ಸಿಡಬ್ಲ್ಯೂಸಿ ಸದಸ್ಯ ಸೌರಭ್ ಭಟ್ನಾಗರ್, “13ರ ಬದಲಿಗೆ 17 ವರ್ಷ ಎಂದು ಪೊಲೀಸರು ನಮೂದಿಸಿರುವ ಕುರಿತು ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಂದ ಸ್ಪಷ್ಟನೆ ಕೇಳಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಯುಪಿ: ದಲಿತ ಬಾಲಕಿಯ ಮೇಲೆ ಬಿಸಿಯೂಟ ಎರಚಿದ ಶಿಕ್ಷಕ

ಲಖನೌ: ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...