Homeಮುಖಪುಟಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

- Advertisement -
- Advertisement -

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಅವರ ಕುಟುಂಬ ಸದಸ್ಯರು ಥಳಿಸಿ ಕೊಂದಿದ್ದಾರೆ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣದಲ್ಲಿ ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಮಧ್ಯಪ್ರದೇಶ

ರಾಜ್ಯದ ಸುಭಾಷ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಿತ ಬೋರ್‌ವೆಲ್ ಕುರಿತು ಜಗಳ ನಡೆದ ನಂತರ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್ ಮತ್ತು ಅವರ ಕೆಲವು ಕುಟುಂಬ ಸದಸ್ಯರು ನಾರದ್ ಜಾತವ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆಗೀಡಾದ ನಾರದ್ ಅವರು ಗ್ವಾಲಿಯರ್ ಜಿಲ್ಲೆಯ ನಿವಾಸಿಯಾಗಿದ್ದು, ಅವರು ಇಂದರ್‌ಗಢದಲ್ಲಿರುವ ಅವರ ತಾಯಿಯ ಚಿಕ್ಕಪ್ಪ ವಿದ್ಯಾ ಜಾತವ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಪ್ರಧಾನ ಆರೋಪಿ ಪದಮ್ ಸಿಂಗ್ ಧಕಡ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಶಿವಪುರಿ ಪೊಲೀಸ್ ಅಧೀಕ್ಷಕ ಅಮನ್ ಸಿಂಗ್ ರಾಥೋಡ್ ದಿ ಹಿಂದೂಗೆ ತಿಳಿಸಿದ್ದಾರೆ. “ತಲೆಮರೆಸಿಕೊಂಡಿರುವ ನಾಲ್ವರು ವ್ಯಕ್ತಿಗಳಿಗೆ ಬಹುಮಾನಗಳನ್ನು ಘೋಷಿಸಿದ್ದೇವೆ ಮತ್ತು ತಂಡಗಳು ಅವರನ್ನು ಹುಡುಕುತ್ತಿವೆ” ಎಂದು ಅವರು ಹೇಳಿದ್ದಾರೆ. ಒಟ್ಟು ಎಂಟು ಜನರ ವಿರುದ್ಧ ಕೊಲೆ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಥೋಡ್ ಅವರು  ಜಾತವ್ ಮತ್ತು ಧಾಕಡ್ ಕುಟುಂಬಗಳ ನಡುವೆ ನೀರಿನ ಮೂಲದ ಬಗ್ಗೆ ವಿವಾದ ನಡೆಯುತ್ತಿತ್ತು. ಬೋರ್‌ವೆಲ್‌ಗೆ ಹಣ ಕೂಡ ಹಾಕಿದ್ದರು ಎಂದು ಸಂತ್ರಸ್ತ ನಾರದ್ ಜಾತವ್ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. “ನೀರನ್ನು ಹೊಲಗಳಿಗೆ ಬಳಸಲು ಎರಡು ಕಡೆಯವರು ಮೌಖಿಕ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಮಂಗಳವಾರ ನಡೆದ ವಾಗ್ವಾದವು ಹಿಂಸಾಚಾರಕ್ಕೆ ಕಾರಣವಾಯಿತು” ಎಂದು ಎಸ್ಪಿ ಹೇಳಿದ್ದಾರೆ.

ಘಟನೆಯ ವೀಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ದಷ್ಕರ್ಮಿಗಳ ಗುಂಪು ನಾರದ್ ಜಾತವ್ ಅವರನ್ನು ದೊಣ್ಣೆಗಳು ಮತ್ತು ಲಾಠಿಗಳಿಂದ ಥಳಿಸುತ್ತಿರುವುದು ದಾಖಲಾಗಿದೆ. ಘಟನೆಯ ನಂತರ ಸಂತ್ರಸ್ತ ನಾರದ್ ಅವರನ್ನು ಶಿವಪುರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ನಾರದ್ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಸಲಾಯಿತು. ಶವಸಂಸ್ಕಾರದ ನಂತರ ಮಾತನಾಡಿದ ಮೃತನ ತಂದೆ ವಿಷ್ಣು ಜಾತವ್, ತನ್ನ ಮಗನನ್ನು ಆರೋಪಿಗಳು ಅಮಾನುಷವಾಗಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ. “ಅವನು ಕೊಲ್ಲಲ್ಪಟ್ಟ ನಂತರ ನಾನು ಇಲ್ಲಿಗೆ ಬಂದೆ. ಅವನು ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಮಾತ್ರ ಹೋಗಿದ್ದನು. ಅವರ ನಡುವಿನ ವಿವಾದ ಏನೆಂದು ನನಗೆ ತಿಳಿದಿಲ್ಲ. ಆದರೆ ಢಾಕಾಡ್‌ ಕುಟುಂಬಸ್ಥರು ಅವನನ್ನು ಹೊಡೆದು ಕೊಂದರು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಸ್ಥಳೀಯ ಪೊಲೀಸರು ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಷ್ಣು ಆರೋಪಿಸಿದ್ದಾರೆ. “ಘಟನೆಯ ಬಗ್ಗೆ ನನ್ನ ಸಂಬಂಧಿಕರು ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಆದರೆ ಅವರು ಅವರ ಮಾತನ್ನು ಕೇಳಲಿಲ್ಲ. (ನಾಲ್ವರು) ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಈಗ ಹೇಳುತ್ತಿದ್ದಾರೆ ಆದರೆ ಯಾರನ್ನೂ ಬಂಧಿಸಲಾಗಿಲ್ಲ. ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ, ”ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...