Homeಮುಖಪುಟಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

- Advertisement -
- Advertisement -

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಅವರ ಕುಟುಂಬ ಸದಸ್ಯರು ಥಳಿಸಿ ಕೊಂದಿದ್ದಾರೆ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣದಲ್ಲಿ ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಮಧ್ಯಪ್ರದೇಶ

ರಾಜ್ಯದ ಸುಭಾಷ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಿತ ಬೋರ್‌ವೆಲ್ ಕುರಿತು ಜಗಳ ನಡೆದ ನಂತರ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್ ಮತ್ತು ಅವರ ಕೆಲವು ಕುಟುಂಬ ಸದಸ್ಯರು ನಾರದ್ ಜಾತವ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆಗೀಡಾದ ನಾರದ್ ಅವರು ಗ್ವಾಲಿಯರ್ ಜಿಲ್ಲೆಯ ನಿವಾಸಿಯಾಗಿದ್ದು, ಅವರು ಇಂದರ್‌ಗಢದಲ್ಲಿರುವ ಅವರ ತಾಯಿಯ ಚಿಕ್ಕಪ್ಪ ವಿದ್ಯಾ ಜಾತವ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಪ್ರಧಾನ ಆರೋಪಿ ಪದಮ್ ಸಿಂಗ್ ಧಕಡ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಶಿವಪುರಿ ಪೊಲೀಸ್ ಅಧೀಕ್ಷಕ ಅಮನ್ ಸಿಂಗ್ ರಾಥೋಡ್ ದಿ ಹಿಂದೂಗೆ ತಿಳಿಸಿದ್ದಾರೆ. “ತಲೆಮರೆಸಿಕೊಂಡಿರುವ ನಾಲ್ವರು ವ್ಯಕ್ತಿಗಳಿಗೆ ಬಹುಮಾನಗಳನ್ನು ಘೋಷಿಸಿದ್ದೇವೆ ಮತ್ತು ತಂಡಗಳು ಅವರನ್ನು ಹುಡುಕುತ್ತಿವೆ” ಎಂದು ಅವರು ಹೇಳಿದ್ದಾರೆ. ಒಟ್ಟು ಎಂಟು ಜನರ ವಿರುದ್ಧ ಕೊಲೆ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಥೋಡ್ ಅವರು  ಜಾತವ್ ಮತ್ತು ಧಾಕಡ್ ಕುಟುಂಬಗಳ ನಡುವೆ ನೀರಿನ ಮೂಲದ ಬಗ್ಗೆ ವಿವಾದ ನಡೆಯುತ್ತಿತ್ತು. ಬೋರ್‌ವೆಲ್‌ಗೆ ಹಣ ಕೂಡ ಹಾಕಿದ್ದರು ಎಂದು ಸಂತ್ರಸ್ತ ನಾರದ್ ಜಾತವ್ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. “ನೀರನ್ನು ಹೊಲಗಳಿಗೆ ಬಳಸಲು ಎರಡು ಕಡೆಯವರು ಮೌಖಿಕ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಮಂಗಳವಾರ ನಡೆದ ವಾಗ್ವಾದವು ಹಿಂಸಾಚಾರಕ್ಕೆ ಕಾರಣವಾಯಿತು” ಎಂದು ಎಸ್ಪಿ ಹೇಳಿದ್ದಾರೆ.

ಘಟನೆಯ ವೀಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ದಷ್ಕರ್ಮಿಗಳ ಗುಂಪು ನಾರದ್ ಜಾತವ್ ಅವರನ್ನು ದೊಣ್ಣೆಗಳು ಮತ್ತು ಲಾಠಿಗಳಿಂದ ಥಳಿಸುತ್ತಿರುವುದು ದಾಖಲಾಗಿದೆ. ಘಟನೆಯ ನಂತರ ಸಂತ್ರಸ್ತ ನಾರದ್ ಅವರನ್ನು ಶಿವಪುರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ನಾರದ್ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಸಲಾಯಿತು. ಶವಸಂಸ್ಕಾರದ ನಂತರ ಮಾತನಾಡಿದ ಮೃತನ ತಂದೆ ವಿಷ್ಣು ಜಾತವ್, ತನ್ನ ಮಗನನ್ನು ಆರೋಪಿಗಳು ಅಮಾನುಷವಾಗಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ. “ಅವನು ಕೊಲ್ಲಲ್ಪಟ್ಟ ನಂತರ ನಾನು ಇಲ್ಲಿಗೆ ಬಂದೆ. ಅವನು ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಮಾತ್ರ ಹೋಗಿದ್ದನು. ಅವರ ನಡುವಿನ ವಿವಾದ ಏನೆಂದು ನನಗೆ ತಿಳಿದಿಲ್ಲ. ಆದರೆ ಢಾಕಾಡ್‌ ಕುಟುಂಬಸ್ಥರು ಅವನನ್ನು ಹೊಡೆದು ಕೊಂದರು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಸ್ಥಳೀಯ ಪೊಲೀಸರು ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಷ್ಣು ಆರೋಪಿಸಿದ್ದಾರೆ. “ಘಟನೆಯ ಬಗ್ಗೆ ನನ್ನ ಸಂಬಂಧಿಕರು ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಆದರೆ ಅವರು ಅವರ ಮಾತನ್ನು ಕೇಳಲಿಲ್ಲ. (ನಾಲ್ವರು) ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಈಗ ಹೇಳುತ್ತಿದ್ದಾರೆ ಆದರೆ ಯಾರನ್ನೂ ಬಂಧಿಸಲಾಗಿಲ್ಲ. ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ, ”ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...