Homeಮುಖಪುಟಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

- Advertisement -
- Advertisement -

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಅವರ ಕುಟುಂಬ ಸದಸ್ಯರು ಥಳಿಸಿ ಕೊಂದಿದ್ದಾರೆ ಪೊಲೀಸರು ಬುಧವಾರ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಕರಣದಲ್ಲಿ ಗ್ರಾಮದ ಸರಪಂಚ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಮಧ್ಯಪ್ರದೇಶ

ರಾಜ್ಯದ ಸುಭಾಷ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದರ್‌ಗಢ ಗ್ರಾಮದಲ್ಲಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಾದಿತ ಬೋರ್‌ವೆಲ್ ಕುರಿತು ಜಗಳ ನಡೆದ ನಂತರ ಗ್ರಾಮದ ಸರಪಂಚ್ ಪದಮ್ ಸಿಂಗ್ ಧಕಡ್ ಮತ್ತು ಅವರ ಕೆಲವು ಕುಟುಂಬ ಸದಸ್ಯರು ನಾರದ್ ಜಾತವ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆಗೀಡಾದ ನಾರದ್ ಅವರು ಗ್ವಾಲಿಯರ್ ಜಿಲ್ಲೆಯ ನಿವಾಸಿಯಾಗಿದ್ದು, ಅವರು ಇಂದರ್‌ಗಢದಲ್ಲಿರುವ ಅವರ ತಾಯಿಯ ಚಿಕ್ಕಪ್ಪ ವಿದ್ಯಾ ಜಾತವ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದಲ್ಲಿ ಪ್ರಧಾನ ಆರೋಪಿ ಪದಮ್ ಸಿಂಗ್ ಧಕಡ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬುಧವಾರ ಬಂಧಿಸಲಾಗಿದೆ ಎಂದು ಶಿವಪುರಿ ಪೊಲೀಸ್ ಅಧೀಕ್ಷಕ ಅಮನ್ ಸಿಂಗ್ ರಾಥೋಡ್ ದಿ ಹಿಂದೂಗೆ ತಿಳಿಸಿದ್ದಾರೆ. “ತಲೆಮರೆಸಿಕೊಂಡಿರುವ ನಾಲ್ವರು ವ್ಯಕ್ತಿಗಳಿಗೆ ಬಹುಮಾನಗಳನ್ನು ಘೋಷಿಸಿದ್ದೇವೆ ಮತ್ತು ತಂಡಗಳು ಅವರನ್ನು ಹುಡುಕುತ್ತಿವೆ” ಎಂದು ಅವರು ಹೇಳಿದ್ದಾರೆ. ಒಟ್ಟು ಎಂಟು ಜನರ ವಿರುದ್ಧ ಕೊಲೆ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಥೋಡ್ ಅವರು  ಜಾತವ್ ಮತ್ತು ಧಾಕಡ್ ಕುಟುಂಬಗಳ ನಡುವೆ ನೀರಿನ ಮೂಲದ ಬಗ್ಗೆ ವಿವಾದ ನಡೆಯುತ್ತಿತ್ತು. ಬೋರ್‌ವೆಲ್‌ಗೆ ಹಣ ಕೂಡ ಹಾಕಿದ್ದರು ಎಂದು ಸಂತ್ರಸ್ತ ನಾರದ್ ಜಾತವ್ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. “ನೀರನ್ನು ಹೊಲಗಳಿಗೆ ಬಳಸಲು ಎರಡು ಕಡೆಯವರು ಮೌಖಿಕ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಮಂಗಳವಾರ ನಡೆದ ವಾಗ್ವಾದವು ಹಿಂಸಾಚಾರಕ್ಕೆ ಕಾರಣವಾಯಿತು” ಎಂದು ಎಸ್ಪಿ ಹೇಳಿದ್ದಾರೆ.

ಘಟನೆಯ ವೀಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ದಷ್ಕರ್ಮಿಗಳ ಗುಂಪು ನಾರದ್ ಜಾತವ್ ಅವರನ್ನು ದೊಣ್ಣೆಗಳು ಮತ್ತು ಲಾಠಿಗಳಿಂದ ಥಳಿಸುತ್ತಿರುವುದು ದಾಖಲಾಗಿದೆ. ಘಟನೆಯ ನಂತರ ಸಂತ್ರಸ್ತ ನಾರದ್ ಅವರನ್ನು ಶಿವಪುರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ನಾರದ್ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಸಲಾಯಿತು. ಶವಸಂಸ್ಕಾರದ ನಂತರ ಮಾತನಾಡಿದ ಮೃತನ ತಂದೆ ವಿಷ್ಣು ಜಾತವ್, ತನ್ನ ಮಗನನ್ನು ಆರೋಪಿಗಳು ಅಮಾನುಷವಾಗಿ ಥಳಿಸಿದ್ದಾರೆ ಎಂದು ಹೇಳಿದ್ದಾರೆ. “ಅವನು ಕೊಲ್ಲಲ್ಪಟ್ಟ ನಂತರ ನಾನು ಇಲ್ಲಿಗೆ ಬಂದೆ. ಅವನು ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಮಾತ್ರ ಹೋಗಿದ್ದನು. ಅವರ ನಡುವಿನ ವಿವಾದ ಏನೆಂದು ನನಗೆ ತಿಳಿದಿಲ್ಲ. ಆದರೆ ಢಾಕಾಡ್‌ ಕುಟುಂಬಸ್ಥರು ಅವನನ್ನು ಹೊಡೆದು ಕೊಂದರು” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಸ್ಥಳೀಯ ಪೊಲೀಸರು ಆರಂಭದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಷ್ಣು ಆರೋಪಿಸಿದ್ದಾರೆ. “ಘಟನೆಯ ಬಗ್ಗೆ ನನ್ನ ಸಂಬಂಧಿಕರು ಪೊಲೀಸರಿಗೆ ದೂರು ನೀಡಲು ಹೋಗಿದ್ದರು. ಆದರೆ ಅವರು ಅವರ ಮಾತನ್ನು ಕೇಳಲಿಲ್ಲ. (ನಾಲ್ವರು) ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಈಗ ಹೇಳುತ್ತಿದ್ದಾರೆ ಆದರೆ ಯಾರನ್ನೂ ಬಂಧಿಸಲಾಗಿಲ್ಲ. ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ, ”ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...