Homeಮುಖಪುಟಮಧ್ಯಪ್ರದೇಶ: ಕಿರುಕುಳದ ದೂರು ನೀಡಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆಗೆ ಬೆಂಕಿ

ಮಧ್ಯಪ್ರದೇಶ: ಕಿರುಕುಳದ ದೂರು ನೀಡಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆಗೆ ಬೆಂಕಿ

- Advertisement -
- Advertisement -

ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರ 19 ವರ್ಷದ ದಲಿತ ಮಹಿಳೆ ವ್ಯಕ್ತಿಯೊಬ್ಬರ ಮೇಲೆ ಕಿರುಕುಳದ ದೂರ ದಾಖಲಿಸಿದ್ದು, ಕೆಲವೇ ದಿನಗಳಲ್ಲಿ ಆರೋಪಿಯ ಮಗ ಮಹಿಳೆಗೆ ಬೆಂಕಿ ಹಚ್ಚಿದ್ದಾನೆ. ತನ್ನ ಗ್ರಾಮದ ನಿವಾಸಿ 48 ವರ್ಷದ ಮಂಗೀಲಾಲ್ ಎಂಬಾತನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಕೆಲವು ದಿನಗಳ ನಂತರ ಶುಕ್ರವಾರ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಅಕ್ಟೋಬರ್ 7 ರಂದು ಮಹಿಳೆ ದೂರು ನೀಡಿದ್ದು, ಹೊಲದಲ್ಲಿ ಒಬ್ಬಂಟಿಯಾಗಿರುವಾಗ ಮಂಗೀಲಾಲ್ ತನ್ನ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಮಂಗೀಲಾಲ್ ಅವರನ್ನು ಅದೇ ದಿನ ಬಂಧಿಸಿ ಜೈಲಿಗೆ ಹಾಕಲಾಯಿತು. ಆದರೆ, ಅಕ್ಟೋಬರ್ 8 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಆತ ಬಿಡುಗಡೆಯಾದ ನಂತರ ಬೆದರಿಕೆ ಹಾಕಲಾಯಿತು ಎಂದು ಮಹಿಳೆಯ ಕುಟುಂಬವು ಹೇಳಿತ್ತು.

ಶುಕ್ರವಾರ ಮಂಗೀಲಾಲ್ ಅವರ ಮಗ ಅರ್ಜುನ್ ಮಹಿಳೆಯ ಮನೆಗೆ ಹೋಗಿದ್ದು, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಬಂದಿದ್ದು, ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಹಿಳೆಯನ್ನು ಇಂದೋರ್‌ನ ಆಸ್ಪತ್ರೆಗೆ ವರ್ಗಾಯಿಸುವ ಮೊದಲು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅಲ್ಲಿ ಆಕೆಯ ದೇಹದ ಶೇಕಡಾ 27 ರಷ್ಟು ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದೆ.

ಅರ್ಜುನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ರೈ ಮಾತನಾಡಿ, “ಆರೋಪಿಯನ್ನು ಬಂಧಿದಸಿ, ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ನಾವು ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಮತ್ತು ಮಹಿಳೆಯ ಹೇಳಿಕೆಯು ನಿರ್ಣಾಯಕವಾಗಿರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...