Homeಮುಖಪುಟಮಧ್ಯಪ್ರದೇಶ: ಕಿರುಕುಳದ ದೂರು ನೀಡಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆಗೆ ಬೆಂಕಿ

ಮಧ್ಯಪ್ರದೇಶ: ಕಿರುಕುಳದ ದೂರು ನೀಡಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆಗೆ ಬೆಂಕಿ

- Advertisement -
- Advertisement -

ಮಧ್ಯಪ್ರದೇಶದ ಖಾಂಡ್ವಾ ಬಳಿಯ ಹಳ್ಳಿಯೊಂದರ 19 ವರ್ಷದ ದಲಿತ ಮಹಿಳೆ ವ್ಯಕ್ತಿಯೊಬ್ಬರ ಮೇಲೆ ಕಿರುಕುಳದ ದೂರ ದಾಖಲಿಸಿದ್ದು, ಕೆಲವೇ ದಿನಗಳಲ್ಲಿ ಆರೋಪಿಯ ಮಗ ಮಹಿಳೆಗೆ ಬೆಂಕಿ ಹಚ್ಚಿದ್ದಾನೆ. ತನ್ನ ಗ್ರಾಮದ ನಿವಾಸಿ 48 ವರ್ಷದ ಮಂಗೀಲಾಲ್ ಎಂಬಾತನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಕೆಲವು ದಿನಗಳ ನಂತರ ಶುಕ್ರವಾರ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಅಕ್ಟೋಬರ್ 7 ರಂದು ಮಹಿಳೆ ದೂರು ನೀಡಿದ್ದು, ಹೊಲದಲ್ಲಿ ಒಬ್ಬಂಟಿಯಾಗಿರುವಾಗ ಮಂಗೀಲಾಲ್ ತನ್ನ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ ಎಂದು ಹೇಳಿದ್ದಾರೆ. ಮಂಗೀಲಾಲ್ ಅವರನ್ನು ಅದೇ ದಿನ ಬಂಧಿಸಿ ಜೈಲಿಗೆ ಹಾಕಲಾಯಿತು. ಆದರೆ, ಅಕ್ಟೋಬರ್ 8 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಆತ ಬಿಡುಗಡೆಯಾದ ನಂತರ ಬೆದರಿಕೆ ಹಾಕಲಾಯಿತು ಎಂದು ಮಹಿಳೆಯ ಕುಟುಂಬವು ಹೇಳಿತ್ತು.

ಶುಕ್ರವಾರ ಮಂಗೀಲಾಲ್ ಅವರ ಮಗ ಅರ್ಜುನ್ ಮಹಿಳೆಯ ಮನೆಗೆ ಹೋಗಿದ್ದು, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಆಕೆ ತಪ್ಪಿಸಿಕೊಂಡು ಬಂದಿದ್ದು, ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಹಿಳೆಯನ್ನು ಇಂದೋರ್‌ನ ಆಸ್ಪತ್ರೆಗೆ ವರ್ಗಾಯಿಸುವ ಮೊದಲು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಅಲ್ಲಿ ಆಕೆಯ ದೇಹದ ಶೇಕಡಾ 27 ರಷ್ಟು ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದೆ.

ಅರ್ಜುನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ರೈ ಮಾತನಾಡಿ, “ಆರೋಪಿಯನ್ನು ಬಂಧಿದಸಿ, ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ನಾವು ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ ಮತ್ತು ಮಹಿಳೆಯ ಹೇಳಿಕೆಯು ನಿರ್ಣಾಯಕವಾಗಿರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗೌರಿ ಲಂಕೇಶ್ ಹತ್ಯೆ ಆರೋಪಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...