Homeಮುಖಪುಟಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

ಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಜೋರಾಗುತ್ತಿದೆ. ಒಬ್ಬೊಬ್ಬರಾಗಿಯೇ ಬಂಡಾಯ ಏಳುವ ಸೂಚನೆ ಕಂಡುಬರುತ್ತಿದೆ.

ಪಕ್ಷದ ಮತ್ತೋರ್ವ ಹಿರಿಯ ನಾಯಕ, ಕಟ್ನಿ ಜಿಲ್ಲೆಯ ವಿಜಯರಾಘವಗಢ ಕ್ಷೇತ್ರದ ಮಾಜಿ ಶಾಸಕ ಧ್ರುವ ಪ್ರತಾಪ್ ಸಿಂಗ್ ಇದೀಗ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಕಳೆದ ಎಂಟು ವರ್ಷಗಳಿಂದ ಪಕ್ಷದಲ್ಲಿ ತಮ್ಮನ್ನು ದೂರವಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ದೀಪಕ್ ಜೋಶಿ (ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರಿದವರು) ಸೇರಿದಂತೆ ಹೆಚ್ಚಿನ ಅತೃಪ್ತ ಬಿಜೆಪಿ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿಷ್ಠರ ಪ್ರಭಾವ ಹೆಚ್ಚುತ್ತಿದೆ ಎಂದು ದೂಷಿಸಿದ್ದಾರೆ. ಪ್ರತಾಪ್ ಸಿಂಗ್ (2003 ರಲ್ಲಿ ವಿಜಯರಾಘವಗಢ ಕ್ಷೇತ್ರದಲ್ಲಿ ಗೆದ್ದವರು) ಇದೇ ಆರೋಪಗಳನ್ನು ಮಾಡಿದ್ದಾರೆಂದು ವರದಿಯಾಗಿದೆ.

ಕಾಂಗ್ರೆಸ್ ತೊರೆದು 2014 ರಲ್ಲಿ ಬಿಜೆಪಿ ಸೇರಿದ ಹಾಲಿ ಶಾಸಕ ಮತ್ತು ಮಾಜಿ ಸಚಿವ ಸಂಜಯ್ ಪಾಠಕ್ ಅವರ ಪ್ರಾಬಲ್ಯ ಕಟ್ನಿ ಜಿಲ್ಲೆಯಲ್ಲಿ ಇದೆ.

“ಕಳೆದ ಎಂಟು ವರ್ಷಗಳಿಂದ ಮತ್ತು ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷವು ನನ್ನನ್ನು ಯಾವುದೇ ಕೆಲಸಕ್ಕೆ ಕರೆಯಲಿಲ್ಲ. ಬಿಜೆಪಿಯವರು ನನ್ನನ್ನು ಮರೆತಂತಿದೆ. ಎಂಟು ವರ್ಷಗಳ ಹಿಂದೆ (ಸಂಜಯ್ ಪಾಠಕ್ ಬಿಜೆಪಿಗೆ ಸೇರುವ ಮೊದಲು) ನಾನು ಕಟ್ನಿ ಜಿಲ್ಲೆಯಲ್ಲಿನ ಪ್ರತಿಯೊಂದು ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೆ. ಆದರೆ ಈಗ ವಿಷಯಗಳು ಸಂಪೂರ್ಣವಾಗಿ ವಿಭಿನ್ನವಾಗಿವೆ, ಪ್ರಸ್ತುತ ಪಕ್ಷದ ರಾಜ್ಯ ಅಧ್ಯಕ್ಷ ವಿಡಿ ಶರ್ಮಾ (ಕಟ್ನಿ ಜಿಲ್ಲೆಯ ಸ್ಥಳೀಯ ಸಂಸದರೂ ಸಹ) ನನ್ನನ್ನು ಗುರುತಿಸುತ್ತಿಲ್ಲ” ಎಂದು ಸಿಂಗ್ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಪಕ್ಷದ ಉನ್ನತ ನಾಯಕತ್ವವನ್ನು ಭೇಟಿ ಮಾಡಲು ಪ್ರಸ್ತುತ ಭೋಪಾಲ್‌ನಲ್ಲಿರುವ ಸಿಂಗ್, ಕಾಂಗ್ರೆಸ್ಸೇತರ ಕುಟುಂಬದಿಂದ ಬಂದವರು ಮತ್ತು 1980ರಿಂದ ಬಿಜೆಪಿಯಲ್ಲಿದ್ದಾರೆ. ಅವರು ವಿಜಯರಾಘವ್‌ಗಢ ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸ್‌ನ ಹಾಲಿ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ಸತ್ಯೇಂದ್ರ ಪಾಠಕ್ ಅವರನ್ನು 2003ರಲ್ಲಿ ಸೋಲಿಸಿದವರು.

ಇದನ್ನೂ ಓದಿರಿ: ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

2008ರ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಪಾಠಕ್ ಅವರ ಮಗ ಸಂಜಯ್ ಪಾಠಕ್ (ಪ್ರಸ್ತುತ ಸಂಸದರಲ್ಲಿ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು) ವಿರುದ್ಧ ಸೋತರು. 2013ರಲ್ಲಿಯೂ ಗೆದ್ದಿದ್ದ ಸಂಜಯ್, ಕಾಂಗ್ರೆಸ್ ತೊರೆದು 2014ರಲ್ಲಿ ಬಿಜೆಪಿ ಸೇರಿದರು. ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು.

2014ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸಂಜಯ್ ಪಾಠಕ್ ಅವರು ಎಂಟು ವರ್ಷಗಳಿಂದ ಕಟ್ನಿ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿದ್ದಾರೆ ಎಂದು ಶಾಸಕ ಧ್ರುವ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...