Homeಮುಖಪುಟಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

ಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಜೋರಾಗುತ್ತಿದೆ. ಒಬ್ಬೊಬ್ಬರಾಗಿಯೇ ಬಂಡಾಯ ಏಳುವ ಸೂಚನೆ ಕಂಡುಬರುತ್ತಿದೆ.

ಪಕ್ಷದ ಮತ್ತೋರ್ವ ಹಿರಿಯ ನಾಯಕ, ಕಟ್ನಿ ಜಿಲ್ಲೆಯ ವಿಜಯರಾಘವಗಢ ಕ್ಷೇತ್ರದ ಮಾಜಿ ಶಾಸಕ ಧ್ರುವ ಪ್ರತಾಪ್ ಸಿಂಗ್ ಇದೀಗ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಕಳೆದ ಎಂಟು ವರ್ಷಗಳಿಂದ ಪಕ್ಷದಲ್ಲಿ ತಮ್ಮನ್ನು ದೂರವಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ದೀಪಕ್ ಜೋಶಿ (ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರಿದವರು) ಸೇರಿದಂತೆ ಹೆಚ್ಚಿನ ಅತೃಪ್ತ ಬಿಜೆಪಿ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿಷ್ಠರ ಪ್ರಭಾವ ಹೆಚ್ಚುತ್ತಿದೆ ಎಂದು ದೂಷಿಸಿದ್ದಾರೆ. ಪ್ರತಾಪ್ ಸಿಂಗ್ (2003 ರಲ್ಲಿ ವಿಜಯರಾಘವಗಢ ಕ್ಷೇತ್ರದಲ್ಲಿ ಗೆದ್ದವರು) ಇದೇ ಆರೋಪಗಳನ್ನು ಮಾಡಿದ್ದಾರೆಂದು ವರದಿಯಾಗಿದೆ.

ಕಾಂಗ್ರೆಸ್ ತೊರೆದು 2014 ರಲ್ಲಿ ಬಿಜೆಪಿ ಸೇರಿದ ಹಾಲಿ ಶಾಸಕ ಮತ್ತು ಮಾಜಿ ಸಚಿವ ಸಂಜಯ್ ಪಾಠಕ್ ಅವರ ಪ್ರಾಬಲ್ಯ ಕಟ್ನಿ ಜಿಲ್ಲೆಯಲ್ಲಿ ಇದೆ.

“ಕಳೆದ ಎಂಟು ವರ್ಷಗಳಿಂದ ಮತ್ತು ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷವು ನನ್ನನ್ನು ಯಾವುದೇ ಕೆಲಸಕ್ಕೆ ಕರೆಯಲಿಲ್ಲ. ಬಿಜೆಪಿಯವರು ನನ್ನನ್ನು ಮರೆತಂತಿದೆ. ಎಂಟು ವರ್ಷಗಳ ಹಿಂದೆ (ಸಂಜಯ್ ಪಾಠಕ್ ಬಿಜೆಪಿಗೆ ಸೇರುವ ಮೊದಲು) ನಾನು ಕಟ್ನಿ ಜಿಲ್ಲೆಯಲ್ಲಿನ ಪ್ರತಿಯೊಂದು ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೆ. ಆದರೆ ಈಗ ವಿಷಯಗಳು ಸಂಪೂರ್ಣವಾಗಿ ವಿಭಿನ್ನವಾಗಿವೆ, ಪ್ರಸ್ತುತ ಪಕ್ಷದ ರಾಜ್ಯ ಅಧ್ಯಕ್ಷ ವಿಡಿ ಶರ್ಮಾ (ಕಟ್ನಿ ಜಿಲ್ಲೆಯ ಸ್ಥಳೀಯ ಸಂಸದರೂ ಸಹ) ನನ್ನನ್ನು ಗುರುತಿಸುತ್ತಿಲ್ಲ” ಎಂದು ಸಿಂಗ್ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಪಕ್ಷದ ಉನ್ನತ ನಾಯಕತ್ವವನ್ನು ಭೇಟಿ ಮಾಡಲು ಪ್ರಸ್ತುತ ಭೋಪಾಲ್‌ನಲ್ಲಿರುವ ಸಿಂಗ್, ಕಾಂಗ್ರೆಸ್ಸೇತರ ಕುಟುಂಬದಿಂದ ಬಂದವರು ಮತ್ತು 1980ರಿಂದ ಬಿಜೆಪಿಯಲ್ಲಿದ್ದಾರೆ. ಅವರು ವಿಜಯರಾಘವ್‌ಗಢ ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸ್‌ನ ಹಾಲಿ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ಸತ್ಯೇಂದ್ರ ಪಾಠಕ್ ಅವರನ್ನು 2003ರಲ್ಲಿ ಸೋಲಿಸಿದವರು.

ಇದನ್ನೂ ಓದಿರಿ: ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

2008ರ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಪಾಠಕ್ ಅವರ ಮಗ ಸಂಜಯ್ ಪಾಠಕ್ (ಪ್ರಸ್ತುತ ಸಂಸದರಲ್ಲಿ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು) ವಿರುದ್ಧ ಸೋತರು. 2013ರಲ್ಲಿಯೂ ಗೆದ್ದಿದ್ದ ಸಂಜಯ್, ಕಾಂಗ್ರೆಸ್ ತೊರೆದು 2014ರಲ್ಲಿ ಬಿಜೆಪಿ ಸೇರಿದರು. ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು.

2014ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸಂಜಯ್ ಪಾಠಕ್ ಅವರು ಎಂಟು ವರ್ಷಗಳಿಂದ ಕಟ್ನಿ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿದ್ದಾರೆ ಎಂದು ಶಾಸಕ ಧ್ರುವ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...