Homeಮುಖಪುಟಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

ಮಧ್ಯಪ್ರದೇಶ: ಬಿಜೆಪಿಯೊಳಗೆ ಭುಗಿಲೇಳುತ್ತಿದೆ ಅಸಮಾಧಾನದ ಕಿಡಿ

- Advertisement -
- Advertisement -

ಮಧ್ಯಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ ಜೋರಾಗುತ್ತಿದೆ. ಒಬ್ಬೊಬ್ಬರಾಗಿಯೇ ಬಂಡಾಯ ಏಳುವ ಸೂಚನೆ ಕಂಡುಬರುತ್ತಿದೆ.

ಪಕ್ಷದ ಮತ್ತೋರ್ವ ಹಿರಿಯ ನಾಯಕ, ಕಟ್ನಿ ಜಿಲ್ಲೆಯ ವಿಜಯರಾಘವಗಢ ಕ್ಷೇತ್ರದ ಮಾಜಿ ಶಾಸಕ ಧ್ರುವ ಪ್ರತಾಪ್ ಸಿಂಗ್ ಇದೀಗ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, ಕಳೆದ ಎಂಟು ವರ್ಷಗಳಿಂದ ಪಕ್ಷದಲ್ಲಿ ತಮ್ಮನ್ನು ದೂರವಿಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ದೀಪಕ್ ಜೋಶಿ (ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರಿದವರು) ಸೇರಿದಂತೆ ಹೆಚ್ಚಿನ ಅತೃಪ್ತ ಬಿಜೆಪಿ ನಾಯಕರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿಷ್ಠರ ಪ್ರಭಾವ ಹೆಚ್ಚುತ್ತಿದೆ ಎಂದು ದೂಷಿಸಿದ್ದಾರೆ. ಪ್ರತಾಪ್ ಸಿಂಗ್ (2003 ರಲ್ಲಿ ವಿಜಯರಾಘವಗಢ ಕ್ಷೇತ್ರದಲ್ಲಿ ಗೆದ್ದವರು) ಇದೇ ಆರೋಪಗಳನ್ನು ಮಾಡಿದ್ದಾರೆಂದು ವರದಿಯಾಗಿದೆ.

ಕಾಂಗ್ರೆಸ್ ತೊರೆದು 2014 ರಲ್ಲಿ ಬಿಜೆಪಿ ಸೇರಿದ ಹಾಲಿ ಶಾಸಕ ಮತ್ತು ಮಾಜಿ ಸಚಿವ ಸಂಜಯ್ ಪಾಠಕ್ ಅವರ ಪ್ರಾಬಲ್ಯ ಕಟ್ನಿ ಜಿಲ್ಲೆಯಲ್ಲಿ ಇದೆ.

“ಕಳೆದ ಎಂಟು ವರ್ಷಗಳಿಂದ ಮತ್ತು ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷವು ನನ್ನನ್ನು ಯಾವುದೇ ಕೆಲಸಕ್ಕೆ ಕರೆಯಲಿಲ್ಲ. ಬಿಜೆಪಿಯವರು ನನ್ನನ್ನು ಮರೆತಂತಿದೆ. ಎಂಟು ವರ್ಷಗಳ ಹಿಂದೆ (ಸಂಜಯ್ ಪಾಠಕ್ ಬಿಜೆಪಿಗೆ ಸೇರುವ ಮೊದಲು) ನಾನು ಕಟ್ನಿ ಜಿಲ್ಲೆಯಲ್ಲಿನ ಪ್ರತಿಯೊಂದು ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೆ. ಆದರೆ ಈಗ ವಿಷಯಗಳು ಸಂಪೂರ್ಣವಾಗಿ ವಿಭಿನ್ನವಾಗಿವೆ, ಪ್ರಸ್ತುತ ಪಕ್ಷದ ರಾಜ್ಯ ಅಧ್ಯಕ್ಷ ವಿಡಿ ಶರ್ಮಾ (ಕಟ್ನಿ ಜಿಲ್ಲೆಯ ಸ್ಥಳೀಯ ಸಂಸದರೂ ಸಹ) ನನ್ನನ್ನು ಗುರುತಿಸುತ್ತಿಲ್ಲ” ಎಂದು ಸಿಂಗ್ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಪಕ್ಷದ ಉನ್ನತ ನಾಯಕತ್ವವನ್ನು ಭೇಟಿ ಮಾಡಲು ಪ್ರಸ್ತುತ ಭೋಪಾಲ್‌ನಲ್ಲಿರುವ ಸಿಂಗ್, ಕಾಂಗ್ರೆಸ್ಸೇತರ ಕುಟುಂಬದಿಂದ ಬಂದವರು ಮತ್ತು 1980ರಿಂದ ಬಿಜೆಪಿಯಲ್ಲಿದ್ದಾರೆ. ಅವರು ವಿಜಯರಾಘವ್‌ಗಢ ಕ್ಷೇತ್ರದಿಂದ ಎರಡು ಬಾರಿ ಕಾಂಗ್ರೆಸ್‌ನ ಹಾಲಿ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ಸತ್ಯೇಂದ್ರ ಪಾಠಕ್ ಅವರನ್ನು 2003ರಲ್ಲಿ ಸೋಲಿಸಿದವರು.

ಇದನ್ನೂ ಓದಿರಿ: ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ ಮನೆ ಮೇಲೆ ದಾಳಿ

2008ರ ಚುನಾವಣೆಯಲ್ಲಿ ಅದೇ ಕ್ಷೇತ್ರದಲ್ಲಿ ಪಾಠಕ್ ಅವರ ಮಗ ಸಂಜಯ್ ಪಾಠಕ್ (ಪ್ರಸ್ತುತ ಸಂಸದರಲ್ಲಿ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು) ವಿರುದ್ಧ ಸೋತರು. 2013ರಲ್ಲಿಯೂ ಗೆದ್ದಿದ್ದ ಸಂಜಯ್, ಕಾಂಗ್ರೆಸ್ ತೊರೆದು 2014ರಲ್ಲಿ ಬಿಜೆಪಿ ಸೇರಿದರು. ಹಿಂದಿನ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದರು.

2014ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸಂಜಯ್ ಪಾಠಕ್ ಅವರು ಎಂಟು ವರ್ಷಗಳಿಂದ ಕಟ್ನಿ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿದ್ದಾರೆ ಎಂದು ಶಾಸಕ ಧ್ರುವ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...