Homeಮುಖಪುಟಪರಿಶಿಷ್ಟರ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಸಿಕೊಂಡ ಮಧ್ಯ ಪ್ರದೇಶ

ಪರಿಶಿಷ್ಟರ ಕಲ್ಯಾಣ ನಿಧಿಯನ್ನು ಗೋವು, ಧಾರ್ಮಿಕ ಕೇಂದ್ರಗಳಿಗೆ ಬಳಸಿಕೊಂಡ ಮಧ್ಯ ಪ್ರದೇಶ

- Advertisement -
- Advertisement -

ಕೇಂದ್ರ ಸರ್ಕಾರದ ಅನುದಾನಿತ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಇರುವ ನಿಧಿಯನ್ನು ಮಧ್ಯ ಪ್ರದೇಶ ಸರ್ಕಾರ ಧಾರ್ಮಿಕ ಕೇಂದ್ರಗಳು ಮತ್ತು ಮ್ಯೂಸಿಯಂ ಅಭಿವೃದ್ಧಿ, ಗೋವುಗಳ ಕಲ್ಯಾಣಕ್ಕೆ ಬಳಕೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ‘ಗೋ ಸಂವರ್ಧನೆ ಮತ್ತು ಪಶು ಸಂವರ್ಧನೆ ಯೋಜನೆಯಡಿ ಗೋ ಕಲ್ಯಾಣಕ್ಕೆ ನಿಗದಿಯಾಗಿದ್ದ 252 ಕೋಟಿ ರೂಪಾಯಿಗಳಲ್ಲಿ 96.76 ಕೋಟಿ ರೂಪಾಯಿಗಳನ್ನು ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ನಿಧಿಯಿಂದ ಬಳಸಿಕೊಳ್ಳಲಾಗಿದೆ. ಗೋ ಕಲ್ಯಾಣ ನಿಧಿಯನ್ನು ಕಳೆದ ವರ್ಷಕ್ಕಿಂತ 90 ಕೋಟಿ ರೂಪಾಯಿಯಷ್ಟು ಹೆಚ್ಚಿಸಲಾಗಿದೆ.

ಅದೇ ರೀತಿ, ಆರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮೀಸಲಿಟ್ಟ 109 ಕೋಟಿ ರೂ.ಗಳಲ್ಲಿ ಅರ್ಧದಷ್ಟು ಹಣ ಕೂಡ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ನಿಧಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ದಾಖಲೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಪರಿಶಿಷ್ಟರ ಕಲ್ಯಾಣ ನಿಧಿಯನ್ನು ಇತರ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆ. ಇದರಿಂದ ಪರಿಶಿಷ್ಟರು ಕೂಡ ಪ್ರಯೋಜನ ಪಡೆಯುತ್ತಾರೆ ಎಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ವರದಿಯಲ್ಲಿ ತಿಳಿಸಿದೆ.

“ನಮ್ಮ ಬಜೆಟರಿ ವ್ಯವಸ್ಥೆಯಲ್ಲಿ ಇತರ ಯೋಜನೆಗಳಿಗೆ ಎಸ್‌ಸಿ, ಎಸ್‌ಟಿ ಉಪಯೋಜನೆ ಹಣವನ್ನು ಬಳಸಿಕೊಳ್ಳುವುದಕ್ಕೆ ಯಾವುದೇ ನಿರ್ಬಂಧ ಇಲ್ಲ” ಎಂದು ಅಧಿಕಾರಿ ಹೇಳಿದ್ದಾರೆ ಎಂದಿದೆ.

1974ರಲ್ಲಿ ಪರಿಶಿಷ್ಟ ಪಂಗಡಗಳ ಉಪಯೋಜನೆ ಜಾರಿಗೆ ಬಂದರೆ, 1979ರಲ್ಲಿ ಪರಿಶಿಷ್ಟ ಜಾತಿಗೆ ಉಪಯೋಜನೆ ಜಾರಿಗೆ ಬಂದಿದೆ. ಇದು ಸಂವಿಧಾನದ 46 ನೇ ವಿಧಿಯನ್ನು ಅನುಷ್ಠಾನಗೊಳಿಸುವ ಒಂದು ಮಾರ್ಗವಾಗಿದೆ. ರಾಜ್ಯಗಳು ಶಿಕ್ಷಣ ಮತ್ತು ಸಮಾಜದ ದುರ್ಬಲ ವರ್ಗಗಳ ಆರ್ಥಿಕ ಹಿತಾಸಕ್ತಿಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಮಧ್ಯ ಪ್ರದೇಶವು ಕರ್ನಾಟಕದ ಬಳಿಕ ಎಸ್‌ಸಿ, ಎಸ್ಟಿ ನಿಧಿಯನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಿರುವ ಎರಡನೇ ರಾಜ್ಯವಾಗಿದೆ. ಕರ್ನಾಟಕ ಸರ್ಕಾರ ಕಲ್ಯಾಣ ಯೋಜನೆಗಳಿಗಾಗಿ 14 ಸಾವಿರ ಕೋಟಿ ರೂಪಾಯಿಗಳನ್ನು ಈ ಉಪಯೋಜನೆಯಿಂದ ವರ್ಗಾಯಿಸಿತ್ತು.

ಇದನ್ನೂ ಓದಿ : ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...