Homeಮುಖಪುಟಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

- Advertisement -
- Advertisement -

ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯ ಗಂಗ್ರಾರ್ ಪ್ರದೇಶದಿಂದ ಬಂದು ಕಂಬಳಿ ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿರುವ ದಿನೇಶ್ ಸಿಲಾವತ್ ಅವರು ಕೆಲವು ದಿನಗಳಿಂದ ನೀಮುಚ್‌ನ ಮಲ್ಖೇಡಾ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು.

ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಪತ್ನಿ ರಜನಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ರಿಕ್ಷಾದಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಸ್ಪತ್ರೆಯ ಸಿಬ್ಬಂದಿ ತನ್ನ ಪತ್ನಿಯನ್ನು ರಾಜಸ್ಥಾನದ ಉದಯಪುರಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದರು ಎಂದು ಅವರು ವಿವರಿಸಿದರು.

“ನನ್ನ ನಿರಂತರ ವಿನಂತಿಗಳ ಹೊರತಾಗಿಯೂ, ಅವರು ಅಡ್ಮಿಟ್ ಮಾಡಿಕೊಳ್ಳಲು ಮನಸ್ಸು ಮಾಡಲಿಲ್ಲ. ಮಹಿಳಾ ಸಿಬ್ಬಂದಿ ನಮ್ಮನ್ನು ಆಸ್ಪತ್ರೆಯಿಂದ ತೊರೆಯುವಂತೆ ಹೇಳಿದರು. ನಾವು ಸಂಜೆ 4 ಗಂಟೆಯ ಸುಮಾರಿಗೆ ಆಸ್ಪತ್ರೆಯಿಂದ ಹೊರಬಂದಾಗ, ನನ್ನ ಹೆಂಡತಿ ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ” ಎಂದು ಸಿಲಾವತ್ ಹೇಳಿದರು.

“ಕೆಲವು ಒಳ್ಳೆಯ ಹೃದಯದ ಜನರು ನನ್ನ ಹೆಂಡತಿಗೆ ಹೆರಿಗೆ ಆಗುವಾಗ, ಆಕೆಗೆ ಸುತ್ತ ಪರದೆಗಳನ್ನು ಹಿಡಿದು ರಕ್ಷಣೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿಗೆ ಹೆರಿಗೆಯ ಬಗ್ಗೆ ತಿಳಿದಾಗ, ಅವರು ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿದರು” ಎಂದು ಸಿಲಾವತ್ ಹೇಳಿದರು.

ಹೆರಿಗೆ ವಿಭಾಗದ ಮುಖ್ಯಸ್ಥ ಡಾ.ಲಾಡ್ ಧಾಕಡ್ ಮಾತನಾಡಿ, ಅರಿವಳಿಕೆ ತಜ್ಞರು ರಜೆಯಲ್ಲಿರುವುದರಿಂದ ಅಲ್ಲಿ ಸಿಸೇರಿಯನ್ ಹೆರಿಗೆ ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲಿ ಸಾಮಾನ್ಯ ಕರ್ತವ್ಯಕ್ಕೂ ಸಾಕಷ್ಟು ವೈದ್ಯರಿಲ್ಲ ಎಂದು ಅವರು ಹೇಳಿದರು.

“ನನ್ನ ಡ್ಯೂಟಿ 2 ಗಂಟೆವರೆಗೆ ಇತ್ತು. ನಂತರ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಸಿಬ್ಬಂದಿ ನನಗೆ ತಿಳಿಸಿದಾಗ ನಾನು ಹೋಗಿ ನೋಡಿದೆ; ಆಕೆಯ ರಕ್ತದೊತ್ತಡ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರಿಗೆ ಅವಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಿ, ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಯಿತು. ಆದರೆ, ಅಪಾಯವನ್ನು ತಪ್ಪಿಸಲು ನಾವು ಅಂತಹ ಗಂಭೀರ ರೋಗಿಗಳನ್ನು ಸೇರಿಸುವುದಿಲ್ಲ” ಎಂದು ಅವರು ಹೇಳಿದರು.

ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದು, ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ನೀಮಚ್ ಜಿಲ್ಲಾಧಿಕಾರಿ ದಿನೇಶ್ ಜೈನ್ ಹೇಳಿದ್ದಾರೆ.

ಇದನ್ನೂ ಓದಿ; ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...