Homeಮುಖಪುಟಮಧ್ಯಪ್ರದೇಶದ MBBS ವಿದ್ಯಾರ್ಥಿಗಳಿಗೆ RSS ನಾಯಕರ ವಿಚಾರ ಬೋಧನೆ: ಕಾಂಗ್ರೆಸ್ ಖಂಡನೆ

ಮಧ್ಯಪ್ರದೇಶದ MBBS ವಿದ್ಯಾರ್ಥಿಗಳಿಗೆ RSS ನಾಯಕರ ವಿಚಾರ ಬೋಧನೆ: ಕಾಂಗ್ರೆಸ್ ಖಂಡನೆ

- Advertisement -
- Advertisement -

ಮಧ್ಯಪ್ರದೇಶದ ವೈದ್ಯಕೀಯ ವಿದ್ಯಾರ್ಥಿಗಳು ಇನ್ನು ಮುಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಡಾ.ಕೆ.ಬಿ.ಹೆಡ್ಗೆವಾರ್, ಭಾರತೀಯ ಜನ ಸಂಘದ ಮುಖ್ಯಸ್ಥ ದೀನ್ ದಯಾಳ್ ಉಪಾಧ್ಯಾಯ ಅವರ ಬಗ್ಗೆ ಕಲಿಯಲಿದ್ದಾರೆ ಎಂದು ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದರು.

ಆರ್‌ಎಸ್‌ಎಸ್‌ ನಾಯಕರ ವಿಚಾರಗಳನ್ನು ಪಠ್ಯದ ಭಾಗವಾಗಿ ಬೋಧಿಸುವುದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಆರ್‌ಎಸ್‌ಎಸ್ ಸಿದ್ಧಾಂತವನ್ನು ಜನರ ಮೇಲೆ ಹೇರಲು ಬಿಜೆಪಿ ಬಯಸಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಸಜ್ಜನ್ ಸಿಂಗ್ ವರ್ಮಾ ಆರೋಪಿಸಿದ್ದಾರೆ.

’ಅಫ್ಘಾನಿಸ್ತಾನದ ಅಸಹಾಯಕ ಜನರೊಂದಿಗೆ ತಾಲಿಬಾನ್ ಮಾಡುತ್ತಿರುವಂತೆ  ಬಿಜೆಪಿ ಕೂಡ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಸಜ್ಜನ್ ಸಿಂಗ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ: RSS, ವಿಎಚ್‌ಪಿ, ತಾಲಿಬಾನ್ ಒಂದೇ ಮನಸ್ಥಿತಿಯವು: ಸಾಹಿತಿ ಜಾವೇದ್ ಅಖ್ತರ್

ಸೋಮವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ಸಜ್ಜನ್ ಸಿಂಗ್ ವರ್ಮಾ, “ಆರ್‌ಎಸ್‌ಎಸ್ ತನ್ನ ಸಿದ್ಧಾಂತವನ್ನು ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹೇರುತ್ತಿರುವಂತೆಯೇ ತಾಲಿಬಾನ್ ತನ್ನ ಸಿದ್ಧಾಂತವನ್ನು ಅಫ್ಘಾನಿಸ್ತಾನದ ಅಸಹಾಯಕ ಜನರ ಮೇಲೆ ಹೇರುತ್ತಿದೆ. ರೋಗಿಗೆ ಶಸ್ತ್ರಚಿಕಿತ್ಸೆ ಮಾಡುವ ಮೊದಲು ವೈದ್ಯರು ಹೆಡ್ಗೆವಾರ್ ಮತ್ತು ಉಪಾಧ್ಯಾಯರ ಪುಸ್ತಕಗಳನ್ನು ಶಸ್ತ್ರಚಿಕಿತ್ಸೆಯ ಮೇಜಿನ ಮೇಲೆ ಇಡುತ್ತಾರೆಯೇ..?” ಎಂದು ವ್ಯಂಗ್ಯವಾಡಿದ್ದಾರೆ.

“ಹೀಗೆ ಆದರೆ ವೈದ್ಯಕೀಯ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ. ವಿದ್ಯಾರ್ಥಿಗಳು ಹೃದಯಶಾಸ್ತ್ರ, ಅಂಗರಚನಾಶಾಸ್ತ್ರ ಮತ್ತು ಮೂಳೆಶಾಸ್ತ್ರದ ವಿಷಯಗಳನ್ನು ತಮ್ಮ ಪಠ್ಯಕ್ರಮದಲ್ಲಿ ಸೇರಿಸಿಕೊಳ್ಳಬೇಕು. ಅದು ಬಿಟ್ಟು ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಭಾಗವಹಿಸದವರ ಬಗ್ಗೆ ಅಲ್ಲ” ಎಂದು ವರ್ಮಾ ಹೇಳಿದ್ದಾರೆ.

ಆರ್‌ಎಸ್‌ಎಸ್ ಸಂಸ್ಥಾಪಕ ಡಾ.ಕೆ.ಬಿ.ಹೆಡ್ಗೆವಾರ್, ಭಾರತೀಯ ಜನ ಸಂಘದ ಮುಖ್ಯಸ್ಥ ದೀನ್ ದಯಾಳ್ ಉಪಾಧ್ಯಾಯ, ಸ್ವಾಮಿ ವಿವೇಕಾನಂದ, ಡಾ. ಭೀಮರಾವ್ ಅಂಬೇಡ್ಕರ್ ಮತ್ತು ಮಹರ್ಷಿ ಚರಕ ಸೇರಿದಂತೆ ಈ ನಾಯಕರ ಅಧ್ಯಾಯಗಳನ್ನು ರಾಜ್ಯಾದ್ಯಂತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ಭಾನುವಾರ ಮಧ್ಯಪ್ರದೇಶದ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ತಿಳಿಸಿದ್ದರು.


ಇದನ್ನೂ ಓದಿ: RSS ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ವಿವಾದ ಸೃಷ್ಟಿಸಿದ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...