Homeಮುಖಪುಟಮಧ್ಯಪ್ರದೇಶ: ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

ಮಧ್ಯಪ್ರದೇಶ: ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

- Advertisement -
- Advertisement -

ತಾನು ಸಾಕಿರುವ ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ರೈತರೊಬ್ಬರು ಎಮ್ಮೆ ಜೊತೆಗೆ ಪೊಲೀಸ್ ಠಾಣೆಗೆ ಹೋಗಿ ಸಹಾಯ ಕೇಳಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ.

ಭಿಂಡ್ ಜಿಲ್ಲೆಯ ನಯಗಾಂವ್ ಗ್ರಾಮದ ರೈತ ಬಾಬುಲಾಲ್ ಜಾಟವ್ ಅವರ ಎಮ್ಮೆ ಕೆಲ ದಿನಗಳಿಂದ ಹಾಲು ನೀಡುವುದನ್ನು ನಿಲ್ಲಿಸಿತ್ತು. ಇದರಿಂದ ಬೇಸರಗೊಂಡ ರೈತ, ಎಮ್ಮೆಯನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ತೆರಳಿದ್ದಾರೆ. ತಮ್ಮ ಎಮ್ಮೆ ಹಾಲು ನೀಡಲು ನಿರಾಕರಿಸುತ್ತಿದೆ. ಅದು ಯಾವುದೋ ವಾಮಾಚಾರದ ಪ್ರಭಾವದಲ್ಲಿದೆ ಎಂದು  ಸಂಶಯವಿದೆ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

“ಕಳೆದ ಕೆಲವು ದಿನಗಳಿಂದ ತನ್ನ ಎಮ್ಮೆ ಹಾಲು ನೀಡುತ್ತಿಲ್ಲ ಎಂದು ನಯಗಾಂವ್ ಗ್ರಾಮಸ್ಥ ಬಾಬುಲಾಲ್ ಜಾಟವ್ (45) ಶನಿವಾರ ನಯಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಶಾ ಪಿಟಿಐಗೆ ತಿಳಿಸಿದ್ದಾರೆ.

 ಇದನ್ನೂ ಓದಿ: ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಕೆಲವು ಗ್ರಾಮಸ್ಥರು ತಮ್ಮ ಪ್ರಾಣಿಗೆ ವಾಮಾಚಾರ ಮಾಡಿಸಿದ್ದಾರೆ. ಹೀಗಾಗಿ ಅದು ವಾಮಾಚಾರದ ಪ್ರಭಾವಕ್ಕೆ ಒಳಗಾಗಿದೆ ಎಂದು ದೂರಿದ್ದಾರೆ. ಅರ್ಜಿ ಸಲ್ಲಿಸಿದ ಸುಮಾರು ನಾಲ್ಕು ಗಂಟೆಗಳ ನಂತರ ರೈತ ಮತ್ತೆ ತನ್ನ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿ ಮತ್ತೆ ಪೊಲೀಸರ ಸಹಾಯ ಕೇಳಿದ್ದಾನೆ ಎಂದು ಹೇಳಿದ್ದಾರೆ.

“ಯುವ ರೈತ ಮಾನಸಿಕ ಅಸ್ವಸ್ಥನಾಗಿರಲಿಲ್ಲ, ಆದರೆ ತುಂಬಾ ಮುಗ್ಧರಾಗಿದ್ದರು. ಇತ್ತೀಚೆಗಷ್ಟೇ ಎಮ್ಮೆ ಖರೀದಿಸಿದ್ದರು. ಆದರೆ ಹಾಲು ಕೊಡದಿದ್ದಕ್ಕೆ ಗ್ರಾಮದಲ್ಲಿ ಯಾರೋ ಪೊಲೀಸರ ಸಹಾಯ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಸಹಾಯದ ನಿರೀಕ್ಷೆಯಲ್ಲಿ ಪೊಲೀಸರ ಬಳಿ ಬಂದಿದ್ದಾರೆ” ಎಂದು ಅರವಿಂದ್ ಶಾ ವಿವರಿಸಿದ್ದಾರೆ.

“ರೈತರಿಗೆ ಕೆಲವು ಪಶುವೈದ್ಯರ ಸಲಹೆಯೊಂದಿಗೆ ಸಹಾಯ ಮಾಡಲು ನಾನು ಪೊಲೀಸ್ ಠಾಣೆಯ ಉಸ್ತುವಾರಿಗೆ ಹೇಳಿದ್ದೆ. ಭಾನುವಾರ ಬೆಳಗ್ಗೆ ಎಮ್ಮೆ ಹಾಲು ನೀಡಿದ್ದು, ಪೊಲೀಸರಿಗೆ ಕೃತಜ್ಞತೆ ಸಲ್ಲಿಸಲು ಇಂದು ಮತ್ತೆ ಪೊಲೀಸ್ ಠಾಣೆಗೆ ಆಗಮಿಸಿದ್ದರು” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಗಣಿ ಮತ್ತು ಗೋಮೂತ್ರ ದೇಶದ ಆರ್ಥಿಕತೆಯನ್ನು ಸಬಲಗೊಳಿಸುತ್ತದೆ: ಮಧ್ಯ ಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...