Homeಮುಖಪುಟಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

- Advertisement -
- Advertisement -

ಮಧ್ಯಪ್ರದೇಶದದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಸೇರಿದಂತೆ ಎರಡು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಅಷ್ಟೇ ಅಲ್ಲದೆ 14 ಜನರು ಸಾವನ್ನಪ್ಪಿದ್ದು, ರಾಜ್ಯದ 450 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕೊಚ್ಚಿಕೊಂಡು ಹೋಗಿರುವ ಸೇತುವೆ ರಾಜ್ಯದ ಮಹಾಕೋಷಲ್ ಪ್ರದೇಶದ ಸಿಯೋನಿ ಜಿಲ್ಲೆಯ ವೈಂಗಂಗಾ ನದಿಯ ಮೇಲೆ ನಿರ್ಮಿಸಲಾಗಿತ್ತು.

ಒಂದು ದಶಕದ ಹಿಂದೆ ನಿರ್ಮಿಸಲಾದ ಒಂದು ಸೇತುವೆ ಛಾಪಾರಾ ಮತ್ತು ಭೀಮ್‌ಗಡ್‌ನ್ನು ಸಂಪರ್ಕಿಸಿದರೆ, ಸೋನ್ವಾರಾ ಮತ್ತು ಧನೋರಾವನ್ನು ಸಂಪರ್ಕಿಸುವ ಇನ್ನೊಂದು ಸೇತುವೆ ಕೇವಲ ಎರಡು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


ಎರಡು ಸೇತುವೆಗಳನ್ನು ತಲಾ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡನೇ ಸೇತುವೆಯನ್ನು ಪ್ರಧಾನ್ ಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಲಾಗಿದೆ.

ಇದರ ನಿರ್ಮಾಣವು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭವಾಗಿ, ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿತ್ತು. ಸೇತುವೆಯನ್ನು ಇನ್ನೂ ಅಧಿಕೃತವಾಗಿ ಉದ್ಘಾಟಿಸಲಿಲ್ಲವಾದರೂ, ಅದು ಈಗಾಗಲೇ ಬಳಕೆಯಲ್ಲಿತ್ತು. ಅದೀಗ ನೀರು ಪಾಲಾಗಿದೆ.

“ಸೇತುವೆ 150 ಮೀಟರ್ ಉದ್ದ ಮತ್ತು 9.28 ಮೀಟರ್ ಎತ್ತರವಿತ್ತು. ಇದರ ನಿರ್ಮಾಣವು ಜೂನ್ 2020 ರಲ್ಲಿ ಪೂರ್ಣಗೊಂಡಿತು. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ವೈಂಗಂಗಾ ನದಿ ಮತ್ತು ಅದರ ಉಪನದಿಯಲ್ಲಿ ಪ್ರವಾಹ ಉಂಟಾಯಿತು. ಭಾರೀ ಮಳೆ ಮತ್ತು ನದಿಯ ಪ್ರವಾಹದಿಂದಾಗಿ ಭೀಮ್‌ಗಡ್ ಅಣೆಕಟ್ಟು ಪೂರ್ಣ ಸಾಮರ್ಥ್ಯಕ್ಕೆ ತುಂಬಿತು. ಆಗಸ್ಟ್ 27-28 ರ ರಾತ್ರಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿತ್ತು, ಇದರಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ” ಎಂದು ಸಿಯೋನಿ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಪಿಎಂಜಿಎಸ್ವೈ) ಜೆಪಿ ಮೆಹ್ರಾ ಹೇಳಿದ್ದಾರೆ.

ಸಿಯೋನಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ್ ಪ್ರತೀಕ್ ಎರಡು ಸೇತುವೆಗಳ ಕುಸಿತ ಮತ್ತು ಜಿಲ್ಲೆಯಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅಪಘಾತಗಳಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಡಪಡಿಸಿದರು. ಸಿಯೋನಿ ಜಿಲ್ಲಾ ಆಡಳಿತವು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಪಿಡಬ್ಲ್ಯುಡಿ ಇಲಾಖೆಯಿಂದ ಸುಮಾರು 10 ವರ್ಷಗಳ ಹಿಂದೆ ಅದೇ ವೈಂಗಂಗಾ ನದಿಯಲ್ಲಿ ನಿರ್ಮಿಸಲಾದ ಮತ್ತೊಂದು ಸೇತುವೆ ಭೀಮ್‌ಗಡ್ ಅಣೆಕಟ್ಟಿನಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದೆ, ಇದರಿಂದ ಕಳೆದ ಎರಡು ದಿನಗಳಲ್ಲಿ ಸುಮಾರು 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಈ ನಡುವೆ, ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಮಧ್ಯಪ್ರದೇಶದ ಮಹಾಕೋಷಲ್‌ ಪ್ರದೇಶದ ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

ಹೋಶಂಗನಾಡ್, ಭೋಪಾಲ್, ಚಿಂದ್ವಾರ, ಸೆಹೋರ್, ರೈಸನ್, ನರಸಿಂಗ್‌ಪುರ, ಸಿಯೋನಿ, ಬಾಲಘಾಟ್, ಹರ್ಡಾ, ವಿದಿಶಾ ಮತ್ತು ದೇವಾಸ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಹಾಗೂ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ತಂಡಗಳು ಈವರೆಗೆ ಸುಮಾರು 11,000 ಜನರನ್ನು ರಕ್ಷಿಸಿದೆ.

ರಾಜ್ಯದ ಒಟ್ಟು 251 ಜಲಾಶಯಗಳಲ್ಲಿ 120 ರಷ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಹಾಕಲು ಅಣೆಕಟ್ಟು ಗೇಟ್‌ಗಳನ್ನು ತೆರೆಯಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ತನಕ 815.2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...