Homeಮುಖಪುಟಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

- Advertisement -
- Advertisement -

ಮಧ್ಯಪ್ರದೇಶದದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಸೇರಿದಂತೆ ಎರಡು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಅಷ್ಟೇ ಅಲ್ಲದೆ 14 ಜನರು ಸಾವನ್ನಪ್ಪಿದ್ದು, ರಾಜ್ಯದ 450 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕೊಚ್ಚಿಕೊಂಡು ಹೋಗಿರುವ ಸೇತುವೆ ರಾಜ್ಯದ ಮಹಾಕೋಷಲ್ ಪ್ರದೇಶದ ಸಿಯೋನಿ ಜಿಲ್ಲೆಯ ವೈಂಗಂಗಾ ನದಿಯ ಮೇಲೆ ನಿರ್ಮಿಸಲಾಗಿತ್ತು.

ಒಂದು ದಶಕದ ಹಿಂದೆ ನಿರ್ಮಿಸಲಾದ ಒಂದು ಸೇತುವೆ ಛಾಪಾರಾ ಮತ್ತು ಭೀಮ್‌ಗಡ್‌ನ್ನು ಸಂಪರ್ಕಿಸಿದರೆ, ಸೋನ್ವಾರಾ ಮತ್ತು ಧನೋರಾವನ್ನು ಸಂಪರ್ಕಿಸುವ ಇನ್ನೊಂದು ಸೇತುವೆ ಕೇವಲ ಎರಡು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


ಎರಡು ಸೇತುವೆಗಳನ್ನು ತಲಾ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡನೇ ಸೇತುವೆಯನ್ನು ಪ್ರಧಾನ್ ಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಲಾಗಿದೆ.

ಇದರ ನಿರ್ಮಾಣವು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭವಾಗಿ, ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿತ್ತು. ಸೇತುವೆಯನ್ನು ಇನ್ನೂ ಅಧಿಕೃತವಾಗಿ ಉದ್ಘಾಟಿಸಲಿಲ್ಲವಾದರೂ, ಅದು ಈಗಾಗಲೇ ಬಳಕೆಯಲ್ಲಿತ್ತು. ಅದೀಗ ನೀರು ಪಾಲಾಗಿದೆ.

“ಸೇತುವೆ 150 ಮೀಟರ್ ಉದ್ದ ಮತ್ತು 9.28 ಮೀಟರ್ ಎತ್ತರವಿತ್ತು. ಇದರ ನಿರ್ಮಾಣವು ಜೂನ್ 2020 ರಲ್ಲಿ ಪೂರ್ಣಗೊಂಡಿತು. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ವೈಂಗಂಗಾ ನದಿ ಮತ್ತು ಅದರ ಉಪನದಿಯಲ್ಲಿ ಪ್ರವಾಹ ಉಂಟಾಯಿತು. ಭಾರೀ ಮಳೆ ಮತ್ತು ನದಿಯ ಪ್ರವಾಹದಿಂದಾಗಿ ಭೀಮ್‌ಗಡ್ ಅಣೆಕಟ್ಟು ಪೂರ್ಣ ಸಾಮರ್ಥ್ಯಕ್ಕೆ ತುಂಬಿತು. ಆಗಸ್ಟ್ 27-28 ರ ರಾತ್ರಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿತ್ತು, ಇದರಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ” ಎಂದು ಸಿಯೋನಿ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಪಿಎಂಜಿಎಸ್ವೈ) ಜೆಪಿ ಮೆಹ್ರಾ ಹೇಳಿದ್ದಾರೆ.

ಸಿಯೋನಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ್ ಪ್ರತೀಕ್ ಎರಡು ಸೇತುವೆಗಳ ಕುಸಿತ ಮತ್ತು ಜಿಲ್ಲೆಯಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅಪಘಾತಗಳಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಡಪಡಿಸಿದರು. ಸಿಯೋನಿ ಜಿಲ್ಲಾ ಆಡಳಿತವು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಪಿಡಬ್ಲ್ಯುಡಿ ಇಲಾಖೆಯಿಂದ ಸುಮಾರು 10 ವರ್ಷಗಳ ಹಿಂದೆ ಅದೇ ವೈಂಗಂಗಾ ನದಿಯಲ್ಲಿ ನಿರ್ಮಿಸಲಾದ ಮತ್ತೊಂದು ಸೇತುವೆ ಭೀಮ್‌ಗಡ್ ಅಣೆಕಟ್ಟಿನಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದೆ, ಇದರಿಂದ ಕಳೆದ ಎರಡು ದಿನಗಳಲ್ಲಿ ಸುಮಾರು 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಈ ನಡುವೆ, ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಮಧ್ಯಪ್ರದೇಶದ ಮಹಾಕೋಷಲ್‌ ಪ್ರದೇಶದ ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

ಹೋಶಂಗನಾಡ್, ಭೋಪಾಲ್, ಚಿಂದ್ವಾರ, ಸೆಹೋರ್, ರೈಸನ್, ನರಸಿಂಗ್‌ಪುರ, ಸಿಯೋನಿ, ಬಾಲಘಾಟ್, ಹರ್ಡಾ, ವಿದಿಶಾ ಮತ್ತು ದೇವಾಸ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಹಾಗೂ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ತಂಡಗಳು ಈವರೆಗೆ ಸುಮಾರು 11,000 ಜನರನ್ನು ರಕ್ಷಿಸಿದೆ.

ರಾಜ್ಯದ ಒಟ್ಟು 251 ಜಲಾಶಯಗಳಲ್ಲಿ 120 ರಷ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಹಾಕಲು ಅಣೆಕಟ್ಟು ಗೇಟ್‌ಗಳನ್ನು ತೆರೆಯಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ತನಕ 815.2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...