Homeಮುಖಪುಟಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

- Advertisement -
- Advertisement -

ಮಧ್ಯಪ್ರದೇಶದದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಸೇರಿದಂತೆ ಎರಡು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಅಷ್ಟೇ ಅಲ್ಲದೆ 14 ಜನರು ಸಾವನ್ನಪ್ಪಿದ್ದು, ರಾಜ್ಯದ 450 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕೊಚ್ಚಿಕೊಂಡು ಹೋಗಿರುವ ಸೇತುವೆ ರಾಜ್ಯದ ಮಹಾಕೋಷಲ್ ಪ್ರದೇಶದ ಸಿಯೋನಿ ಜಿಲ್ಲೆಯ ವೈಂಗಂಗಾ ನದಿಯ ಮೇಲೆ ನಿರ್ಮಿಸಲಾಗಿತ್ತು.

ಒಂದು ದಶಕದ ಹಿಂದೆ ನಿರ್ಮಿಸಲಾದ ಒಂದು ಸೇತುವೆ ಛಾಪಾರಾ ಮತ್ತು ಭೀಮ್‌ಗಡ್‌ನ್ನು ಸಂಪರ್ಕಿಸಿದರೆ, ಸೋನ್ವಾರಾ ಮತ್ತು ಧನೋರಾವನ್ನು ಸಂಪರ್ಕಿಸುವ ಇನ್ನೊಂದು ಸೇತುವೆ ಕೇವಲ ಎರಡು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


ಎರಡು ಸೇತುವೆಗಳನ್ನು ತಲಾ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡನೇ ಸೇತುವೆಯನ್ನು ಪ್ರಧಾನ್ ಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಲಾಗಿದೆ.

ಇದರ ನಿರ್ಮಾಣವು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭವಾಗಿ, ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿತ್ತು. ಸೇತುವೆಯನ್ನು ಇನ್ನೂ ಅಧಿಕೃತವಾಗಿ ಉದ್ಘಾಟಿಸಲಿಲ್ಲವಾದರೂ, ಅದು ಈಗಾಗಲೇ ಬಳಕೆಯಲ್ಲಿತ್ತು. ಅದೀಗ ನೀರು ಪಾಲಾಗಿದೆ.

“ಸೇತುವೆ 150 ಮೀಟರ್ ಉದ್ದ ಮತ್ತು 9.28 ಮೀಟರ್ ಎತ್ತರವಿತ್ತು. ಇದರ ನಿರ್ಮಾಣವು ಜೂನ್ 2020 ರಲ್ಲಿ ಪೂರ್ಣಗೊಂಡಿತು. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ವೈಂಗಂಗಾ ನದಿ ಮತ್ತು ಅದರ ಉಪನದಿಯಲ್ಲಿ ಪ್ರವಾಹ ಉಂಟಾಯಿತು. ಭಾರೀ ಮಳೆ ಮತ್ತು ನದಿಯ ಪ್ರವಾಹದಿಂದಾಗಿ ಭೀಮ್‌ಗಡ್ ಅಣೆಕಟ್ಟು ಪೂರ್ಣ ಸಾಮರ್ಥ್ಯಕ್ಕೆ ತುಂಬಿತು. ಆಗಸ್ಟ್ 27-28 ರ ರಾತ್ರಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿತ್ತು, ಇದರಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ” ಎಂದು ಸಿಯೋನಿ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಪಿಎಂಜಿಎಸ್ವೈ) ಜೆಪಿ ಮೆಹ್ರಾ ಹೇಳಿದ್ದಾರೆ.

ಸಿಯೋನಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ್ ಪ್ರತೀಕ್ ಎರಡು ಸೇತುವೆಗಳ ಕುಸಿತ ಮತ್ತು ಜಿಲ್ಲೆಯಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅಪಘಾತಗಳಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಡಪಡಿಸಿದರು. ಸಿಯೋನಿ ಜಿಲ್ಲಾ ಆಡಳಿತವು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಪಿಡಬ್ಲ್ಯುಡಿ ಇಲಾಖೆಯಿಂದ ಸುಮಾರು 10 ವರ್ಷಗಳ ಹಿಂದೆ ಅದೇ ವೈಂಗಂಗಾ ನದಿಯಲ್ಲಿ ನಿರ್ಮಿಸಲಾದ ಮತ್ತೊಂದು ಸೇತುವೆ ಭೀಮ್‌ಗಡ್ ಅಣೆಕಟ್ಟಿನಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದೆ, ಇದರಿಂದ ಕಳೆದ ಎರಡು ದಿನಗಳಲ್ಲಿ ಸುಮಾರು 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಈ ನಡುವೆ, ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಮಧ್ಯಪ್ರದೇಶದ ಮಹಾಕೋಷಲ್‌ ಪ್ರದೇಶದ ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

ಹೋಶಂಗನಾಡ್, ಭೋಪಾಲ್, ಚಿಂದ್ವಾರ, ಸೆಹೋರ್, ರೈಸನ್, ನರಸಿಂಗ್‌ಪುರ, ಸಿಯೋನಿ, ಬಾಲಘಾಟ್, ಹರ್ಡಾ, ವಿದಿಶಾ ಮತ್ತು ದೇವಾಸ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಹಾಗೂ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ತಂಡಗಳು ಈವರೆಗೆ ಸುಮಾರು 11,000 ಜನರನ್ನು ರಕ್ಷಿಸಿದೆ.

ರಾಜ್ಯದ ಒಟ್ಟು 251 ಜಲಾಶಯಗಳಲ್ಲಿ 120 ರಷ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಹಾಕಲು ಅಣೆಕಟ್ಟು ಗೇಟ್‌ಗಳನ್ನು ತೆರೆಯಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ತನಕ 815.2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...